ಮನರಂಜನೆ

ಬನ್ನೇರುಘಟ್ಟ ಉದ್ಯಾನವನದಲ್ಲಿ ಹುಲಿ ದತ್ತು ಪಡೆದ ಸಂಯುಕ್ತ ಹೊರನಾಡು

ಐದು ವರ್ಷಗಳ ಹಿಂದೆ ನಟ ದರ್ಶನ್‍ ಮೈಸೂರು ಮೃಗಾಲಯದಲ್ಲಿ ಒಂದು ಹುಲಿ ಮತ್ತು ಆನೆಯನ್ನು ದತ್ತು ಪಡೆಯುವುದರ ಜೊತೆಗೆ ಬೇರೆಯವರಿಗೂ ಪ್ರಾಣಿಗಳನ್ನು ದತ್ತು ಪಡೆಯುವುದಕ್ಕೆ ಮನವಿ ಮಾಡಿದ್ದರು. ಅದಕ್ಕೆ ಪೂರಕವಾಗಿ, ಹಲವು ನಟ-ನಟಿಯರು ಬೇರೆಬೇರೆ ಮೃಗಾಲಯಗಳಲ್ಲಿ ಪ್ರಾಣಿಗಳನ್ನು ದತ್ತು ಪಡೆದು ಸಾಕಿದರು. ಈಗ ಸಂಯುಕ್ತಾ ಹೊರನಾಡು ಸಹ ಅದೇ ದಾರಿ ಹಿಡಿದಿದ್ದಾರೆ.

ಸಿನಿಮಾಗಳ ಹೊರತಾಗಿ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಸಂಯುಕ್ತ ಹೊರನಾಡು, ಇದಕ್ಕೂ ಮೊದಲು ಪ್ರಾಣ ಅನಿಮಲ್ ಫೌಂಡೇಶನ್ ಅಡಿಯಲ್ಲಿ ಪ್ರಾಣಿಗಳ ರಕ್ಷಣೆಗೆ ಅಂಬುಲೆನ್ಸ್ ಸೇವೆ ಒದಗಿಸುವ ಮೂಲಕ ಪ್ರಾಣಿ ಪ್ರಿಯರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ ಸಂಯುಕ್ತಾ, ತಮ್ಮದೇ ಪ್ರಾಣ ಹಾಗೂ ಟೆಕೆಯಾನ್ ಸಹಯೋಗದಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹುಲಿಯನ್ನು ದತ್ತು ಪಡೆದಿದ್ದಾರೆ.

28 ತಿಂಗಳ ಸಿಂಚನ ಎಂಬ ಹೆಣ್ಣು ಹುಲಿ‌ ಮರಿಯನ್ನು ಸಂಯುಕ್ತಾ ದತ್ತು ಪಡೆದಿದ್ದು, ಇದು ನರದೌರ್ಬಲ್ಯ ಸಮಸ್ಯೆ ಎದುರಿಸುತ್ತಿರುವುದರಿಂದ ಕಾಡಿನಲ್ಲಿ ಸ್ವಾತಂತ್ರ್ಯವಾಗಿ ವಾಸಿಸಲು ಕಷ್ಟವಾಗಿದೆ. ಅದೇ ಕಾರಣಕ್ಕೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಂರಕ್ಷಣಾ ಕೇಂದ್ರ ಕಾಳಜಿ ವಹಿಸುತ್ತಿದೆ. ದತ್ತು ಸ್ವೀಕೃತಿಯಲ್ಲಿ ಅದರ ದಿನನಿತ್ಯದ ಆಹಾರ, ನಿರ್ವಹಣೆ ಮತ್ತು ಪಶು ಚಿಕಿತ್ಸಾವನ್ನು ಭರಿಸಲಾಗುತ್ತದೆ.

ಈ ಸಂದರ್ಭದಲ್ಲಿ ಮಾತನಾಡಿರುವ ಸಂಯುಕ್ತಾ, ‘ಟೆಕೆಯಾನ್ ಹಾಗೂ ಪ್ರಾಣ ಸಂಸ್ಥೆ ಜೊತೆಗೂಡಿ ದಿನದ 24 ಘಂಟೆ ಪ್ರಾಣಿಗಳ ರಕ್ಷಣೆಗೆ ಆಂಬ್ಯುಲೆನ್ಸ್ ಸೇವೆ ಒದಗಿಸುತ್ತಿದೆ. ಇದೂವರೆಗೆ 500 ಪ್ರಾಣಿಗಳನ್ನು ಈ ಸಂಸ್ಥೆ ರಕ್ಷಣೆ ಮಾಡಿವೆ. ಕನಕಪುರ ರಸ್ತೆಯಲ್ಲಿ ಟೆಕೆಯಾನ್ ಸಂಸ್ಥೆಯು ಪ್ರಾಣಿ ರಕ್ಷಣೆಗೆ ಪುನರ್ ವಸತಿ ಕೇಂದ್ರ ಸ್ಥಾಪಿಸಿಕೊಟ್ಟಿದೆ. ಟೆಕೆಯಾನ್ ಜೊತೆ ಕೈ ಜೋಡಿಸಿರುವುದು ಖುಷಿ ಕೊಟ್ಟಿದೆ’ ಎಂದರು. ಈ ಸಂದರ್ಭದಲ್ಲಿ ಟೆಕೆಯಾನ್ ಸಂಸ್ಥೆ ಮುಖ್ಯಸ್ಥ ರಾಣಾ ರೊಬಿಲ್ಡ್, ಉಪ ಅರಣ್ಯಾಧಿಕಾರಿ ಎವಿ ಸೂರ್ಯಸೆನ್ ಮುಂತಾದವರು ಹಾಜರಿದ್ದರು.

ಅಂದಹಾಗೆ, ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಸೇರಿದಂತೆ ಇನ್ನೂ ಕೆಲವು ಚಿತ್ರಗಳಲ್ಲಿ ಸಂಯುಕ್ತ ನಟಿಸುತ್ತಿದ್ದಾರೆ.

ಭೂಮಿಕಾ

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

7 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

7 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

7 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

8 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

17 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

18 hours ago