ಮನರಂಜನೆ

‘ಜೈ’ ಎಂದ ರೂಪೇಶ್‍ ಶೆಟ್ಟಿ: ಟೀಸರ್ ಬಿಡುಗಡೆ ಮಾಡಿದ ಶ್ರೀಮುರಳಿ

‘ಬಿಗ್ ಬಾಸ್’ ಖ್ಯಾತಿಯ ರೂಪೇಶ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಹಾಗೂ ಕನ್ನಡ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಶ್ರೀಮುರಳಿ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಕೋರಿದ್ದಾರೆ.

ಇದು ರೂಪೇಶ್‍ ಶೆಟ್ಟಿ ನಿರ್ದೇಶನದ ಮೂರನೇ ಚಿತ್ರವಾಗಿದ್ದು, ಇದಕ್ಕೂ ಮೊದಲು ‘ಗಿರ್ಗಿಟ್’ ಮತ್ತು ‘ಸರ್ಕಸ್’ ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು. ಇದು ಕರಾವಳಿ ಭಾಗದ ರಾಜಕೀಯದ ಕುರಿತಾದ ಚಿತ್ರ. ಇದು ತುಳು ಭಾಷೆಯಲ್ಲಿ ಸಿದ್ಧವಾಗಿದ್ದು, ಕನ್ನಡಕ್ಕೆ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತದೆ.

ಈ ಹಿಂದೆ ಕನ್ನಡದ ‘ಪೈಲ್ವಾನ್‍’ ಚಿತ್ರದಲ್ಲಿ ನಟಿಸಿದ್ದ ಬಾಲಿವುಡ್‍ ನಟ ಸುನೀಲ್‍ ಶೆ್ಟ್ಟಿ, ಈ ಚಿತ್ರದ ಮೂಲಕ ತುಳು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮೂಲತಃ ತುಳು ಭಾಷೆಯವರಾದ ಸುನೀಲ್‍ ಶೆಟ್ಟಿ, ಇಷ್ಟು ವರ್ಷಗಳಲ್ಲಿ ತುಳು ಚಿತ್ರಗಳಲ್ಲಿ ನಟಿಸಿರಲಿಲ್ಲ. ಈಗ ಇದೇ ಮೊದಲ ಬಾರಿಗೆ ಅವರು ತುಳು ಚಿತ್ರದಲ್ಲಿ ನಟಿಸಿದ್ದಾರೆ. ವಿಶೇಷವೆಂದರೆ, ತಮ್ಮ ಭಾಷೆಯ ಅಭಿಮಾನದಿಂದ ಒಂದು ರೂಪಾಯಿಯನ್ನು ಪಡೆಯದೆ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಅವರು ಸುಮಾರು 18 ನಿಮಿಷಗಳ ಕಾಲ ತೆರೆಯ ಮೇಲೆ ಕಾಣಿಸಿಕೊಳ‍್ಳುತ್ತಾರಂತೆ.

ಆರ್. ಎಸ್. ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ ನಿರ್ಮಿಸಿರುವ ‘ಜೈ’ ಚಿತ್ರದಲ್ಲಿ ರೂಪೇಶ್‍ಗೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸಿದ್ದಾರೆ. ಮಿಕ್ಕಂತೆ ದೇವದಾಸ್ ಕಾಪಿಕಾಡ್, ರಾಜ್‌ ದೀಪಕ್‌ ಶೆಟ್ಟಿ, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು ಮುಂತಾದವರು ನಟಿಸಿದ್ದಾರೆ.

‘ಜೈ’ ಚಿತ್ರಕ್ಕೆ ವಿನುತ್ ಛಾಯಾಗ್ರಹಣ, ಲೊಯ್ ವೆಲೆಂಟಿನ್ ಸಲ್ದಾನ ಸಂಗೀತವಿದ್ದು, ನವೆಂಬರ್‌.14ರಂದು ಕನ್ನಡ ಮತ್ತು ತುಳು ಭಾಷೆಗಳಲ್ಲಿ ಏಕಾಲಕ್ಕೆ ತೆರೆಯ ಮೇಲೆ ಬರಲಿದೆ.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

58 mins ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

1 hour ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

1 hour ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

1 hour ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago