ಮೈಸೂರು: ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಅವರು ಡಾಕ್ಟರ್ ಧನ್ಯತಾ ಜೊತೆ ಇಂದು ಶುಭ ಮುಹೂರ್ತದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ನಟ ಡಾಲಿ ಧನಂಜಯ್ ಮತ್ತು ಡಾಕ್ಟರ್ ಧನ್ಯತಾ ಜೋಡಿಯ ವಿವಾಹ ಅದ್ಧೂರಿಯಾಗಿ ನೆರವೇರಿತು.
ಬೆಳಿಗ್ಗೆ 8.30ರಿಂದ 10 ಗಂಟೆಯವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಮಾಂಗಲ್ಯಧಾರಣೆ ನಡೆಯಿತು.
ಡಾಲಿ ಧನಂಜಯ್ ಮದುವೆಗೆ ಕುಟುಂಬಸ್ಥರು, ಮಠಾಧೀಶರು ಹಾಗೂ ಆಪ್ತರು ಸಾಕ್ಷಿಯಾದರು. ನವಜೋಡಿಗೆ ಅಕ್ಷತೆ ಹಾಕಿ ಹರಸಿದರು.
ಡಾಲಿ ಮದುವೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ, ನಟ ಶಿವರಾಜ್ ಕುಮಾರ್, ನಟಿ ರಮ್ಯಾ, ವಸಿಷ್ಠ ಸಿಂಹ, ಯುವರಾಜ್ ಕುಮಾರ್, ಸಪ್ತಮಿಗೌಡ, ವಿನಯ್ ರಾಜ್, ಶ್ರುತಿ, ದಿವ್ಯಾ ಉರುಡುಗ ಸೇರಿದಂತೆ ಹಲವರು ಪಾಲ್ಗೊಂಡು ನವಜೋಡಿಗೆ ವಿಶ್ ಮಾಡಿದರು.
ಇನ್ನು ಧನಂಜಯ್ ಹಾಗೂ ಧನ್ಯತಾ ಮದುವೆಗೆ ಆಗಮಿಸಿದ್ದ ಅತಿಥಿಗಳಿಗಾಗಿ 25ಕ್ಕೂ ಹೆಚ್ಚು ಬಗೆ ಬಗೆಯ ವಿಶೇಷ ಖಾದ್ಯಗಳನ್ನು ಬಡಿಸಲಾಯಿತು. ಕುಟುಂಬಸ್ಥರು, ವಿಐಪಿ, ವಿವಿಐಪಿಗಳಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಸುಮಾರು 800 ಮಂದಿ ಬಾಣಸಿಗರಿಂದ ಅಡುಗೆ ತಯಾರಿಸಲಾಗಿತ್ತು.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…