ಮನರಂಜನೆ

ಗ್ಯಾಂಗ್‍ಸ್ಟರ್ ಆದ ತಿಲಕ್‍; ಪ್ರ್ಯಾಂಕ್‍ಸ್ಟರ್ ಕಥೆ ಸದ್ಯದಲ್ಲೇ ತೆರೆಗೆ

‘ಗಂಡ-ಹೆಂಡತಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ತಿಲಕ್‍, ನಂತರ ಹಲವು ಚಿತ್ರಗಳಲ್ಲಿ ನೆಗೆಟಿವ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಹೆಚ್ಚಾಗಿ ಪೋಷಕ ಪಾತ್ರಗಳನ್ನೇ ಮಾಡುತ್ತಿದ್ದ ತಿಲಕ್‍, ಇದೀಗ ಸದ್ದಿಲ್ಲದೆ ಒಂದು ಹೊಸ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಿಲಕ್‍ ನಟಿಸಿರುವ ಹೊಸ ಚಿತ್ರದ ಹೆಸರು ‘ಗ್ಯಾಂಗ್‍ಸ್ಟರ್ ಅಲ್ಲ ಪ್ರ್ಯಾಂಕ್‍ಸ್ಟರ್’.

ಈ ಚಿತ್ರವನ್ನು ಗಿರೀಶ್‍ ಕುಮಾರ್‍ ನಿರ್ದೇಶಿಸುವುದರ ಜೊತೆಗೆ ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ನಿರ್ದೇಶಕ ಗಿರೀಶ್‍ ಇದಕ್ಕೂ ಮೊದಲು ‘ಭಾವಚಿತ್ರ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು. ಈಗ ‘ಗ್ಯಾಂಗ್‍ಸ್ಟರ್ ಅಲ್ಲ ಪ್ರ್ಯಾಂಕ್‍ಸ್ಟರ್’ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಒಂದು ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಅವರು, ‘ತಿಲಕ್‍ ಚಿತ್ರದಲ್ಲಿ ಗ್ಯಾಂಗ್‍ಸ್ಟರ್ ಪಾತ್ರ ಮಾಡಿದರೆ, ನಾನು ಪ್ರ್ಯಾಂಕ್‍ಸ್ಟರ್ (ಕುಚೇಷ್ಟೆ ಮಾಡುವವನು) ಪಾತ್ರವನ್ನು ಮಾಡಿದ್ದೇನೆ. ಇದು ಯೂಟ್ಯೂಬರ್ ಒಬ್ಬನ ಸುತ್ತ ನಡೆಯುವ ಕಥೆಯಾಗಿದೆ. ಈಗಾಗಲೇ ಚಿತ್ರದ ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ಮುಗಿದಿದ್ದು, ಈ ಚಿತ್ರವನ್ನು ಇತ್ತೀಚೆಗೆ ಸೆನ್ಸಾರ್ ಮಂಡಳಿಯು ವೀಕ್ಷಣೆ ಮಾಡಿದ್ದು ಚಿತ್ರಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡಿದೆ. ಚಿತ್ರ ಬಹಳ ಬೇಗ ತೆರೆಗೆ ಬರಲಿದೆ’ ಎಂದು ಹೇಳಿದ್ದಾರೆ.

‘ಗ್ಯಾಂಗ್‍ಸ್ಟರ್ ಅಲ್ಲ ಪ್ರ್ಯಾಂಕ್‍ಸ್ಟರ್’ ಚಿತ್ರದಲ್ಲಿ ತಿಲಕ್ ಶೇಖರ್, ಗಿರೀಶ್ ಕುಮಾರ್, ವಿರಾನಿಕ ಶೆಟ್ಟಿ, ಬಲ ರಾಜವಾಡಿ, ಹನುಮಂತೇಗೌಡ, ಭವಾನಿ ಪ್ರಕಾಶ್‍, ಹೊನವಳ್ಳಿ ಕೃಷ್ಣ, ಸಂಗೀತ ಅನಿಲ್, ಸುಂದರ್, ‘ಮಜಾ ಟಾಕೀಸ್’ ಪವನ್ ಮುಂತಾದವರು ನಟಿಸಿದ್ದು, ಚಿತ್ರಕ್ಕೆ ಜಾನ್ ಕೆನಡಿ ಸಂಗೀತ, ಅಜಯ್ ಕುಮಾರ್ ಛಾಯಾಗ್ರಹಣವಿದೆ.

ಕಳೆದ ವರ್ಷ ಬಿಡುಗಡೆಯಾದ ‘ಜೋಗ್‍ 101’ ಚಿತ್ರದಲ್ಲಿ ನಟಿಸಿದ ನಂತರ ತಿಲಕ್‍ ಅಭಿನಯದ ಯಾವೊಂದು ಚಿತ್ರ ಸಹ ಬಿಡುಗಡೆಯಾಗಿರಲಿಲ್ಲ. ಇದಲ್ಲದೆ ಇನ್ನೊಂದಿಷ್ಟು ಚಿತ್ರಗಳಲ್ಲಿ ಅವರು ನಟಿಸಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

12 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

12 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

12 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

13 hours ago