ಮನರಂಜನೆ

ಅಮ್ಮ ಕ್ಷಮಿಸು… ಎನ್ನುತ್ತಿದ್ದಾನೆ ‘ಜಾಂಟಿ ಸನ್ ಆಫ್ ಜಯರಾಜ್’

ರೌಡಿಸಂ ಚಿತ್ರಗಳಲ್ಲಿ ಇತ್ತೀಚೆಗೆ ತಾಯಿ ಸೆಂಟಿಮೆಂಟ್‍ ಹಾಡುಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ ‘ವಾಮನ’ ಚಿತ್ರದಲ್ಲಿ ‘ಕಂಡ ಕನಸ ರೂಪ…’ ಎಂಬ ತಾಯಿ ಸೆಂಟಿಮೆಂಟ್‍ ಹಾಡೊಂದು ಕೇಳಿಬಂದಿತ್ತು. ಇದೀಗ ‘ಜಾಂಟಿ ಸನ್ ಆಫ್ ಜಯರಾಜ್’ ಎಂಬ ಇನ್ನೊಂದು ರೌಡಿಸಂ ಹಿನ್ನೆಲೆಯ ಚಿತ್ರದಲ್ಲೂ ತಾಯಿ ಸೆಂಟಿಮೆಂಟ್‍ ಹಾಡನ್ನು ರೂಪಿಸಲಾಗಿದ್ದು, ಈ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ.

ವಿಶೇಷವೆಂದರೆ, ತಾಯಿ ಸೆಂಟಿಮೆಂಟ್‍ ಹಾಡುಗಳಿಗೆ ಜನಪ್ರಿಯರಾಗಿರುವ ‘ಜೋಗಿ’ ಪ್ರೇಮ್‍ ಈ ಹಾಡನ್ನು ಹಾಡಿದ್ದಾರೆ. ಇದಕ್ಕೂ ಮೊದಲು ಅವರು ‘ಎಕ್ಸ್ಕ್ಯೂಸ್‍ ಮೀ’ ಚಿತ್ರದ ‘ಬ್ರಹ್ಮ ವಿಷ್ಣು ಶಿವ …’, ‘ಜೋಗಿ’ ಚಿತ್ರದ ‘ಕೇಳುವೆನು ವರವನ್ನು ಕೊಡೆ ತಾಯಿ ಜನ್ಮವನು …’ ಮುಂತಾದ ಹಾಡುಗಳನ್ನು ಹಾಡಿದ್ದರು.

‘ಜಾಂಟಿ ಸನ್ ಆಫ್ ಜಯರಾಜ್’ ಚಿತ್ರದಲ್ಲಿ’ಲೋಕದ ಮೂಲ ಬ್ರಹ್ಮನಂತೆ, ಪ್ರೀತಿಯ ಮೂಲ ಅಮ್ಮನಂತೆ, ಅಮ್ಮ ಕ್ಷಮಿಸು …’ ಎನ್ನುವ ಹಾಡನ್ನು ನಿರ್ದೇಶಕ ಆನಂದ್‍ರಾಜ್‍ ಬರೆದಿದ್ದು, ‘ಜೋಗಿ’ ಪ್ರೇಮ್‍ ಧ್ವನಿಯಾಗಿದ್ದಾರೆ. ವಿಜೇತ್‍ ಮಂಜಯ್ಯ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡನ್ನು ಇತ್ತೀಚೆಗೆ ನಿರ್ದೇಶಕ ಯೋಗರಾಜ್‍ ಭಟ್‍ ಮತ್ತು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷೀ ಚೌಧರಿ ಬಿಡುಗಡೆ ಮಾಡಿದ್ದಾರೆ.

ಈ ಚಿತ್ರಕ್ಕೆ ಕಥೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿರುವ ಆನಂದರಾಜ್ ಮಾತನಾಡಿ, ‘ನಾವು ಹಲವರ ಬಳಿ ಯಾವ್ಯಾವುದೋ ಕಾರಣಕ್ಕೆ ಸಾರಿ ಕೇಳುತ್ತೇವೆ. ಆದರೆ ಹೆತ್ತು, ಹೊತ್ತು ಬೆಳೆಸಿದ ಅಮ್ಮನ ಬಳಿ ಕ್ಷಮಿಸು ಅಂತ ಕೇಳೋದಿಲ್ಲ. ನಮ್ಮ ಸಿನಿಮಾ ಮೂಲಕ ಎಲ್ಲಾ ತಾಯಂದರಿಗೂ ಸಾರಿ ಅಂತ ಕೇಳುತ್ತೇವೆ. ಈ ಹಾಡು ಸಿನಿಮಾದ ಕ್ಲೈಮಾಕ್ಸ್‌ದಲ್ಲಿ ಬರುತ್ತದೆ. ಮಗ ತಾಯಿ ಆಸೆಪಟ್ಟಂತೆ ಸಮಾಜದಲ್ಲಿ ಬದುಕದೆ, ತನ್ನದೇ ಹಾದಿಯಲ್ಲಿ ಸಾಗುತ್ತಾನೆ. ಕೊನೆಗೆ ಅಮ್ಮನೇ ಸರ್ವಸ್ವ ಎಂದು ತಿಳಿದಾಗ ಹಿನ್ನಲೆಯಲ್ಲಿ ಹಾಡು ಬರುತ್ತದೆ’ ಎಂದು ಹೇಳಿದರು.

ಯೋಗರಾಜ್‍ ಭಟ್‍ ಮಾತನಾಡಿ, ‘ಬದುಕಲ್ಲಿ ನಾವು ಏನೇ ತಪ್ಪು ಮಾಡಿದರೂ ಕ್ಷಮಿಸುವಂತಹ ಗುಣ ಇರೋದು ತಾಯಿಗೆ ಮಾತ್ರ. ಇಂತಹ ವಿಷಯವನ್ನು ಇಟ್ಟುಕೊಂಡು ಸಾಹಿತ್ಯ ರಚಿಸಿದ ಆನಂದರಾಜ್, ಸಂಗೀತ ಸಂಯೋಜಕ ಮತ್ತು ಹಾಡು ಹಾಡಿದ ಪ್ರೇಮ್‌ಗೆ ನನ್ನ ಕಡೆಯಿಂದ ವೈಯಕ್ತಿಕ ಅಭಿನಂದನೆಗಳು’ ಎಂದರು.

ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷೀ ಹೇಳುವಂತೆ, ‘ನಾವು ಎಲ್ಲವನ್ನೂ ಅಮ್ಮನಿಂದ ಮಾಡಿಸಿಕೊಳ್ಳುತ್ತೇವೆ. ಆದರೆ, ಥ್ಯಾಂಕ್ಸ್ ಹೇಳೋದನ್ನು ಮರೆಯುತ್ತೇವೆ. ಈ ನಿಟ್ಟಿನಲ್ಲಿ ಈ ಗೀತೆ ಮನಮುಟ್ಟುವಂತಿದೆ’ ಎಂದರು.

ಸುಗೂರು ಕುಮಾರ್‍ ನಿರ್ಮಾಣದ ‘ಜಾಂಟಿ ಸನ್ ಆಫ್ ಜಯರಾಜ್’ ಚಿತ್ರದಲ್ಲಿ ಅಜಿತ್‍ ಜಯರಾಜ್‍, ನಿವಿಷ್ಕಾ ಪಟೇಲ್‍, ರಾಜವರ್ಧನ್, ಶರತ್‌ ಲೋಹಿತಾಶ್ವ, ಕಿಶನ್, ಸೋನು ಪಾಟೀಲ್, ಮೈಕೋ ನಾಗರಾಜ್ ಮುಂತಾದವರು ಅಭಿನಯಿಸಿದ್ದಾರೆ

ಆಂದೋಲನ ಡೆಸ್ಕ್

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

6 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

8 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

9 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

9 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

10 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

12 hours ago