ಮನರಂಜನೆ

ಹೈದರಾಬಾದ್‍ನಲ್ಲಿ ನಡೆದ ನೈಜ ಘಟನೆಯೇ ಈ ‘ರೂಬಿ’ಗೆ ಸ್ಫೂರ್ತಿ

ಕಳೆದ ವಾರವಷ್ಟೇ ರಾಮ್‍ ಅಭಿನಯದ ‘ದಿಲ್ಮಾರ್’ ಬಿಡುಗಡೆಯಾಯಿತು. ಈ ಚಿತ್ರದಲ್ಲಿ ರಾಮ್‍ ಅಭಿನಯದ ಬಗ್ಗೆ ಮೆಚ್ಚುಗೆ ವ್ಯಕ್ತವಾದರೂ, ಚಿತ್ರ ಅಷ್ಟೇನೂ ಸದ್ದು ಮಾಡಲಿಲ್ಲ. ಹೀಗಿರುವಾಗಲೇ ರಾಮ್‍, ‘ರೂಬಿ’ ಎಂಬ ಇನ್ನೊಂದು ಹೊಸ ಚಿತ್ರದ ಮೂಲಕ ವಾಪಸ್ಸಾಗಿದ್ದಾರೆ.

‘ರೂಬಿ’ ಚಿತ್ರವನ್ನು ರಘು ಕೋವಿ ಬರೆದು ನಿರ್ದೇಶಿಸಿದ್ದಾರೆ. ಈ ಹಿಂದೆ ‘ಕೃಷ್ಣ ಲೀಲಾ’, ‘ಮುಂಗಾರು ಮಳೆ 2’ ಚಿತ್ರಗಳಿಗೆ ಚಿತ್ರಕಥೆ, ಸಂಭಾಷಣೆ ಬರೆದಿರುವ ರಘುಗೆ ಇದು ನಿರ್ದೇಶಕರಾಗಿ ಮೊದಲ ಚಿತ್ರ. ಈ ಚಿತ್ರವನ್ನು ಹಿಂದಿಯ ‘ಓ ಮೈ ಗಾಡ್ 2’ ನಿರ್ಮಿಸಿದ ನಿಖುಲ್ ದೇಸಾಯಿ ಅವರ ಇವಾನ್ ಫಿಲ್ಮ್ಸ್ ನಿರ್ಮಿಸುತ್ತಿದ್ದು, ಶಿವರಾಜ್ ಅವರ ನವಿಶಾ ಫಿಲ್ಮ್ಸ್ ಸಹಯೋಗದೊಂದಿಗೆ ಮೊದಲ ಬಾರಿ ಕನ್ನಡ ಚಿತ್ರ ಎಂಟ್ರಿ ಕೊಡುತ್ತಿದೆ. ಚಿತ್ರಕ್ಕೆ ‘Excuse Me’ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದ ಆರ್.ಪಿ. ಪಟ್ನಾಯಕ್‍ ಸಂಗೀತ ಸಂಯೋಜಿಸುತ್ತಿದ್ದಾರೆ. ಈ ಚಿತ್ರದ ಮೋಷನ್‍ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಗಿದೆ.

ಇದನ್ನು ಓದಿ: ಜನವರಿ.23ರಂದು ‘ದುನಿಯಾ’ ವಿಜಯ್ ಅಭಿನಯದ ‘ಲ್ಯಾಂಡ್‍ಲಾರ್ಡ್’ ಬಿಡುಗಡೆ

ಹೈದರಾಬಾದ್‍ನಲ್ಲಿ ನಡೆದ ನೈಜ ಘಟನೆ ಈ ಚಿತ್ರಕ್ಕೆ ಸ್ಫೂರ್ತಿ ಎನ್ನುವ ರಘು ಕೋವಿ, ‘ಒಂದು ಪ್ರೇಮಕಥೆಯನ್ನು ಸಂಗೀತದ ಮೂಲಕ ಹೇಳಲು ಸಾಧ್ಯವಿದೆ. ಅದನ್ನು ಆರ್.ಪಿ.ಪಟ್ನಾಯಕ್ ಅವರಂತಹ ದೊಡ್ಡ ಸಂಗೀತ ನಿರ್ದೇಶಕ ಸಾಧ್ಯವಾಗಿಸಿದ್ದಾರೆ. ನಾಯಕ ರಾಮ್ ಕಥೆ ಮತ್ತು ಕಲೆ ಬಗ್ಗೆ ಆಸಕ್ತಿ ಇರುವ ವ್ಯಕ್ತಿ. ಚಿತ್ರದಲ್ಲಿ ಐದು ಹಾಡುಗಳು ಇವೆ. ಶೇ.50ರಷ್ಟು ಚಿತ್ರೀಕರಣ ಮುಕ್ತಾಯಗೊಂಡಿದೆ’ ಎಂದು ಹೇಳಿದರು.

ನಟ ರಾಮ್‍ ಮಾತನಾಡಿ, ‘ರಘು ಅವರು ಬಂದು ಕಥೆ ಹೇಳಿದಾಗ ನನಗೆ ತುಂಬಾ ಇಷ್ಟವಾಯ್ತು. ನನ್ನ ಪಾತ್ರ ಹಾಗೂ ಇಡೀ ತಂಡ ಚೆನ್ನಾಗಿದೆ. ಆರ್.ಪಿ ಅವರು ಸಂಗೀತ ಸಂಯೋಜಿಸುತ್ತಿರುವ ವಿಷಯ ಕೇಳಿ ಖುಷಿಯಾಯಿತು. ನಿರ್ಮಾಪಕರು ಬಹಳ ಪ್ರೀತಿಯಿಂದ ಚಿತ್ರಕ್ಕೆ ಏನು ಬೇಕೋ ಅವೆಲ್ಲವನ್ನೂ ಕೊಟ್ಟಿದ್ದಾರೆ’ ಎಂದರು.

ಸಂಗೀತ ನಿರ್ದೇಶಕ ಆರ್.ಪಿ. ಪಟ್ನಾಯಕ್ ಮಾತನಾಡಿ, ‘ಕಥೆ ತುಂಬಾ ಚೆನ್ನಾಗಿದೆ. ಇದು ಕನ್ನಡ ಚಿತ್ರರಂಗದಲ್ಲಿ ಅತ್ಯುತ್ತಮ ಸಿನಿಮಾ ಆಗಲಿದೆ. ರಾಮ್-ವೈಭವಿ ರಾಷ್ಟ್ರಪ್ರಶಸ್ತಿ ಸಿಗುವಷ್ಟು ಚೆನ್ನಾಗಿ ನಟಿಸಿದ್ದಾರೆ. ಈ ಸಂಗೀತಮಯ ಚಿತ್ರದ ಭಾಗವಾಗಿ ಇರುವುದು ನನಗೆ ತುಂಬಾ ಖುಷಿ ಇದೆ’ ಎಂದರು.

‘ರೂಬಿ’ ಚಿತ್ರಕ್ಕೆ ‘ರಾಜಕುಮಾರ’ ಮತ್ತು ‘ಯುವರತ್ನ’ ಚಿತ್ರಗಳ ಛಾಯಾಗ್ರಾಹಕ ವೆಂಕಟೇಶ್ ಅಂಗುರಾಜ್ ಛಾಯಾಗ್ರಹಣ ಮಾಡುತ್ತಿದ್ದು, ಸಂಕಲನದ ಜವಾಬ್ದಾರಿಯನ್ನು ಸುರೇಶ್ ಅರಸ್ ಹೊತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

10 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

10 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

21 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

21 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

21 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

21 hours ago