‘ದುನಿಯಾ’ ವಿಜಯ್ ಮತ್ತು ಕೆ.ಮಂಜು ಮಗ ಶ್ರೇಯಸ್ ಮಂಜು ಅಭಿನಯದಲ್ಲಿ ಎಸ್.ನಾರಾಯಣ್ ಒಂದು ಚಿತ್ರ ನಿರ್ದೇಶನ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈಗ ಆ ಚಿತ್ರದ ಮೊದಲ ಹಾಡಿನ ಲಿರಿಕಲ್ ವೀಡಿಯೋ ಬಿಡುಗಡೆ ಆಗಿದೆ. ಎಸ್.ನಾರಾಯಣ್ ಅವರೇ ಹಾಡು ಬರೆದು, ಸಂಗೀತ ಸಂಯೋಜನೆ ಮಾಡಿರುವ ಈ ಹಾಡಿಗೆ ಚಂದನ್ ಶೆಟ್ಟಿ ಧ್ವನಿಯಾಗಿದ್ದಾರೆ.
ಈ ಹಾಡಿನ ಮೂಲಕ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ ಎನ್ನುವ ನಾರಾಯಣ್, ‘’ದುನಿಯಾ’ ವಿಜಯ್ ಚಿತ್ರತಂಡಕ್ಕೆ ಬರುವವರೆಗೂ ಈ ಶೀರ್ಷಿಕೆ ಇರಲಿಲ್ಲ. ಅವರು ಬಂದ ನಂತರ ‘ಮಾರುತ’ ಎಂಬ ಶೀರ್ಷಿಕೆ ಇಡಲಾಯಿತು. ಏಕೆಂದರೆ, ಹಿಂದೆ ನಾವಿಬ್ಬರು ‘ಚಂಡ’ ಚಿತ್ರ ಮಾಡಿದ್ದೆವು. ಈಗ ‘ಮಾರುತ’ ಚಿತ್ರ ಮಾಡಿದ್ದೇವೆ. ಎರಡು ಸೇರಿ ಯಶಸ್ಸಿನ ಚಂಡಮಾರುತ ಆಗುವ ಭರವಸೆ ಇದೆ’ ಎಂದರು.
ಈ ಚಿತ್ರದಲ್ಲೊಂದು ಗಂಭೀರ ಸಂದೇಶ ಹೇಳಿರುವುದಾಗಿ ಹೇಳುವ ನಾರಾಯಣ್, ‘ಪೋಷಕರೇ ನಿಮ್ಮ ಮಕ್ಕಳ ಬಗ್ಗೆ ಎಚ್ಚರ ಇರಲಿ. ಅವರ ಚಲನವಲನದ ಬಗ್ಗೆ ನಿಮಗೆ ತಿಳಿದಿರಲಿ. ಅವರ ಕೈಯಲ್ಲಿರುವ ಮೊಬೈಲ್ ಚಟುವಟಿಕೆಗಳ ಬಗ್ಗೆ ನಿಮಗೆ ತಿಳಿದಿರಲಿ. ನೀವು ಎಷ್ಟೇ ಬ್ಯುಸಿಯಿದ್ದರೂ ವಾರಕ್ಕೊಮ್ಮೆಯಾದರೂ ಸಮಯ ಬಿಡುವು ಮಾಡಿಕೊಂಡು ಅವರ ಜೊತೆ ಸಮಯ ಕಳೆಯಿರಿ. ಅವರ ಮನಸ್ಸಿನ ಆಸೆಗಳು, ಬಯಕೆಗಳನ್ನು ಹಂಚಿಕೊಳ್ಳಿ. ಏಕೆಂದರೆ, ಅವರು ನಿಮ್ಮ ಸ್ವತ್ತು. ಅದೇ ಮಕ್ಕಳು ಈ ದೇಶಕ್ಕೆ ಸಂಪತ್ತು. ಈ ವಿಷಯದ ಮೇಲೆ ಚಿತ್ರದ ಕಥೆ ಹೆಣೆಯಲಾಗಿದೆ. ದೇಶ ಎದುರಿಸುತ್ತಿರುವ ಗಂಭೀರ ಸಮಸ್ಯೆಯನ್ನು ಈ ಚಿತ್ರದ ಮೂಲಕ ತೋರಿಸಲಾಗಿದೆ’ ಎಂದರು ನಾರಾಯಣ್.
ಎಸ್.ನಾರಾಯಣ್ ಅವರ ಜೊತೆಗೆ ಸಿನಿಮಾ ಮಾಡಿರುವುದು ಬಹಳ ಖುಷಿಯಾಗಿದೆ ಎಂದ ವಿಜಯ್, ‘ನಾನು ನಿರ್ದೇಶನ ಮಾಡಬೇಕಾದರೆ ಅವರ ಶಿಸ್ತನ್ನು ರೂಡಿಸಿಕೊಂಡಿದ್ದೇನೆ. ಸಾಕಷ್ಟು ಸೂಪರ್ ಹಿಟ್ ಕೌಟುಂಬಿಕ ಚಿತ್ರಗಳನ್ನು ನಿರ್ದೇಶಿಸಿರುವ ಖ್ಯಾತಿ ನಾರಾಯಣ್ ಅವರಿಗಿದೆ. ಅವರ ನಿರ್ದೇಶನದಲ್ಲಿ ಕೌಟುಂಬಿಕ ಸಿನಿಮಾದಲ್ಲಿ ನಟಿಸುವ ಆಸೆ ನನಗೆ ಇದೆ’ ಎಂದರು.
ಶ್ರೇಯಸ್ ಮಂಜು ಈ ಚಿತ್ರದಲ್ಲಿ ಸಾಕಷ್ಟು ಕಲಿತಿದ್ದಾರಂತೆ. ‘ಅನೇಕ ಹಿರಿಯರ ಜೊತೆಗೆ ಈ ಸಿನಿಮಾದಲ್ಲಿ ಕೆಲಸ ಮಾಡಿ ಸಾಕಷ್ಟು ಕಲಿತಿದ್ದೇನೆ. ನಾರಾಯಣ್ ಅವರ ಶಿಸ್ತು ನನಗೆ ಆದರ್ಶ. ಚಿತ್ರೀಕರಣ ಸಮಯದಲ್ಲಿ ‘ದುನಿಯಾ’ ವಿಜಯ್ ಅವರು ಸಾಕಷ್ಟು ಸಲಹೆ ನೀಡಿದ್ದಾರೆ’ ಎಂದರು ಶ್ರೇಯಸ್ ಮಂಜು.
‘ಮಾರುತ’ ಚಿತ್ರವನ್ನು ಈಶಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಕೆ.ಮಂಜು ಮತ್ತು ರಮೇಶ್ ಯಾದವ್ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ವಿಜಯ್ ಮತ್ತು ಶ್ರೇಯಸ್ ಜೊತೆಗೆ ಬೃಂದಾ ಆಚಾರ್ಯ, ತಾರಾ, ಸಾಧು ಕೋಕಿಲ, ಪ್ರಮೋದ್ ಶೆಟ್ಟಿ, ರಂಗಾಯಣ ರಘು, ಶರತ್ ಲೋಹಿತಾಶ್ವ ಮುಂತಾದವರು ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ರವಿಚಂದ್ರನ್ ಸಹ ಇದ್ದಾರಂತೆ. ಪಿ.ಕೆ.ಎಚ್. ದಾಸ್ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…