ಮನರಂಜನೆ

ಗ್ಯಾಂಗ್‍ಸ್ಟರ್ ಆದ ತಿಲಕ್‍; ಪ್ರ್ಯಾಂಕ್‍ಸ್ಟರ್ ಕಥೆ ಸದ್ಯದಲ್ಲೇ ತೆರೆಗೆ

‘ಗಂಡ-ಹೆಂಡತಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ತಿಲಕ್‍, ನಂತರ ಹಲವು ಚಿತ್ರಗಳಲ್ಲಿ ನೆಗೆಟಿವ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಹೆಚ್ಚಾಗಿ ಪೋಷಕ ಪಾತ್ರಗಳನ್ನೇ ಮಾಡುತ್ತಿದ್ದ ತಿಲಕ್‍, ಇದೀಗ ಸದ್ದಿಲ್ಲದೆ ಒಂದು ಹೊಸ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಿಲಕ್‍ ನಟಿಸಿರುವ ಹೊಸ ಚಿತ್ರದ ಹೆಸರು ‘ಗ್ಯಾಂಗ್‍ಸ್ಟರ್ ಅಲ್ಲ ಪ್ರ್ಯಾಂಕ್‍ಸ್ಟರ್’.

ಈ ಚಿತ್ರವನ್ನು ಗಿರೀಶ್‍ ಕುಮಾರ್‍ ನಿರ್ದೇಶಿಸುವುದರ ಜೊತೆಗೆ ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ನಿರ್ದೇಶಕ ಗಿರೀಶ್‍ ಇದಕ್ಕೂ ಮೊದಲು ‘ಭಾವಚಿತ್ರ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು. ಈಗ ‘ಗ್ಯಾಂಗ್‍ಸ್ಟರ್ ಅಲ್ಲ ಪ್ರ್ಯಾಂಕ್‍ಸ್ಟರ್’ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಒಂದು ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಅವರು, ‘ತಿಲಕ್‍ ಚಿತ್ರದಲ್ಲಿ ಗ್ಯಾಂಗ್‍ಸ್ಟರ್ ಪಾತ್ರ ಮಾಡಿದರೆ, ನಾನು ಪ್ರ್ಯಾಂಕ್‍ಸ್ಟರ್ (ಕುಚೇಷ್ಟೆ ಮಾಡುವವನು) ಪಾತ್ರವನ್ನು ಮಾಡಿದ್ದೇನೆ. ಇದು ಯೂಟ್ಯೂಬರ್ ಒಬ್ಬನ ಸುತ್ತ ನಡೆಯುವ ಕಥೆಯಾಗಿದೆ. ಈಗಾಗಲೇ ಚಿತ್ರದ ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ಮುಗಿದಿದ್ದು, ಈ ಚಿತ್ರವನ್ನು ಇತ್ತೀಚೆಗೆ ಸೆನ್ಸಾರ್ ಮಂಡಳಿಯು ವೀಕ್ಷಣೆ ಮಾಡಿದ್ದು ಚಿತ್ರಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡಿದೆ. ಚಿತ್ರ ಬಹಳ ಬೇಗ ತೆರೆಗೆ ಬರಲಿದೆ’ ಎಂದು ಹೇಳಿದ್ದಾರೆ.

‘ಗ್ಯಾಂಗ್‍ಸ್ಟರ್ ಅಲ್ಲ ಪ್ರ್ಯಾಂಕ್‍ಸ್ಟರ್’ ಚಿತ್ರದಲ್ಲಿ ತಿಲಕ್ ಶೇಖರ್, ಗಿರೀಶ್ ಕುಮಾರ್, ವಿರಾನಿಕ ಶೆಟ್ಟಿ, ಬಲ ರಾಜವಾಡಿ, ಹನುಮಂತೇಗೌಡ, ಭವಾನಿ ಪ್ರಕಾಶ್‍, ಹೊನವಳ್ಳಿ ಕೃಷ್ಣ, ಸಂಗೀತ ಅನಿಲ್, ಸುಂದರ್, ‘ಮಜಾ ಟಾಕೀಸ್’ ಪವನ್ ಮುಂತಾದವರು ನಟಿಸಿದ್ದು, ಚಿತ್ರಕ್ಕೆ ಜಾನ್ ಕೆನಡಿ ಸಂಗೀತ, ಅಜಯ್ ಕುಮಾರ್ ಛಾಯಾಗ್ರಹಣವಿದೆ.

ಕಳೆದ ವರ್ಷ ಬಿಡುಗಡೆಯಾದ ‘ಜೋಗ್‍ 101’ ಚಿತ್ರದಲ್ಲಿ ನಟಿಸಿದ ನಂತರ ತಿಲಕ್‍ ಅಭಿನಯದ ಯಾವೊಂದು ಚಿತ್ರ ಸಹ ಬಿಡುಗಡೆಯಾಗಿರಲಿಲ್ಲ. ಇದಲ್ಲದೆ ಇನ್ನೊಂದಿಷ್ಟು ಚಿತ್ರಗಳಲ್ಲಿ ಅವರು ನಟಿಸಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

6 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

6 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

6 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

6 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

7 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

7 hours ago