ಮನರಂಜನೆ

ಆ ನಾಲ್ಕನೇ ವರ್ಗದವರ ಕುರಿತು ಎಸ್‍.ನಾರಾಯಣ್‍ ಹೊಸ ಚಿತ್ರ …

‘ದುನಿಯಾ’ ವಿಜಯ್‍ ಮತ್ತು ಶ್ರೇಯಸ್‍ ಮಂಜು ‘ಮಾರುತ’ ಚಿತ್ರಕ್ಕೆ ಎಸ್‍.ನಾರಾಯಣ್‍ ಬರೆದಿರುವ ಪ್ರೇಮಗೀತೆಯೊಂದು ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿತ್ತು. ಇದೀಗ ಅವರು ಅದೇ ಚಿತ್ರಕ್ಕಾಗಿ ಭಕ್ತಿಗೀತೆಯೊಂದನ್ನು ಬರೆದು ಸಂಯೋಜಿಸಿದ್ದು, ನವರಾತ್ರಿ ಸಂದರ್ಭದಲ್ಲಿ ಈ ಹಾಡು ಬಿಡುಗಡೆಯಾಗಿದೆ. ಅನನ್ಯ ಭಟ್ ಅವರ ಗಾಯನದಲ್ಲಿ ಮೂಡಿ ಬಂದಿರುವ ಈ ಹಾಡಿನಲ್ಲಿ ನಾಯಕಿ ಬೃಂದಾ ಆಚಾರ್ಯ ಅಭಿನಯಿಸಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಎಸ್.ನಾರಾಯಣ್‍, ‘ಈ ಚಿತ್ರದಲ್ಲಿ ‘ದುನಿಯಾ’ ವಿಜಯ್‍ ಅಭಿನಯಿಸಿರುವುದರಿಂದ ಪರಿಪೂರ್ಣವಾಗಿದೆ. ಇವತ್ತಿನ ಯುವ ಪೀಳಿಗೆಯೇ ಈ ಚಿತ್ರದ ಕಥಾವಸ್ತು. ಇವತ್ತಿನ ಯುವಪೀಳಿಗೆ ನಾಲ್ಕು ವರ್ಗಗಳಿವೆ. ಮೊದಲನೆಯದು, ಸಂಸಾರದ ಬಗ್ಗೆ ಯೋಚಿಸುತ್ತದೆ. ಎರಡನೆಯದು, ತನ್ನ ಬುದ್ಧಿವಂತಿಕೆಯನ್ನು ದೇಶ ಕಟ್ಟುವುದಕ್ಕೆ ಉಪಯೋಗಿಸುತ್ತದೆ. ಮೂರನೆಯದು, ಯಾವುದೇ ಜವಾಬ್ದಾರಿ ಇಲ್ಲದೆ ತಂದೆಯ ದುಡ್ಡಿನಲ್ಲಿ ಬದುಕುವವರು. ನಾಲ್ಕನೆಯದು, ಸೋಷಿಯಲ್‍ ಮೀಡಿಯಾದಲ್ಲಿ ಅನಗತ್ಯ ಟೀಕೆಗಳನ್ನು ಮಾಡುತ್ತಾ ಕುಳಿತಿರುತ್ತದೆ. ಸಾಮಾಜಿಕ ಜಾಲತಾಣಗಳು ಎಷ್ಟು ಸದ್ಬಳಕೆಯಾಗುತ್ತಿದೆಯೋ, ಅಷ್ಟೇ ದುರ್ಬಳಕೆ ಆಗುತ್ತಿದೆ. ಸೋಷಿಯಲ್‍ ಮೀಡಿಯಾದಿಂದ ಇಂದು ಅನೇಕ ದುರ್ಘಟನೆಗಳಾಗುತ್ತಿವೆ. ಆ ವ್ಯೂಹದಲ್ಲಿ ಸಿಕ್ಕಿಬೀಳುವ ಪಾತ್ರಗಳು ಈ ಚಿತ್ರದಲ್ಲಿವೆ’ ಎಂದರು.

ಇದನ್ನೂ ಓದಿ:-41 ಕಾರ್ಯಕರ್ತರಿಗೆ ನ್ಯಾಯಾಂಗ ಬಂಧನ: ನಾಳೆ 31 ಜಿಲ್ಲೆಗಳಲ್ಲಿಯೂ ಕರವೇ ಪ್ರತಿಭಟನೆ

ನಿರ್ದೇಶಕ ಎಸ್ ನಾರಾಯಣ್ ಅವರ ಶಿಸ್ತು ಎಲ್ಲರಿಗೂ ಮಾದರಿ ಎಂದ ಶ್ರೇಯಸ್‍, ‘ನಾನು ಅವರಿಂದ ಈ ಚಿತ್ರದಲ್ಲಿ ಸಾಕಷ್ಟು ಕಲಿತಿದ್ದೇನೆ. ಇಂದು ಬಿಡುಗಡೆಯಾಗಿರುವ ಈ ಹಾಡು ತುಂಬಾ ಸುಮಧುರವಾಗಿದೆ. ನವರಾತ್ರಿಯ ಸಂದರ್ಭದಲ್ಲಿ ನಾಡಿನ ಜನತೆಗೆ ಒಂದೊಳ್ಳೆ ಭಕ್ತಿಗೀತೆಯನ್ನು ನಿರ್ದೇಶಕರು ನೀಡಿದ್ದಾರೆ‌. ಇಡೀ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಅಕ್ಟೋಬರ್.31ರಂದು ಚಿತ್ರ ತೆರೆಗೆ ಬರುತ್ತಿದೆ’ ಎಂದರು.

ಶಿಸ್ತು, ಸಂಯಮಕ್ಕೆ ಹೆಸರಾದವರು ನಿರ್ದೇಶಕ ಎಸ್. ನಾರಾಯಣ್ ಎಂದ ಬೃಂದಾ ಆಚಾರ್ಯ, ‘ನಮ್ಮಮ್ಮ …’ ಹಾಡನ್ನು ಎರಡು ದಿನಗಳ ಕಾಲ ಚಿತ್ರಿಸುವ ಯೋಜನೆಯಾಗಿತ್ತು. ಆದರೆ, ನಿರ್ದೇಶಕರು ಅವಧಿಗೂ ಮುನ್ನ ಚಿತ್ರೀಕರಣ ಮುಗಿಸಿದರು‌. ಈ ಹಾಡಿಗೆ ಸಾಕಷ್ಟು ರಿಹರ್ಸಲ್‍ ಮಾಡಿ ಕ್ಯಾಮೆರಾ ಎದುರಿಸಿದ್ದೇನೆ’ ಎಂದರು.

ಈಶ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕೆ. ಮಂಜು ಮತ್ತು ರಮೇಶ್‍ ಯಾದವ್‍ ನಿರ್ಮಿಸಿರುವ ‘ಮಾರುತ’ ಚಿತ್ರಕ್ಕೆ ಎಸ್‍. ನಾರಾಯಣ್‍ ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿ ಸಂಗೀತವನ್ನೂ ಸಂಯೋಜಿಸಿದ್ದಾರೆ. ಚಿತ್ರದಲ್ಲಿ ಶ್ರೇಯಸ್ ಮಂಜು, ಬೃಂದಾ ಆಚಾರ್ಯ, ತಾರಾ, ರಂಗಾಯಣ ರಘು, ಸಾಧು ಕೋಕಿಲ, ಕಲ್ಯಾಣಿ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಸುಜಯ್ ಶಾಸ್ತ್ರಿ ಮುಂತಾದವರ ಜೊತೆಗೆ ರವಿಚಂದ್ರನ್ ಸಹ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

2 hours ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

2 hours ago

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

2 hours ago

ಬಂಡೀಪಾಳ್ಯದಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಶೀಘ್ರ ಆರಂಭ

ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…

2 hours ago

ನೂರು ಸಾವಿರದ ಗಡಿ ದಾಟಿದ ಆಂದೋಲನ ಇನ್ ಸ್ಟಾ ಪೇಜ್ ಹಿಂಬಾಲಕರು

‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…

2 hours ago

ದುಸ್ಥಿತಿಯಲ್ಲಿ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ ಕಟ್ಟಡ

ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…

3 hours ago