ಮನರಂಜನೆ

ಹೈದರಾಬಾದ್‍ನಲ್ಲಿ ನಡೆದ ನೈಜ ಘಟನೆಯೇ ಈ ‘ರೂಬಿ’ಗೆ ಸ್ಫೂರ್ತಿ

ಕಳೆದ ವಾರವಷ್ಟೇ ರಾಮ್‍ ಅಭಿನಯದ ‘ದಿಲ್ಮಾರ್’ ಬಿಡುಗಡೆಯಾಯಿತು. ಈ ಚಿತ್ರದಲ್ಲಿ ರಾಮ್‍ ಅಭಿನಯದ ಬಗ್ಗೆ ಮೆಚ್ಚುಗೆ ವ್ಯಕ್ತವಾದರೂ, ಚಿತ್ರ ಅಷ್ಟೇನೂ ಸದ್ದು ಮಾಡಲಿಲ್ಲ. ಹೀಗಿರುವಾಗಲೇ ರಾಮ್‍, ‘ರೂಬಿ’ ಎಂಬ ಇನ್ನೊಂದು ಹೊಸ ಚಿತ್ರದ ಮೂಲಕ ವಾಪಸ್ಸಾಗಿದ್ದಾರೆ.

‘ರೂಬಿ’ ಚಿತ್ರವನ್ನು ರಘು ಕೋವಿ ಬರೆದು ನಿರ್ದೇಶಿಸಿದ್ದಾರೆ. ಈ ಹಿಂದೆ ‘ಕೃಷ್ಣ ಲೀಲಾ’, ‘ಮುಂಗಾರು ಮಳೆ 2’ ಚಿತ್ರಗಳಿಗೆ ಚಿತ್ರಕಥೆ, ಸಂಭಾಷಣೆ ಬರೆದಿರುವ ರಘುಗೆ ಇದು ನಿರ್ದೇಶಕರಾಗಿ ಮೊದಲ ಚಿತ್ರ. ಈ ಚಿತ್ರವನ್ನು ಹಿಂದಿಯ ‘ಓ ಮೈ ಗಾಡ್ 2’ ನಿರ್ಮಿಸಿದ ನಿಖುಲ್ ದೇಸಾಯಿ ಅವರ ಇವಾನ್ ಫಿಲ್ಮ್ಸ್ ನಿರ್ಮಿಸುತ್ತಿದ್ದು, ಶಿವರಾಜ್ ಅವರ ನವಿಶಾ ಫಿಲ್ಮ್ಸ್ ಸಹಯೋಗದೊಂದಿಗೆ ಮೊದಲ ಬಾರಿ ಕನ್ನಡ ಚಿತ್ರ ಎಂಟ್ರಿ ಕೊಡುತ್ತಿದೆ. ಚಿತ್ರಕ್ಕೆ ‘Excuse Me’ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದ ಆರ್.ಪಿ. ಪಟ್ನಾಯಕ್‍ ಸಂಗೀತ ಸಂಯೋಜಿಸುತ್ತಿದ್ದಾರೆ. ಈ ಚಿತ್ರದ ಮೋಷನ್‍ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಗಿದೆ.

ಇದನ್ನು ಓದಿ: ಜನವರಿ.23ರಂದು ‘ದುನಿಯಾ’ ವಿಜಯ್ ಅಭಿನಯದ ‘ಲ್ಯಾಂಡ್‍ಲಾರ್ಡ್’ ಬಿಡುಗಡೆ

ಹೈದರಾಬಾದ್‍ನಲ್ಲಿ ನಡೆದ ನೈಜ ಘಟನೆ ಈ ಚಿತ್ರಕ್ಕೆ ಸ್ಫೂರ್ತಿ ಎನ್ನುವ ರಘು ಕೋವಿ, ‘ಒಂದು ಪ್ರೇಮಕಥೆಯನ್ನು ಸಂಗೀತದ ಮೂಲಕ ಹೇಳಲು ಸಾಧ್ಯವಿದೆ. ಅದನ್ನು ಆರ್.ಪಿ.ಪಟ್ನಾಯಕ್ ಅವರಂತಹ ದೊಡ್ಡ ಸಂಗೀತ ನಿರ್ದೇಶಕ ಸಾಧ್ಯವಾಗಿಸಿದ್ದಾರೆ. ನಾಯಕ ರಾಮ್ ಕಥೆ ಮತ್ತು ಕಲೆ ಬಗ್ಗೆ ಆಸಕ್ತಿ ಇರುವ ವ್ಯಕ್ತಿ. ಚಿತ್ರದಲ್ಲಿ ಐದು ಹಾಡುಗಳು ಇವೆ. ಶೇ.50ರಷ್ಟು ಚಿತ್ರೀಕರಣ ಮುಕ್ತಾಯಗೊಂಡಿದೆ’ ಎಂದು ಹೇಳಿದರು.

ನಟ ರಾಮ್‍ ಮಾತನಾಡಿ, ‘ರಘು ಅವರು ಬಂದು ಕಥೆ ಹೇಳಿದಾಗ ನನಗೆ ತುಂಬಾ ಇಷ್ಟವಾಯ್ತು. ನನ್ನ ಪಾತ್ರ ಹಾಗೂ ಇಡೀ ತಂಡ ಚೆನ್ನಾಗಿದೆ. ಆರ್.ಪಿ ಅವರು ಸಂಗೀತ ಸಂಯೋಜಿಸುತ್ತಿರುವ ವಿಷಯ ಕೇಳಿ ಖುಷಿಯಾಯಿತು. ನಿರ್ಮಾಪಕರು ಬಹಳ ಪ್ರೀತಿಯಿಂದ ಚಿತ್ರಕ್ಕೆ ಏನು ಬೇಕೋ ಅವೆಲ್ಲವನ್ನೂ ಕೊಟ್ಟಿದ್ದಾರೆ’ ಎಂದರು.

ಸಂಗೀತ ನಿರ್ದೇಶಕ ಆರ್.ಪಿ. ಪಟ್ನಾಯಕ್ ಮಾತನಾಡಿ, ‘ಕಥೆ ತುಂಬಾ ಚೆನ್ನಾಗಿದೆ. ಇದು ಕನ್ನಡ ಚಿತ್ರರಂಗದಲ್ಲಿ ಅತ್ಯುತ್ತಮ ಸಿನಿಮಾ ಆಗಲಿದೆ. ರಾಮ್-ವೈಭವಿ ರಾಷ್ಟ್ರಪ್ರಶಸ್ತಿ ಸಿಗುವಷ್ಟು ಚೆನ್ನಾಗಿ ನಟಿಸಿದ್ದಾರೆ. ಈ ಸಂಗೀತಮಯ ಚಿತ್ರದ ಭಾಗವಾಗಿ ಇರುವುದು ನನಗೆ ತುಂಬಾ ಖುಷಿ ಇದೆ’ ಎಂದರು.

‘ರೂಬಿ’ ಚಿತ್ರಕ್ಕೆ ‘ರಾಜಕುಮಾರ’ ಮತ್ತು ‘ಯುವರತ್ನ’ ಚಿತ್ರಗಳ ಛಾಯಾಗ್ರಾಹಕ ವೆಂಕಟೇಶ್ ಅಂಗುರಾಜ್ ಛಾಯಾಗ್ರಹಣ ಮಾಡುತ್ತಿದ್ದು, ಸಂಕಲನದ ಜವಾಬ್ದಾರಿಯನ್ನು ಸುರೇಶ್ ಅರಸ್ ಹೊತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ: ಕನ್ನಡ ಶಾಲೆಗಳ ಉಳಿವಿಗೆ ಹೋರಾಟ: ವಾಟಾಳ್‌ ನಾಗರಾಜ್‌ ಬಂಧನ

ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…

16 mins ago

ಸಫಾರಿ ಸ್ಥಗಿತ, ಪುನರಾರಂಭ ಸಮರ್ಥಿಸಿಕೊಂಡ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…

39 mins ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ಅದ್ಧೂರಿಯಾಗಿ ಜರುಗಿದ ಅಗ್ನಿ ಕುಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…

53 mins ago

ಕೊಡಗು| 13 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಮೂರನೇ ಬಲಿ: ಕಾಫಿ ಬೆಳೆಗಾರ ದಾರುಣ ಸಾವು

ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…

1 hour ago

ಮಂಡ್ಯ ಕೋರ್ಟ್‌ಗೆ ಮತ್ತೆ ಬಾಂಬ್ ಬೆದರಿಕೆ : ಸ್ಥಳಕ್ಕೆ ಪೊಲೀಸ್-ಬಾಂಬ್ ಸ್ಕ್ವಾಡ್ ದೌಡು

ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು…

2 hours ago

ಯುದ್ಧ ನಿಲ್ಲಿಸಲು 3 ಷರತ್ತು ಮುಂದಿಟ್ಟ ಇರಾನ್‌!

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು…

2 hours ago