ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್ ಅವರಿಂದು ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸರಿಗಮ ವಿಜಿ ಅವರು ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸರಿಗಮ ವಿಜಿ ಇಂದು ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ. ನಾಳೆ ಚಾಮರಾಜಪೇಟೆಯಲ್ಲಿ ಸರಿಗಮ ವಿಜಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಸರಿಗಮ ವಿಜಿ ಅವರು ಭಾರತೀಯ ನಟ, ಬರಹಗಾರ ಮತ್ತು ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟರಾಗಿ ಗುರುತಿಸಿಕೊಂಡಿದ್ದಾರೆ. ರಂಗಭೂಮಿ ಕಲಾವಿದರೂ ಆಗಿ ಕೂಡ ತಮ್ಮ ಛಾಪು ಮೂಡಿಸಿದ್ದಾರೆ.
ವಿಜಿ ಅವರು ನಟನಾಗಿ ನಟಿಸಿದ್ದ ಚೊಚ್ಚಲ ಚಲನಚಿತ್ರ ಬೆಳುವಲದ ಮಡಿಲಲ್ಲಿ. 2018ರ ಹೊತ್ತಿಗೆ ವಿಜಿ ಅವರು ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದಾರೆ. 80 ಚಿತ್ರಗಳಲ್ಲಿ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…