ಮೈಸೂರು: ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಅವರು ಡಾಕ್ಟರ್ ಧನ್ಯತಾ ಜೊತೆ ಇಂದು ಶುಭ ಮುಹೂರ್ತದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ನಟ ಡಾಲಿ ಧನಂಜಯ್ ಮತ್ತು ಡಾಕ್ಟರ್ ಧನ್ಯತಾ ಜೋಡಿಯ ವಿವಾಹ ಅದ್ಧೂರಿಯಾಗಿ ನೆರವೇರಿತು.
ಬೆಳಿಗ್ಗೆ 8.30ರಿಂದ 10 ಗಂಟೆಯವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಮಾಂಗಲ್ಯಧಾರಣೆ ನಡೆಯಿತು.
ಡಾಲಿ ಧನಂಜಯ್ ಮದುವೆಗೆ ಕುಟುಂಬಸ್ಥರು, ಮಠಾಧೀಶರು ಹಾಗೂ ಆಪ್ತರು ಸಾಕ್ಷಿಯಾದರು. ನವಜೋಡಿಗೆ ಅಕ್ಷತೆ ಹಾಕಿ ಹರಸಿದರು.
ಡಾಲಿ ಮದುವೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ, ನಟ ಶಿವರಾಜ್ ಕುಮಾರ್, ನಟಿ ರಮ್ಯಾ, ವಸಿಷ್ಠ ಸಿಂಹ, ಯುವರಾಜ್ ಕುಮಾರ್, ಸಪ್ತಮಿಗೌಡ, ವಿನಯ್ ರಾಜ್, ಶ್ರುತಿ, ದಿವ್ಯಾ ಉರುಡುಗ ಸೇರಿದಂತೆ ಹಲವರು ಪಾಲ್ಗೊಂಡು ನವಜೋಡಿಗೆ ವಿಶ್ ಮಾಡಿದರು.
ಇನ್ನು ಧನಂಜಯ್ ಹಾಗೂ ಧನ್ಯತಾ ಮದುವೆಗೆ ಆಗಮಿಸಿದ್ದ ಅತಿಥಿಗಳಿಗಾಗಿ 25ಕ್ಕೂ ಹೆಚ್ಚು ಬಗೆ ಬಗೆಯ ವಿಶೇಷ ಖಾದ್ಯಗಳನ್ನು ಬಡಿಸಲಾಯಿತು. ಕುಟುಂಬಸ್ಥರು, ವಿಐಪಿ, ವಿವಿಐಪಿಗಳಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಸುಮಾರು 800 ಮಂದಿ ಬಾಣಸಿಗರಿಂದ ಅಡುಗೆ ತಯಾರಿಸಲಾಗಿತ್ತು.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…