ಮನರಂಜನೆ

ಹೈದರಾಬಾದ್‍ನಲ್ಲಿ ನಡೆದ ನೈಜ ಘಟನೆಯೇ ಈ ‘ರೂಬಿ’ಗೆ ಸ್ಫೂರ್ತಿ

ಕಳೆದ ವಾರವಷ್ಟೇ ರಾಮ್‍ ಅಭಿನಯದ ‘ದಿಲ್ಮಾರ್’ ಬಿಡುಗಡೆಯಾಯಿತು. ಈ ಚಿತ್ರದಲ್ಲಿ ರಾಮ್‍ ಅಭಿನಯದ ಬಗ್ಗೆ ಮೆಚ್ಚುಗೆ ವ್ಯಕ್ತವಾದರೂ, ಚಿತ್ರ ಅಷ್ಟೇನೂ ಸದ್ದು ಮಾಡಲಿಲ್ಲ. ಹೀಗಿರುವಾಗಲೇ ರಾಮ್‍, ‘ರೂಬಿ’ ಎಂಬ ಇನ್ನೊಂದು ಹೊಸ ಚಿತ್ರದ ಮೂಲಕ ವಾಪಸ್ಸಾಗಿದ್ದಾರೆ.

‘ರೂಬಿ’ ಚಿತ್ರವನ್ನು ರಘು ಕೋವಿ ಬರೆದು ನಿರ್ದೇಶಿಸಿದ್ದಾರೆ. ಈ ಹಿಂದೆ ‘ಕೃಷ್ಣ ಲೀಲಾ’, ‘ಮುಂಗಾರು ಮಳೆ 2’ ಚಿತ್ರಗಳಿಗೆ ಚಿತ್ರಕಥೆ, ಸಂಭಾಷಣೆ ಬರೆದಿರುವ ರಘುಗೆ ಇದು ನಿರ್ದೇಶಕರಾಗಿ ಮೊದಲ ಚಿತ್ರ. ಈ ಚಿತ್ರವನ್ನು ಹಿಂದಿಯ ‘ಓ ಮೈ ಗಾಡ್ 2’ ನಿರ್ಮಿಸಿದ ನಿಖುಲ್ ದೇಸಾಯಿ ಅವರ ಇವಾನ್ ಫಿಲ್ಮ್ಸ್ ನಿರ್ಮಿಸುತ್ತಿದ್ದು, ಶಿವರಾಜ್ ಅವರ ನವಿಶಾ ಫಿಲ್ಮ್ಸ್ ಸಹಯೋಗದೊಂದಿಗೆ ಮೊದಲ ಬಾರಿ ಕನ್ನಡ ಚಿತ್ರ ಎಂಟ್ರಿ ಕೊಡುತ್ತಿದೆ. ಚಿತ್ರಕ್ಕೆ ‘Excuse Me’ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದ ಆರ್.ಪಿ. ಪಟ್ನಾಯಕ್‍ ಸಂಗೀತ ಸಂಯೋಜಿಸುತ್ತಿದ್ದಾರೆ. ಈ ಚಿತ್ರದ ಮೋಷನ್‍ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಗಿದೆ.

ಇದನ್ನು ಓದಿ: ಜನವರಿ.23ರಂದು ‘ದುನಿಯಾ’ ವಿಜಯ್ ಅಭಿನಯದ ‘ಲ್ಯಾಂಡ್‍ಲಾರ್ಡ್’ ಬಿಡುಗಡೆ

ಹೈದರಾಬಾದ್‍ನಲ್ಲಿ ನಡೆದ ನೈಜ ಘಟನೆ ಈ ಚಿತ್ರಕ್ಕೆ ಸ್ಫೂರ್ತಿ ಎನ್ನುವ ರಘು ಕೋವಿ, ‘ಒಂದು ಪ್ರೇಮಕಥೆಯನ್ನು ಸಂಗೀತದ ಮೂಲಕ ಹೇಳಲು ಸಾಧ್ಯವಿದೆ. ಅದನ್ನು ಆರ್.ಪಿ.ಪಟ್ನಾಯಕ್ ಅವರಂತಹ ದೊಡ್ಡ ಸಂಗೀತ ನಿರ್ದೇಶಕ ಸಾಧ್ಯವಾಗಿಸಿದ್ದಾರೆ. ನಾಯಕ ರಾಮ್ ಕಥೆ ಮತ್ತು ಕಲೆ ಬಗ್ಗೆ ಆಸಕ್ತಿ ಇರುವ ವ್ಯಕ್ತಿ. ಚಿತ್ರದಲ್ಲಿ ಐದು ಹಾಡುಗಳು ಇವೆ. ಶೇ.50ರಷ್ಟು ಚಿತ್ರೀಕರಣ ಮುಕ್ತಾಯಗೊಂಡಿದೆ’ ಎಂದು ಹೇಳಿದರು.

ನಟ ರಾಮ್‍ ಮಾತನಾಡಿ, ‘ರಘು ಅವರು ಬಂದು ಕಥೆ ಹೇಳಿದಾಗ ನನಗೆ ತುಂಬಾ ಇಷ್ಟವಾಯ್ತು. ನನ್ನ ಪಾತ್ರ ಹಾಗೂ ಇಡೀ ತಂಡ ಚೆನ್ನಾಗಿದೆ. ಆರ್.ಪಿ ಅವರು ಸಂಗೀತ ಸಂಯೋಜಿಸುತ್ತಿರುವ ವಿಷಯ ಕೇಳಿ ಖುಷಿಯಾಯಿತು. ನಿರ್ಮಾಪಕರು ಬಹಳ ಪ್ರೀತಿಯಿಂದ ಚಿತ್ರಕ್ಕೆ ಏನು ಬೇಕೋ ಅವೆಲ್ಲವನ್ನೂ ಕೊಟ್ಟಿದ್ದಾರೆ’ ಎಂದರು.

ಸಂಗೀತ ನಿರ್ದೇಶಕ ಆರ್.ಪಿ. ಪಟ್ನಾಯಕ್ ಮಾತನಾಡಿ, ‘ಕಥೆ ತುಂಬಾ ಚೆನ್ನಾಗಿದೆ. ಇದು ಕನ್ನಡ ಚಿತ್ರರಂಗದಲ್ಲಿ ಅತ್ಯುತ್ತಮ ಸಿನಿಮಾ ಆಗಲಿದೆ. ರಾಮ್-ವೈಭವಿ ರಾಷ್ಟ್ರಪ್ರಶಸ್ತಿ ಸಿಗುವಷ್ಟು ಚೆನ್ನಾಗಿ ನಟಿಸಿದ್ದಾರೆ. ಈ ಸಂಗೀತಮಯ ಚಿತ್ರದ ಭಾಗವಾಗಿ ಇರುವುದು ನನಗೆ ತುಂಬಾ ಖುಷಿ ಇದೆ’ ಎಂದರು.

‘ರೂಬಿ’ ಚಿತ್ರಕ್ಕೆ ‘ರಾಜಕುಮಾರ’ ಮತ್ತು ‘ಯುವರತ್ನ’ ಚಿತ್ರಗಳ ಛಾಯಾಗ್ರಾಹಕ ವೆಂಕಟೇಶ್ ಅಂಗುರಾಜ್ ಛಾಯಾಗ್ರಹಣ ಮಾಡುತ್ತಿದ್ದು, ಸಂಕಲನದ ಜವಾಬ್ದಾರಿಯನ್ನು ಸುರೇಶ್ ಅರಸ್ ಹೊತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

7 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

7 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

8 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

9 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

10 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

11 hours ago