ದುಬೈ: 2024ನೇ ಸಾಲಿನ ದಕ್ಷಿಣ ಭಾರತದ ಪ್ರತಿಷ್ಠಿತ ಪ್ರಶ್ತಿ ಸೈಮಾ ಸಮಾರಂಭ ದುಬೈನಲ್ಲಿ ಸೆಪ್ಟೆಂಬರ್ 14 ಮತ್ತು 15 ರಂದು ನಡೆಯಲಿದೆ.
ಈ ಬಾರಿ 12ನೇ ಆವೃತ್ತಿ ಸೈಮಾ ನಡೆಯುತ್ತಿದ್ದು, ದಕ್ಷಿಣ ಭಾರತದಲ್ಲಿ ಪ್ರತಿ ವರ್ಷ ನಡೆಯುವ ಪ್ರತಿಷ್ಠಿತ ಪ್ರಶಸ್ತಿ ಎಂಬ ಹೆಗ್ಗಳಿಕೆಗೆ ಸೈಮಾ ಪಾತ್ರವಾಗಿದೆ. ದಕ್ಷಿಣ ಸಿನಿರಂಗದ ಪ್ರತಿಭೆಗಳನ್ನು ಗುರುತಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಭ್ರಮಿಸುವ ಸೈಮಾದಲ್ಲಿ ನಾಲ್ಕು ಇಂಡಸ್ಟ್ರೀಗಳು ಒಂದೇ ಕುಟುಂಬದಂತೆ ಭಾಗಿಯಾಗಲಿದ್ದಾರೆ.
ಇನ್ನು ಈಗಾಗಲೇ ಸೈಮಾ ಪ್ರಶಸ್ತಿಗೆ ನಾಮಿನೇಷನ್ಸ್ ಆರಂಭವಾಗಿದ್ದು, ಸಪ್ತಸಾಗರದಾಚೆ ಎಲ್ಲೂ ಸೈಡ್ ಎ ಸಿನಿಮಾಗಳು ಸೈಮಾ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿವೆ. ದರ್ಶನ್ ಅಭಿನಯದ ಕಾಟೇರ ಚಿತ್ರ 8 ವಿಭಾಗಗಳಲಿ ನಾಮಿನೇಟ್ ಆಗಿದೆ. ಇನ್ನು ರಕ್ಷಿತ್ ಶೆಟ್ಟಿ ನಟನೆಯ ಹೇಮಂತ್ ರಾವ್ ನಿರ್ದೇಶನದ ಸಪ್ತಸಾಗರದಾಚೆ ಎಲ್ಲೂ ಸೈಡ್ ಎ ಚಿತ್ರ 7 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ.
ಇದಲ್ಲದೇ ತೆಲುಗು, ತಮಿಳು, ಮಲಯಾಳಂನಲ್ಲೂ ಅನೇಕ ಚಿತ್ರಗಳು ನಾಮನಿರ್ದೇಶನಗೊಂಡಿದ್ದು, ಯಾವುದಕ್ಕೆ ಸೈಮಾ ಅವಾರ್ಡ್ ಬರುತ್ತದೆ ಎಂಬುದು ಮುಂದಿನ ಸೆಪ್ಟೆಂಬರ್ ತಿಂಗಳಿನಲ್ಲಿ ತಿಳಿಯಲಿದೆ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…