ಮೈಸೂರು: ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಅವರು ಡಾಕ್ಟರ್ ಧನ್ಯತಾ ಜೊತೆ ಇಂದು ಶುಭ ಮುಹೂರ್ತದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ನಟ ಡಾಲಿ ಧನಂಜಯ್ ಮತ್ತು ಡಾಕ್ಟರ್ ಧನ್ಯತಾ ಜೋಡಿಯ ವಿವಾಹ ಅದ್ಧೂರಿಯಾಗಿ ನೆರವೇರಿತು.
ಬೆಳಿಗ್ಗೆ 8.30ರಿಂದ 10 ಗಂಟೆಯವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಮಾಂಗಲ್ಯಧಾರಣೆ ನಡೆಯಿತು.
ಡಾಲಿ ಧನಂಜಯ್ ಮದುವೆಗೆ ಕುಟುಂಬಸ್ಥರು, ಮಠಾಧೀಶರು ಹಾಗೂ ಆಪ್ತರು ಸಾಕ್ಷಿಯಾದರು. ನವಜೋಡಿಗೆ ಅಕ್ಷತೆ ಹಾಕಿ ಹರಸಿದರು.
ಡಾಲಿ ಮದುವೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ, ನಟ ಶಿವರಾಜ್ ಕುಮಾರ್, ನಟಿ ರಮ್ಯಾ, ವಸಿಷ್ಠ ಸಿಂಹ, ಯುವರಾಜ್ ಕುಮಾರ್, ಸಪ್ತಮಿಗೌಡ, ವಿನಯ್ ರಾಜ್, ಶ್ರುತಿ, ದಿವ್ಯಾ ಉರುಡುಗ ಸೇರಿದಂತೆ ಹಲವರು ಪಾಲ್ಗೊಂಡು ನವಜೋಡಿಗೆ ವಿಶ್ ಮಾಡಿದರು.
ಇನ್ನು ಧನಂಜಯ್ ಹಾಗೂ ಧನ್ಯತಾ ಮದುವೆಗೆ ಆಗಮಿಸಿದ್ದ ಅತಿಥಿಗಳಿಗಾಗಿ 25ಕ್ಕೂ ಹೆಚ್ಚು ಬಗೆ ಬಗೆಯ ವಿಶೇಷ ಖಾದ್ಯಗಳನ್ನು ಬಡಿಸಲಾಯಿತು. ಕುಟುಂಬಸ್ಥರು, ವಿಐಪಿ, ವಿವಿಐಪಿಗಳಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಸುಮಾರು 800 ಮಂದಿ ಬಾಣಸಿಗರಿಂದ ಅಡುಗೆ ತಯಾರಿಸಲಾಗಿತ್ತು.
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…