ಬೆಂಗಳೂರು : ಸಿದ್ಲಿಂಗು ಚಿತ್ರದ ಬಳಿಕ ಅನೇಕ ವರ್ಷ ನಟನೆಯಿಂದ ದೂರ ಉಳಿದಿದ್ದ ಸ್ಯಾಂಡಲ್ವುಡ್ ಕ್ವೀನ್ ರಮ್ಯ ಇತ್ತೀಚೆಗೆ ನಟ ಡಾಲಿ ಧನಂಜಯ್ ನಟನೆಯ ‘ಉತ್ತರಕಾಂಡ’ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕಿಯಾಗಿ ನಟಿಸುತ್ತಿರುವುದಾಗಿ ಹೇಳಿದ್ದರು.
ಆದರೆ ಇದೀಗ ಈ ಚಿತ್ರದಿಂದಲೂ ಹೊರನಡೆದಿರುವುದಾಗಿ ತಿಳಿಸುವ ಮೂಲಕ ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.
ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಮಾಹಿತಿ ಹಂಚಿಕೊಂಡಿರುವ ರಮ್ಯಾ, ಚಿತ್ರದ ಶೂಟಿಂಗ್ನಲ್ಲಿ ಪಾಲ್ಗೊಳ್ಳಲು ಸಮಯಾವಕಾಶ ಇಲ್ಲದಿರುವುದರಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
‘ಉತ್ತರಕಾಂಡ” ಚಿತ್ರವನ್ನು ‘ರತ್ನನ್ ಪ್ರಪಂಚ’ ಖ್ಯಾತಿಯ ರೋಹಿತ್ ಪದಕಿ ನಿರ್ದೇಶಿಸುತ್ತಿದ್ದು, ಕೆ.ಆರ್.ಜಿ ಸಂಸ್ಥೆ ನಿರ್ಮಾಣದ ಹೊಣೆ ಹೊತ್ತಿದೆ. ಡಾಲಿ ಧನಂಜಯ್ ಚಿತ್ರದ ನಾಯಕ ನಟನಾಗಿದ್ದು ರಮ್ಯ ಪೂರ್ಣಪ್ರಮಾಣದ ನಾಯಕಿಯಾಗಿ ಆಯ್ಕೆಯಾಗಿದ್ದರು.
ಆದರೆ ಇದೀಗ ಸಮಯದ ತೊಂದರೆಯಿಂದಾಗಿ ‘ಉತ್ತರಕಾಂಡ’ ಚಿತ್ರತಂಡದ ಜೊತೆ ಕೆಲಸ ಮಾಡುತ್ತಿಲ್ಲ. ಸ್ವಲ್ಪ ದಿನಗಳ ಕಾಲ ರಾಜಕೀಯ ಮತ್ತು ಸಿನಿಮಾಗಳಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ್ದೇನೆ ಎಂದಿರುವ ಅವರು ಚಿತ್ರತಂಡಕ್ಕೆ ಶುಭಾಶಯಗಳು’ ಎಂದು ತಿಳಿಸಿದ್ದಾರೆ.
ಈ ಹಿಂದೆ ತಮ್ಮದೇ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ನಾಯಕಿ ಪಾತ್ರದಿಂದ ಹಿಂದೆ ಸರಿದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು. 10 ವರ್ಷಗಳ ಬಳಿಕ ಉತ್ತರಕಾಂಡ ಸಿನಿಮಾ ಮೂಲಕ ನಾನು ಬೆಳ್ಳಿಪರದೆಗೆ ಹಿಂತಿರುಗುತ್ತಿದ್ದೇನೆ’ ಎಂದು ಟ್ವೀಟ್ ಕೂಡ ಮಾಡಿದ್ದರು.
ಈ ಸುದ್ದಿ ಕೇಳಿದ್ದ ರಮ್ಯ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕಿ ಬೆಳ್ಳಿ ತೆರೆಗೆ ಹಿಂದಿರುಗುತ್ತಿರುವುದನ್ನು ಕಾತುರದಿಂದ ಎದುರು ನೋಡುತ್ತಿದ್ದರು. ಆದರೆ ನಟನೆಯಿಂದ ಹಿಂದೆ ಸರೆದಿರುವ ಸುದ್ದಿ ಅಭಿಮಾನಿಗಳಲ್ಲಿ ಬೇಸರ ಉಂಟು ಮಾಡಿದೆ.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…