‘ದುನಿಯಾ’ ವಿಜಯ್ ಮತ್ತು ಕೆ.ಮಂಜು ಮಗ ಶ್ರೇಯಸ್ ಮಂಜು ಅಭಿನಯದಲ್ಲಿ ಎಸ್.ನಾರಾಯಣ್ ಒಂದು ಚಿತ್ರ ನಿರ್ದೇಶನ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈಗ ಆ ಚಿತ್ರದ ಮೊದಲ ಹಾಡಿನ ಲಿರಿಕಲ್ ವೀಡಿಯೋ ಬಿಡುಗಡೆ ಆಗಿದೆ. ಎಸ್.ನಾರಾಯಣ್ ಅವರೇ ಹಾಡು ಬರೆದು, ಸಂಗೀತ ಸಂಯೋಜನೆ ಮಾಡಿರುವ ಈ ಹಾಡಿಗೆ ಚಂದನ್ ಶೆಟ್ಟಿ ಧ್ವನಿಯಾಗಿದ್ದಾರೆ.
ಈ ಹಾಡಿನ ಮೂಲಕ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ ಎನ್ನುವ ನಾರಾಯಣ್, ‘’ದುನಿಯಾ’ ವಿಜಯ್ ಚಿತ್ರತಂಡಕ್ಕೆ ಬರುವವರೆಗೂ ಈ ಶೀರ್ಷಿಕೆ ಇರಲಿಲ್ಲ. ಅವರು ಬಂದ ನಂತರ ‘ಮಾರುತ’ ಎಂಬ ಶೀರ್ಷಿಕೆ ಇಡಲಾಯಿತು. ಏಕೆಂದರೆ, ಹಿಂದೆ ನಾವಿಬ್ಬರು ‘ಚಂಡ’ ಚಿತ್ರ ಮಾಡಿದ್ದೆವು. ಈಗ ‘ಮಾರುತ’ ಚಿತ್ರ ಮಾಡಿದ್ದೇವೆ. ಎರಡು ಸೇರಿ ಯಶಸ್ಸಿನ ಚಂಡಮಾರುತ ಆಗುವ ಭರವಸೆ ಇದೆ’ ಎಂದರು.
ಈ ಚಿತ್ರದಲ್ಲೊಂದು ಗಂಭೀರ ಸಂದೇಶ ಹೇಳಿರುವುದಾಗಿ ಹೇಳುವ ನಾರಾಯಣ್, ‘ಪೋಷಕರೇ ನಿಮ್ಮ ಮಕ್ಕಳ ಬಗ್ಗೆ ಎಚ್ಚರ ಇರಲಿ. ಅವರ ಚಲನವಲನದ ಬಗ್ಗೆ ನಿಮಗೆ ತಿಳಿದಿರಲಿ. ಅವರ ಕೈಯಲ್ಲಿರುವ ಮೊಬೈಲ್ ಚಟುವಟಿಕೆಗಳ ಬಗ್ಗೆ ನಿಮಗೆ ತಿಳಿದಿರಲಿ. ನೀವು ಎಷ್ಟೇ ಬ್ಯುಸಿಯಿದ್ದರೂ ವಾರಕ್ಕೊಮ್ಮೆಯಾದರೂ ಸಮಯ ಬಿಡುವು ಮಾಡಿಕೊಂಡು ಅವರ ಜೊತೆ ಸಮಯ ಕಳೆಯಿರಿ. ಅವರ ಮನಸ್ಸಿನ ಆಸೆಗಳು, ಬಯಕೆಗಳನ್ನು ಹಂಚಿಕೊಳ್ಳಿ. ಏಕೆಂದರೆ, ಅವರು ನಿಮ್ಮ ಸ್ವತ್ತು. ಅದೇ ಮಕ್ಕಳು ಈ ದೇಶಕ್ಕೆ ಸಂಪತ್ತು. ಈ ವಿಷಯದ ಮೇಲೆ ಚಿತ್ರದ ಕಥೆ ಹೆಣೆಯಲಾಗಿದೆ. ದೇಶ ಎದುರಿಸುತ್ತಿರುವ ಗಂಭೀರ ಸಮಸ್ಯೆಯನ್ನು ಈ ಚಿತ್ರದ ಮೂಲಕ ತೋರಿಸಲಾಗಿದೆ’ ಎಂದರು ನಾರಾಯಣ್.
ಎಸ್.ನಾರಾಯಣ್ ಅವರ ಜೊತೆಗೆ ಸಿನಿಮಾ ಮಾಡಿರುವುದು ಬಹಳ ಖುಷಿಯಾಗಿದೆ ಎಂದ ವಿಜಯ್, ‘ನಾನು ನಿರ್ದೇಶನ ಮಾಡಬೇಕಾದರೆ ಅವರ ಶಿಸ್ತನ್ನು ರೂಡಿಸಿಕೊಂಡಿದ್ದೇನೆ. ಸಾಕಷ್ಟು ಸೂಪರ್ ಹಿಟ್ ಕೌಟುಂಬಿಕ ಚಿತ್ರಗಳನ್ನು ನಿರ್ದೇಶಿಸಿರುವ ಖ್ಯಾತಿ ನಾರಾಯಣ್ ಅವರಿಗಿದೆ. ಅವರ ನಿರ್ದೇಶನದಲ್ಲಿ ಕೌಟುಂಬಿಕ ಸಿನಿಮಾದಲ್ಲಿ ನಟಿಸುವ ಆಸೆ ನನಗೆ ಇದೆ’ ಎಂದರು.
ಶ್ರೇಯಸ್ ಮಂಜು ಈ ಚಿತ್ರದಲ್ಲಿ ಸಾಕಷ್ಟು ಕಲಿತಿದ್ದಾರಂತೆ. ‘ಅನೇಕ ಹಿರಿಯರ ಜೊತೆಗೆ ಈ ಸಿನಿಮಾದಲ್ಲಿ ಕೆಲಸ ಮಾಡಿ ಸಾಕಷ್ಟು ಕಲಿತಿದ್ದೇನೆ. ನಾರಾಯಣ್ ಅವರ ಶಿಸ್ತು ನನಗೆ ಆದರ್ಶ. ಚಿತ್ರೀಕರಣ ಸಮಯದಲ್ಲಿ ‘ದುನಿಯಾ’ ವಿಜಯ್ ಅವರು ಸಾಕಷ್ಟು ಸಲಹೆ ನೀಡಿದ್ದಾರೆ’ ಎಂದರು ಶ್ರೇಯಸ್ ಮಂಜು.
‘ಮಾರುತ’ ಚಿತ್ರವನ್ನು ಈಶಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಕೆ.ಮಂಜು ಮತ್ತು ರಮೇಶ್ ಯಾದವ್ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ವಿಜಯ್ ಮತ್ತು ಶ್ರೇಯಸ್ ಜೊತೆಗೆ ಬೃಂದಾ ಆಚಾರ್ಯ, ತಾರಾ, ಸಾಧು ಕೋಕಿಲ, ಪ್ರಮೋದ್ ಶೆಟ್ಟಿ, ರಂಗಾಯಣ ರಘು, ಶರತ್ ಲೋಹಿತಾಶ್ವ ಮುಂತಾದವರು ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ರವಿಚಂದ್ರನ್ ಸಹ ಇದ್ದಾರಂತೆ. ಪಿ.ಕೆ.ಎಚ್. ದಾಸ್ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…