ಮೈಸೂರು: ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಅವರು ಡಾಕ್ಟರ್ ಧನ್ಯತಾ ಜೊತೆ ಇಂದು ಶುಭ ಮುಹೂರ್ತದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ನಟ ಡಾಲಿ ಧನಂಜಯ್ ಮತ್ತು ಡಾಕ್ಟರ್ ಧನ್ಯತಾ ಜೋಡಿಯ ವಿವಾಹ ಅದ್ಧೂರಿಯಾಗಿ ನೆರವೇರಿತು.
ಬೆಳಿಗ್ಗೆ 8.30ರಿಂದ 10 ಗಂಟೆಯವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಮಾಂಗಲ್ಯಧಾರಣೆ ನಡೆಯಿತು.
ಡಾಲಿ ಧನಂಜಯ್ ಮದುವೆಗೆ ಕುಟುಂಬಸ್ಥರು, ಮಠಾಧೀಶರು ಹಾಗೂ ಆಪ್ತರು ಸಾಕ್ಷಿಯಾದರು. ನವಜೋಡಿಗೆ ಅಕ್ಷತೆ ಹಾಕಿ ಹರಸಿದರು.
ಡಾಲಿ ಮದುವೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ, ನಟ ಶಿವರಾಜ್ ಕುಮಾರ್, ನಟಿ ರಮ್ಯಾ, ವಸಿಷ್ಠ ಸಿಂಹ, ಯುವರಾಜ್ ಕುಮಾರ್, ಸಪ್ತಮಿಗೌಡ, ವಿನಯ್ ರಾಜ್, ಶ್ರುತಿ, ದಿವ್ಯಾ ಉರುಡುಗ ಸೇರಿದಂತೆ ಹಲವರು ಪಾಲ್ಗೊಂಡು ನವಜೋಡಿಗೆ ವಿಶ್ ಮಾಡಿದರು.
ಇನ್ನು ಧನಂಜಯ್ ಹಾಗೂ ಧನ್ಯತಾ ಮದುವೆಗೆ ಆಗಮಿಸಿದ್ದ ಅತಿಥಿಗಳಿಗಾಗಿ 25ಕ್ಕೂ ಹೆಚ್ಚು ಬಗೆ ಬಗೆಯ ವಿಶೇಷ ಖಾದ್ಯಗಳನ್ನು ಬಡಿಸಲಾಯಿತು. ಕುಟುಂಬಸ್ಥರು, ವಿಐಪಿ, ವಿವಿಐಪಿಗಳಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಸುಮಾರು 800 ಮಂದಿ ಬಾಣಸಿಗರಿಂದ ಅಡುಗೆ ತಯಾರಿಸಲಾಗಿತ್ತು.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…