ಮನರಂಜನೆ

ಅಮ್ಮ ಕ್ಷಮಿಸು… ಎನ್ನುತ್ತಿದ್ದಾನೆ ‘ಜಾಂಟಿ ಸನ್ ಆಫ್ ಜಯರಾಜ್’

ರೌಡಿಸಂ ಚಿತ್ರಗಳಲ್ಲಿ ಇತ್ತೀಚೆಗೆ ತಾಯಿ ಸೆಂಟಿಮೆಂಟ್‍ ಹಾಡುಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ ‘ವಾಮನ’ ಚಿತ್ರದಲ್ಲಿ ‘ಕಂಡ ಕನಸ ರೂಪ…’ ಎಂಬ ತಾಯಿ ಸೆಂಟಿಮೆಂಟ್‍ ಹಾಡೊಂದು ಕೇಳಿಬಂದಿತ್ತು. ಇದೀಗ ‘ಜಾಂಟಿ ಸನ್ ಆಫ್ ಜಯರಾಜ್’ ಎಂಬ ಇನ್ನೊಂದು ರೌಡಿಸಂ ಹಿನ್ನೆಲೆಯ ಚಿತ್ರದಲ್ಲೂ ತಾಯಿ ಸೆಂಟಿಮೆಂಟ್‍ ಹಾಡನ್ನು ರೂಪಿಸಲಾಗಿದ್ದು, ಈ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ.

ವಿಶೇಷವೆಂದರೆ, ತಾಯಿ ಸೆಂಟಿಮೆಂಟ್‍ ಹಾಡುಗಳಿಗೆ ಜನಪ್ರಿಯರಾಗಿರುವ ‘ಜೋಗಿ’ ಪ್ರೇಮ್‍ ಈ ಹಾಡನ್ನು ಹಾಡಿದ್ದಾರೆ. ಇದಕ್ಕೂ ಮೊದಲು ಅವರು ‘ಎಕ್ಸ್ಕ್ಯೂಸ್‍ ಮೀ’ ಚಿತ್ರದ ‘ಬ್ರಹ್ಮ ವಿಷ್ಣು ಶಿವ …’, ‘ಜೋಗಿ’ ಚಿತ್ರದ ‘ಕೇಳುವೆನು ವರವನ್ನು ಕೊಡೆ ತಾಯಿ ಜನ್ಮವನು …’ ಮುಂತಾದ ಹಾಡುಗಳನ್ನು ಹಾಡಿದ್ದರು.

‘ಜಾಂಟಿ ಸನ್ ಆಫ್ ಜಯರಾಜ್’ ಚಿತ್ರದಲ್ಲಿ’ಲೋಕದ ಮೂಲ ಬ್ರಹ್ಮನಂತೆ, ಪ್ರೀತಿಯ ಮೂಲ ಅಮ್ಮನಂತೆ, ಅಮ್ಮ ಕ್ಷಮಿಸು …’ ಎನ್ನುವ ಹಾಡನ್ನು ನಿರ್ದೇಶಕ ಆನಂದ್‍ರಾಜ್‍ ಬರೆದಿದ್ದು, ‘ಜೋಗಿ’ ಪ್ರೇಮ್‍ ಧ್ವನಿಯಾಗಿದ್ದಾರೆ. ವಿಜೇತ್‍ ಮಂಜಯ್ಯ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡನ್ನು ಇತ್ತೀಚೆಗೆ ನಿರ್ದೇಶಕ ಯೋಗರಾಜ್‍ ಭಟ್‍ ಮತ್ತು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷೀ ಚೌಧರಿ ಬಿಡುಗಡೆ ಮಾಡಿದ್ದಾರೆ.

ಈ ಚಿತ್ರಕ್ಕೆ ಕಥೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿರುವ ಆನಂದರಾಜ್ ಮಾತನಾಡಿ, ‘ನಾವು ಹಲವರ ಬಳಿ ಯಾವ್ಯಾವುದೋ ಕಾರಣಕ್ಕೆ ಸಾರಿ ಕೇಳುತ್ತೇವೆ. ಆದರೆ ಹೆತ್ತು, ಹೊತ್ತು ಬೆಳೆಸಿದ ಅಮ್ಮನ ಬಳಿ ಕ್ಷಮಿಸು ಅಂತ ಕೇಳೋದಿಲ್ಲ. ನಮ್ಮ ಸಿನಿಮಾ ಮೂಲಕ ಎಲ್ಲಾ ತಾಯಂದರಿಗೂ ಸಾರಿ ಅಂತ ಕೇಳುತ್ತೇವೆ. ಈ ಹಾಡು ಸಿನಿಮಾದ ಕ್ಲೈಮಾಕ್ಸ್‌ದಲ್ಲಿ ಬರುತ್ತದೆ. ಮಗ ತಾಯಿ ಆಸೆಪಟ್ಟಂತೆ ಸಮಾಜದಲ್ಲಿ ಬದುಕದೆ, ತನ್ನದೇ ಹಾದಿಯಲ್ಲಿ ಸಾಗುತ್ತಾನೆ. ಕೊನೆಗೆ ಅಮ್ಮನೇ ಸರ್ವಸ್ವ ಎಂದು ತಿಳಿದಾಗ ಹಿನ್ನಲೆಯಲ್ಲಿ ಹಾಡು ಬರುತ್ತದೆ’ ಎಂದು ಹೇಳಿದರು.

ಯೋಗರಾಜ್‍ ಭಟ್‍ ಮಾತನಾಡಿ, ‘ಬದುಕಲ್ಲಿ ನಾವು ಏನೇ ತಪ್ಪು ಮಾಡಿದರೂ ಕ್ಷಮಿಸುವಂತಹ ಗುಣ ಇರೋದು ತಾಯಿಗೆ ಮಾತ್ರ. ಇಂತಹ ವಿಷಯವನ್ನು ಇಟ್ಟುಕೊಂಡು ಸಾಹಿತ್ಯ ರಚಿಸಿದ ಆನಂದರಾಜ್, ಸಂಗೀತ ಸಂಯೋಜಕ ಮತ್ತು ಹಾಡು ಹಾಡಿದ ಪ್ರೇಮ್‌ಗೆ ನನ್ನ ಕಡೆಯಿಂದ ವೈಯಕ್ತಿಕ ಅಭಿನಂದನೆಗಳು’ ಎಂದರು.

ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷೀ ಹೇಳುವಂತೆ, ‘ನಾವು ಎಲ್ಲವನ್ನೂ ಅಮ್ಮನಿಂದ ಮಾಡಿಸಿಕೊಳ್ಳುತ್ತೇವೆ. ಆದರೆ, ಥ್ಯಾಂಕ್ಸ್ ಹೇಳೋದನ್ನು ಮರೆಯುತ್ತೇವೆ. ಈ ನಿಟ್ಟಿನಲ್ಲಿ ಈ ಗೀತೆ ಮನಮುಟ್ಟುವಂತಿದೆ’ ಎಂದರು.

ಸುಗೂರು ಕುಮಾರ್‍ ನಿರ್ಮಾಣದ ‘ಜಾಂಟಿ ಸನ್ ಆಫ್ ಜಯರಾಜ್’ ಚಿತ್ರದಲ್ಲಿ ಅಜಿತ್‍ ಜಯರಾಜ್‍, ನಿವಿಷ್ಕಾ ಪಟೇಲ್‍, ರಾಜವರ್ಧನ್, ಶರತ್‌ ಲೋಹಿತಾಶ್ವ, ಕಿಶನ್, ಸೋನು ಪಾಟೀಲ್, ಮೈಕೋ ನಾಗರಾಜ್ ಮುಂತಾದವರು ಅಭಿನಯಿಸಿದ್ದಾರೆ

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

9 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

12 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

14 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

14 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

14 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

15 hours ago