ಮನರಂಜನೆ

ಸೆಪ್ಟೆಂಬರ್‌ 14 ಮತ್ತು 15ರಂದು ನಡೆಯಲಿರುವ ಸೈಮಾ ಸಮಾರಂಭ

ದುಬೈ: 2024ನೇ ಸಾಲಿನ ದಕ್ಷಿಣ ಭಾರತದ ಪ್ರತಿಷ್ಠಿತ ಪ್ರಶ್ತಿ ಸೈಮಾ ಸಮಾರಂಭ ದುಬೈನಲ್ಲಿ ಸೆಪ್ಟೆಂಬರ್‌ 14 ಮತ್ತು 15 ರಂದು ನಡೆಯಲಿದೆ.

ಈ ಬಾರಿ 12ನೇ ಆವೃತ್ತಿ ಸೈಮಾ ನಡೆಯುತ್ತಿದ್ದು, ದಕ್ಷಿಣ ಭಾರತದಲ್ಲಿ ಪ್ರತಿ ವರ್ಷ ನಡೆಯುವ ಪ್ರತಿಷ್ಠಿತ ಪ್ರಶಸ್ತಿ ಎಂಬ ಹೆಗ್ಗಳಿಕೆಗೆ ಸೈಮಾ ಪಾತ್ರವಾಗಿದೆ. ದಕ್ಷಿಣ ಸಿನಿರಂಗದ ಪ್ರತಿಭೆಗಳನ್ನು ಗುರುತಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಭ್ರಮಿಸುವ ಸೈಮಾದಲ್ಲಿ ನಾಲ್ಕು ಇಂಡಸ್ಟ್ರೀಗಳು ಒಂದೇ ಕುಟುಂಬದಂತೆ ಭಾಗಿಯಾಗಲಿದ್ದಾರೆ.

ಇನ್ನು ಈಗಾಗಲೇ ಸೈಮಾ ಪ್ರಶಸ್ತಿಗೆ ನಾಮಿನೇಷನ್ಸ್‌ ಆರಂಭವಾಗಿದ್ದು, ಸಪ್ತಸಾಗರದಾಚೆ ಎಲ್ಲೂ ಸೈಡ್‌ ಎ ಸಿನಿಮಾಗಳು ಸೈಮಾ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿವೆ. ದರ್ಶನ್‌ ಅಭಿನಯದ ಕಾಟೇರ ಚಿತ್ರ 8 ವಿಭಾಗಗಳಲಿ ನಾಮಿನೇಟ್‌ ಆಗಿದೆ. ಇನ್ನು ರಕ್ಷಿತ್‌ ಶೆಟ್ಟಿ ನಟನೆಯ ಹೇಮಂತ್‌ ರಾವ್‌ ನಿರ್ದೇಶನದ ಸಪ್ತಸಾಗರದಾಚೆ ಎಲ್ಲೂ ಸೈಡ್‌ ಎ ಚಿತ್ರ 7 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ.

ಇದಲ್ಲದೇ ತೆಲುಗು, ತಮಿಳು, ಮಲಯಾಳಂನಲ್ಲೂ ಅನೇಕ ಚಿತ್ರಗಳು ನಾಮನಿರ್ದೇಶನಗೊಂಡಿದ್ದು, ಯಾವುದಕ್ಕೆ ಸೈಮಾ ಅವಾರ್ಡ್‌ ಬರುತ್ತದೆ ಎಂಬುದು ಮುಂದಿನ ಸೆಪ್ಟೆಂಬರ್‌ ತಿಂಗಳಿನಲ್ಲಿ ತಿಳಿಯಲಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

48 mins ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

2 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

5 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

9 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

9 hours ago