ಮನರಂಜನೆ

ಅಮ್ಮ ಕ್ಷಮಿಸು… ಎನ್ನುತ್ತಿದ್ದಾನೆ ‘ಜಾಂಟಿ ಸನ್ ಆಫ್ ಜಯರಾಜ್’

ರೌಡಿಸಂ ಚಿತ್ರಗಳಲ್ಲಿ ಇತ್ತೀಚೆಗೆ ತಾಯಿ ಸೆಂಟಿಮೆಂಟ್‍ ಹಾಡುಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ ‘ವಾಮನ’ ಚಿತ್ರದಲ್ಲಿ ‘ಕಂಡ ಕನಸ ರೂಪ…’ ಎಂಬ ತಾಯಿ ಸೆಂಟಿಮೆಂಟ್‍ ಹಾಡೊಂದು ಕೇಳಿಬಂದಿತ್ತು. ಇದೀಗ ‘ಜಾಂಟಿ ಸನ್ ಆಫ್ ಜಯರಾಜ್’ ಎಂಬ ಇನ್ನೊಂದು ರೌಡಿಸಂ ಹಿನ್ನೆಲೆಯ ಚಿತ್ರದಲ್ಲೂ ತಾಯಿ ಸೆಂಟಿಮೆಂಟ್‍ ಹಾಡನ್ನು ರೂಪಿಸಲಾಗಿದ್ದು, ಈ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ.

ವಿಶೇಷವೆಂದರೆ, ತಾಯಿ ಸೆಂಟಿಮೆಂಟ್‍ ಹಾಡುಗಳಿಗೆ ಜನಪ್ರಿಯರಾಗಿರುವ ‘ಜೋಗಿ’ ಪ್ರೇಮ್‍ ಈ ಹಾಡನ್ನು ಹಾಡಿದ್ದಾರೆ. ಇದಕ್ಕೂ ಮೊದಲು ಅವರು ‘ಎಕ್ಸ್ಕ್ಯೂಸ್‍ ಮೀ’ ಚಿತ್ರದ ‘ಬ್ರಹ್ಮ ವಿಷ್ಣು ಶಿವ …’, ‘ಜೋಗಿ’ ಚಿತ್ರದ ‘ಕೇಳುವೆನು ವರವನ್ನು ಕೊಡೆ ತಾಯಿ ಜನ್ಮವನು …’ ಮುಂತಾದ ಹಾಡುಗಳನ್ನು ಹಾಡಿದ್ದರು.

‘ಜಾಂಟಿ ಸನ್ ಆಫ್ ಜಯರಾಜ್’ ಚಿತ್ರದಲ್ಲಿ’ಲೋಕದ ಮೂಲ ಬ್ರಹ್ಮನಂತೆ, ಪ್ರೀತಿಯ ಮೂಲ ಅಮ್ಮನಂತೆ, ಅಮ್ಮ ಕ್ಷಮಿಸು …’ ಎನ್ನುವ ಹಾಡನ್ನು ನಿರ್ದೇಶಕ ಆನಂದ್‍ರಾಜ್‍ ಬರೆದಿದ್ದು, ‘ಜೋಗಿ’ ಪ್ರೇಮ್‍ ಧ್ವನಿಯಾಗಿದ್ದಾರೆ. ವಿಜೇತ್‍ ಮಂಜಯ್ಯ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡನ್ನು ಇತ್ತೀಚೆಗೆ ನಿರ್ದೇಶಕ ಯೋಗರಾಜ್‍ ಭಟ್‍ ಮತ್ತು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷೀ ಚೌಧರಿ ಬಿಡುಗಡೆ ಮಾಡಿದ್ದಾರೆ.

ಈ ಚಿತ್ರಕ್ಕೆ ಕಥೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿರುವ ಆನಂದರಾಜ್ ಮಾತನಾಡಿ, ‘ನಾವು ಹಲವರ ಬಳಿ ಯಾವ್ಯಾವುದೋ ಕಾರಣಕ್ಕೆ ಸಾರಿ ಕೇಳುತ್ತೇವೆ. ಆದರೆ ಹೆತ್ತು, ಹೊತ್ತು ಬೆಳೆಸಿದ ಅಮ್ಮನ ಬಳಿ ಕ್ಷಮಿಸು ಅಂತ ಕೇಳೋದಿಲ್ಲ. ನಮ್ಮ ಸಿನಿಮಾ ಮೂಲಕ ಎಲ್ಲಾ ತಾಯಂದರಿಗೂ ಸಾರಿ ಅಂತ ಕೇಳುತ್ತೇವೆ. ಈ ಹಾಡು ಸಿನಿಮಾದ ಕ್ಲೈಮಾಕ್ಸ್‌ದಲ್ಲಿ ಬರುತ್ತದೆ. ಮಗ ತಾಯಿ ಆಸೆಪಟ್ಟಂತೆ ಸಮಾಜದಲ್ಲಿ ಬದುಕದೆ, ತನ್ನದೇ ಹಾದಿಯಲ್ಲಿ ಸಾಗುತ್ತಾನೆ. ಕೊನೆಗೆ ಅಮ್ಮನೇ ಸರ್ವಸ್ವ ಎಂದು ತಿಳಿದಾಗ ಹಿನ್ನಲೆಯಲ್ಲಿ ಹಾಡು ಬರುತ್ತದೆ’ ಎಂದು ಹೇಳಿದರು.

ಯೋಗರಾಜ್‍ ಭಟ್‍ ಮಾತನಾಡಿ, ‘ಬದುಕಲ್ಲಿ ನಾವು ಏನೇ ತಪ್ಪು ಮಾಡಿದರೂ ಕ್ಷಮಿಸುವಂತಹ ಗುಣ ಇರೋದು ತಾಯಿಗೆ ಮಾತ್ರ. ಇಂತಹ ವಿಷಯವನ್ನು ಇಟ್ಟುಕೊಂಡು ಸಾಹಿತ್ಯ ರಚಿಸಿದ ಆನಂದರಾಜ್, ಸಂಗೀತ ಸಂಯೋಜಕ ಮತ್ತು ಹಾಡು ಹಾಡಿದ ಪ್ರೇಮ್‌ಗೆ ನನ್ನ ಕಡೆಯಿಂದ ವೈಯಕ್ತಿಕ ಅಭಿನಂದನೆಗಳು’ ಎಂದರು.

ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷೀ ಹೇಳುವಂತೆ, ‘ನಾವು ಎಲ್ಲವನ್ನೂ ಅಮ್ಮನಿಂದ ಮಾಡಿಸಿಕೊಳ್ಳುತ್ತೇವೆ. ಆದರೆ, ಥ್ಯಾಂಕ್ಸ್ ಹೇಳೋದನ್ನು ಮರೆಯುತ್ತೇವೆ. ಈ ನಿಟ್ಟಿನಲ್ಲಿ ಈ ಗೀತೆ ಮನಮುಟ್ಟುವಂತಿದೆ’ ಎಂದರು.

ಸುಗೂರು ಕುಮಾರ್‍ ನಿರ್ಮಾಣದ ‘ಜಾಂಟಿ ಸನ್ ಆಫ್ ಜಯರಾಜ್’ ಚಿತ್ರದಲ್ಲಿ ಅಜಿತ್‍ ಜಯರಾಜ್‍, ನಿವಿಷ್ಕಾ ಪಟೇಲ್‍, ರಾಜವರ್ಧನ್, ಶರತ್‌ ಲೋಹಿತಾಶ್ವ, ಕಿಶನ್, ಸೋನು ಪಾಟೀಲ್, ಮೈಕೋ ನಾಗರಾಜ್ ಮುಂತಾದವರು ಅಭಿನಯಿಸಿದ್ದಾರೆ

ಆಂದೋಲನ ಡೆಸ್ಕ್

Recent Posts

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

18 seconds ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

6 mins ago

ಕಾವೇರಿ ಕಣಿವೆ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕುಸಿತ

ಕೆ.ಬಿ.ರಮೇಶನಾಯಕ ೨೦೧೫, ೨೦೧೬ರ ಅವಧಿಯಲ್ಲಿ ಇದ್ದಷ್ಟೇ ಈ ಬಾರಿಯೂ ಜಲಾಶಯಗಳಲ್ಲಿ ನೀರು ಮೈಸೂರು: ಕೇರಳದ ವಯನಾಡು, ಕೊಡಗಿನ ಭಾಗಮಂಡಲ ಭಾಗದಲ್ಲಿ…

10 mins ago

ಮುಂಗಾರು ಮುನಿದರೂ ಬೆಳೆ ವಿಮೆಗಿಲ್ಲ ರೈತರ ಆಸಕ್ತಿ

ಗಿರೀಶ್ ಹುಣಸೂರು ಜಿಲ್ಲೆಯಲ್ಲಿ ಈವರೆಗೆ ೬,೯೧೦ ರೈತರಿಂದಷ್ಟೇ ಬೆಳೆ ವಿಮೆ ನೋಂದಣಿ ಮೈಸೂರು: ಮುಂಗಾರು ಮಳೆಯ ಕಣ್ಣಾಮುಚ್ಚಾಲೆಯಿಂದಾಗಿ ಪ್ರಸಕ್ತ ವರ್ಷ…

16 mins ago

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

11 hours ago