ಮೈಸೂರು: ಕಿಚ್ಚ ಸುದೀಪ್ ನಟನೆಯ ʼಮ್ಯಾಕ್ಸ್ʼ ಸಿನಿಮಾ ಬಿಡುಗಡೆಗೊಂಡು ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್ ಭೇಟಿ ನೀಡಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಇಂದು ಮುಂಜಾನೆಯೇ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಕಿಚ್ಚ ಸುದೀಪ್ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು.
ನೆಚ್ಚಿನ ನಟ ಬರುತ್ತಿದ್ದಾರೆಂಬ ಸುದ್ದಿ ತಿಳಿದ ಅಸಂಖ್ಯಾತ ಅಭಿಮಾನಿಗಳು ಚಾಮುಂಡಿಬೆಟ್ಟದಲ್ಲಿ ಜಮಾಯಿಸಿದ್ದು ವಿಶೇಷವೆನಿಸಿತ್ತು.
ದೇವಾಲಯಕ್ಕೆ ಆಗಮಿಸಿದ್ದ ಸಾರ್ವಜನಿಕರು ನೆಚ್ಚಿನ ನಟನನ್ನು ಕಂಡು ಶಿಳ್ಳೆ ಒಡೆದು ಜೈಕಾರ ಕೂಗಿದರು. ನಂತರ ಸುದೀಪ್ ಅಭಿಮಾನಿಗಳತ್ತ ಕೈ ಬೀಸಿದರು. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.
ʼಮ್ಯಾಕ್ಸ್ʼ ಸಿನಿಮಾ ಇದೇ ತಿಂಗಳ 25ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಬಿಡುಗಡೆಯಾಗಿ ನಾಲ್ಕು ದಿನ ಪೂರೈಸಿದ್ದು ಬಾಕ್ಸಾಪೀಸ್ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…