ಮನರಂಜನೆ

‘ಜೈ’ ಎಂದ ರೂಪೇಶ್‍ ಶೆಟ್ಟಿ: ಟೀಸರ್ ಬಿಡುಗಡೆ ಮಾಡಿದ ಶ್ರೀಮುರಳಿ

‘ಬಿಗ್ ಬಾಸ್’ ಖ್ಯಾತಿಯ ರೂಪೇಶ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಹಾಗೂ ಕನ್ನಡ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಶ್ರೀಮುರಳಿ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಕೋರಿದ್ದಾರೆ.

ಇದು ರೂಪೇಶ್‍ ಶೆಟ್ಟಿ ನಿರ್ದೇಶನದ ಮೂರನೇ ಚಿತ್ರವಾಗಿದ್ದು, ಇದಕ್ಕೂ ಮೊದಲು ‘ಗಿರ್ಗಿಟ್’ ಮತ್ತು ‘ಸರ್ಕಸ್’ ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು. ಇದು ಕರಾವಳಿ ಭಾಗದ ರಾಜಕೀಯದ ಕುರಿತಾದ ಚಿತ್ರ. ಇದು ತುಳು ಭಾಷೆಯಲ್ಲಿ ಸಿದ್ಧವಾಗಿದ್ದು, ಕನ್ನಡಕ್ಕೆ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತದೆ.

ಈ ಹಿಂದೆ ಕನ್ನಡದ ‘ಪೈಲ್ವಾನ್‍’ ಚಿತ್ರದಲ್ಲಿ ನಟಿಸಿದ್ದ ಬಾಲಿವುಡ್‍ ನಟ ಸುನೀಲ್‍ ಶೆ್ಟ್ಟಿ, ಈ ಚಿತ್ರದ ಮೂಲಕ ತುಳು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮೂಲತಃ ತುಳು ಭಾಷೆಯವರಾದ ಸುನೀಲ್‍ ಶೆಟ್ಟಿ, ಇಷ್ಟು ವರ್ಷಗಳಲ್ಲಿ ತುಳು ಚಿತ್ರಗಳಲ್ಲಿ ನಟಿಸಿರಲಿಲ್ಲ. ಈಗ ಇದೇ ಮೊದಲ ಬಾರಿಗೆ ಅವರು ತುಳು ಚಿತ್ರದಲ್ಲಿ ನಟಿಸಿದ್ದಾರೆ. ವಿಶೇಷವೆಂದರೆ, ತಮ್ಮ ಭಾಷೆಯ ಅಭಿಮಾನದಿಂದ ಒಂದು ರೂಪಾಯಿಯನ್ನು ಪಡೆಯದೆ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಅವರು ಸುಮಾರು 18 ನಿಮಿಷಗಳ ಕಾಲ ತೆರೆಯ ಮೇಲೆ ಕಾಣಿಸಿಕೊಳ‍್ಳುತ್ತಾರಂತೆ.

ಆರ್. ಎಸ್. ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ ನಿರ್ಮಿಸಿರುವ ‘ಜೈ’ ಚಿತ್ರದಲ್ಲಿ ರೂಪೇಶ್‍ಗೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸಿದ್ದಾರೆ. ಮಿಕ್ಕಂತೆ ದೇವದಾಸ್ ಕಾಪಿಕಾಡ್, ರಾಜ್‌ ದೀಪಕ್‌ ಶೆಟ್ಟಿ, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು ಮುಂತಾದವರು ನಟಿಸಿದ್ದಾರೆ.

‘ಜೈ’ ಚಿತ್ರಕ್ಕೆ ವಿನುತ್ ಛಾಯಾಗ್ರಹಣ, ಲೊಯ್ ವೆಲೆಂಟಿನ್ ಸಲ್ದಾನ ಸಂಗೀತವಿದ್ದು, ನವೆಂಬರ್‌.14ರಂದು ಕನ್ನಡ ಮತ್ತು ತುಳು ಭಾಷೆಗಳಲ್ಲಿ ಏಕಾಲಕ್ಕೆ ತೆರೆಯ ಮೇಲೆ ಬರಲಿದೆ.

ಆಂದೋಲನ ಡೆಸ್ಕ್

Recent Posts

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

4 mins ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

26 mins ago

ಪುಲ್ವಾಮಾ ದಾಳಿಯ ಮಾಸ್ಟರ್‌ ಮೈಂಡ್‌ ಹಮ್ಜಾ ಬುರ್ಹಾನ್‌ ಹತ್ಯೆ

ಇಸ್ಲಾಮಾಬಾದ್:‌ 2019ರ ಪುಲ್ವಾಮಾ ಉಗ್ರರ ದಾಳಿಯ ಮಾಸ್ಟರ್‌ ಮೈಂಡ್‌ ಹಮ್ಜಾ ಬುರ್ಹಾನ್‌ನನ್ನು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ…

33 mins ago

ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆ ಕಡಿತ ಮಾಡಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆಯನ್ನು ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು,…

1 hour ago

ಧಾರ್ಮಿಕ ಪ್ರದೇಶದ ಪುಣ್ಯಭೂಮಿ ಚಾಮರಾಜನಗರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ…

2 hours ago

ದುಬಾರೆ ದುರಂತ ಬೆನ್ನಲ್ಲೇ ಸಕ್ರೆಬೈಲು ಆನೆ ಬಿಡಾರ ತಾತ್ಕಾಲಿಕ ಬಂದ್‌

ಶಿವಮೊಗ್ಗ: ಕೊಡಗಿನ ದುಬಾರೆ ಆನೆ ಬಿಡಾರದಲಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು…

2 hours ago