ರಿಷಿ ಅಭಿನಯದ ‘ರುದ್ರ ಗರುಡ ಪುರಾಣ’ ಚಿತ್ರವು ಜ. 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಧನಂಜಯ್ ಈ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.
ಮೊದಲು ಮಾತನಾಡಿದ ಧನಂಜಯ್, ರಿಷಿ ನನ್ನ ಕಾಲೇಜು ಹಾಗೂ ರಂಗಭೂಮಿ ದಿನಗಳ ಗೆಳೆಯ. ನಿರ್ದೇಶಕರು ಬಹು ದಿನಗಳ ಪರಿಚಯ. ‘ರುದ್ರ ಗರುಡ ಪುರಾಣ’ ಟ್ರೇಲರ್ ವಿಭಿನ್ನವಾಗಿದೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ’ ಎಂದು ನಟ ಧನಂಜಯ ಹಾರೈಸಿದರು.
ಇನ್ನೂ ಹೆಚ್ಚುಹೆಚ್ಚು ಸಿನಿಮಾಗಳನ್ನು ಮಾಡಿ ಎಂದು ಹಲವರು ಹೇಳುತ್ತಾರೆ. ನನಗೆ ಹೆಚ್ಚು ಸಿನಿಮಾಗಳನ್ನು ಮಾಡದಿದ್ದರೂ ಪರವಾಗಿಲ್ಲ, ಮಾಡಿದ ಚಿತ್ರಗಳು ಚೆನ್ನಾಗಿರಬೇಕು. ಜನ ನೋಡಿದರೆ, ಚೆನ್ನಾಗಿದೆ ಎಂದು ಹೇಳಬೇಕು ಎಂಬಾಸೆ. ಈ ಚಿತ್ರದಲ್ಲಿ ಒಂದು ಅದ್ಭುತವಾದ ತಂಡ ಸಿಕ್ಕಿದೆ. ಈ ತರಹದ ತಂಡ ಸಿಗುವುದು ಕಡಿಮೆ. ನಿರ್ದೇಶಕರಿಗೆ ವಿಷನ್ ಇದೆ. ಯಾಕೆ ಈ ಸಿನಿಮಾ ಮಾಡುತ್ತಿದ್ದೇನೆ ಎಂಬ ಕ್ಲಾರಿಟಿ ಇದೆ. ಪ್ರತಿ ದೃಶ್ಯದ ಬಗ್ಗೆಯೂ ಅವರಿಗೆ ಕ್ಲಾರಿಟಿ ಇದೆ. ಚಿತ್ರ ಚೆನ್ನಾಗಿ ಮೂಡಿಬರುವುದಕ್ಕೆ ನಿರ್ಮಾಪಕರು ಕಾರಣ. ಏನು ಕೇಳಿದರೂ ಇನ್ನೂ ದೊಡ್ಡದಾಗಿ ಮಾಡೋಣ ಎಂದು ನಿರ್ಮಾಪಕರು ಹೇಳುತ್ತಿದ್ದರು. ಎಲ್ಲರೂ ತಮ್ಮ ಕೆಲಸವನ್ನು ಇನ್ನಷ್ಟು ಚೆನ್ನಾಗಿ ಹುಮ್ಮಸ್ಸಿನಿಂದ ಮಾಡಿದ್ದಾರೆ’ ಎಂದರು.
‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಪ್ರಿಯಾಂಕಾ ಕುಮಾರ್ ಇಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ‘ನಾಯಕಿಯಾಗಿ ಇದು ಮೊದಲ ಚಿತ್ರ. ನನ್ನ ತಂದೆಗೆ ನಾನು ಚೆನ್ನಾಗಿ ಓದಬೇಕೆಂಬ ಆಸೆ. ನನಗೆ ಓದು ಹಾಗೂ ನಟನೆ ಎರಡು ಆಸೆ. ಓದಿನಲ್ಲೂ ನಮ್ಮ ತಂದೆ ಹೇಳಿದ ಹಾಗೆ ಕೇಳಿದ್ದೇನೆ. ಇದರಿಂದ ಅವರಿಗೂ ಖುಷಿಯಾಗಿದೆ. ಈ ಚಿತ್ರದ ಟ್ರೇಲರ್ ನೋಡಿ ನಮ್ಮ ತಂದೆ ಸಂತೋಷಪಟ್ಟಿದ್ದಾರೆ. ಜನರಿಗೂ ಚಿತ್ರ ಇಷ್ಟವಾಗಲಿದೆ’ ಎಂದರು.
‘ರುದ್ರ ಗರುಡ ಪುರಾಣ’ ಚಿತ್ರವನ್ನು ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ಲೋಹಿತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಹಿರಿಯ ನಟ ವಿನೋದ್ ಆಳ್ವ, ‘ಸಿದ್ಲಿಂಗು’ ಶ್ರೀಧರ್, ಗಿರೀಶ್ ಶಿವಣ್ಣ, ಶಿವರಾಜ ಕೆ.ಆರ್ ಪೇಟೆ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಕೆಪಿ ಸಂಗೀತ ಸಂಯೋಜಿಸಿದ್ದು, ಸಂದೀಪ್ ಕುಮಾರ್ ಛಾಯಾಗ್ರಹಣವಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್ನಿಂದ ಅನ್ವಯವಾಗುವಂತೆ ಫಾಸ್ಟ್ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…
ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…
ಎಸ್ಎಸ್ಎಲ್ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್…
ಜನರಿಂದ ಚುನಾಯಿತರಾದ ಜನಪ್ರತಿನಿಧಿಗೆ ತನ್ನ ಕ್ಷೇತ್ರಕ್ಕೆ ಮಾಡಬೇಕಾಗಿರುವ ಯೋಜನೆಗಳ ಬಗ್ಗೆ ಸಾಕಷ್ಟು ಒಲವಿರಬೇಕು ಹಾಗೂ ಬದ್ಧತೆ ಇರಬೇಕು ಎನ್ನುವುದಕ್ಕೆ ತಮಗೆ…
‘ಸಾಮ್ರಾಜ್ಯಶಾಹಿ ದಾಳಿ ಹಾಗೂ ಅದರ ಪರಿಣಾಮಗಳು’ ಕುರಿತ ವಿಚಾರಸಂಕಿರಣ ಹೊಸದಿಲ್ಲಿ: ಪಶ್ಚಿಮ ಏಷ್ಯದಲ್ಲಿ ತಲೆದೋರಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಬದಲಾದ…
ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…