ಮನರಂಜನೆ

ಉತ್ತರಕಾಂಡ ಚಿತ್ರದಿಂದ ದೂರ ಸರಿದ ಸ್ಯಾಂಡಲ್‌ವುಡ್‌ ಕ್ವೀನ್‌ !

ಬೆಂಗಳೂರು :  ಸಿದ್ಲಿಂಗು ಚಿತ್ರದ ಬಳಿಕ ಅನೇಕ ವರ್ಷ ನಟನೆಯಿಂದ ದೂರ ಉಳಿದಿದ್ದ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯ ಇತ್ತೀಚೆಗೆ ನಟ ಡಾಲಿ ಧನಂಜಯ್‌ ನಟನೆಯ ‘ಉತ್ತರಕಾಂಡ’ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕಿಯಾಗಿ ನಟಿಸುತ್ತಿರುವುದಾಗಿ ಹೇಳಿದ್ದರು.

ಆದರೆ ಇದೀಗ ಈ ಚಿತ್ರದಿಂದಲೂ ಹೊರನಡೆದಿರುವುದಾಗಿ ತಿಳಿಸುವ ಮೂಲಕ ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.

ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಮಾಹಿತಿ ಹಂಚಿಕೊಂಡಿರುವ ರಮ್ಯಾ, ಚಿತ್ರದ ಶೂಟಿಂಗ್‌ನಲ್ಲಿ ಪಾಲ್ಗೊಳ್ಳಲು ಸಮಯಾವಕಾಶ ಇಲ್ಲದಿರುವುದರಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

‘ಉತ್ತರಕಾಂಡ” ಚಿತ್ರವನ್ನು ‘ರತ್ನನ್ ಪ್ರಪಂಚ’ ಖ್ಯಾತಿಯ ರೋಹಿತ್ ಪದಕಿ ನಿರ್ದೇಶಿಸುತ್ತಿದ್ದು, ಕೆ.ಆರ್.ಜಿ ಸಂಸ್ಥೆ ನಿರ್ಮಾಣದ ಹೊಣೆ ಹೊತ್ತಿದೆ. ಡಾಲಿ ಧನಂಜಯ್‌ ಚಿತ್ರದ ನಾಯಕ ನಟನಾಗಿದ್ದು ರಮ್ಯ ಪೂರ್ಣಪ್ರಮಾಣದ ನಾಯಕಿಯಾಗಿ ಆಯ್ಕೆಯಾಗಿದ್ದರು.

ಆದರೆ ಇದೀಗ ಸಮಯದ ತೊಂದರೆಯಿಂದಾಗಿ  ‘ಉತ್ತರಕಾಂಡ’ ಚಿತ್ರತಂಡದ ಜೊತೆ ಕೆಲಸ ಮಾಡುತ್ತಿಲ್ಲ. ಸ್ವಲ್ಪ ದಿನಗಳ ಕಾಲ ರಾಜಕೀಯ ಮತ್ತು ಸಿನಿಮಾಗಳಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ್ದೇನೆ ಎಂದಿರುವ ಅವರು ಚಿತ್ರತಂಡಕ್ಕೆ ಶುಭಾಶಯಗಳು’ ಎಂದು ತಿಳಿಸಿದ್ದಾರೆ.

ಈ ಹಿಂದೆ ತಮ್ಮದೇ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ನಾಯಕಿ ಪಾತ್ರದಿಂದ ಹಿಂದೆ ಸರಿದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು. 10 ವರ್ಷಗಳ ಬಳಿಕ ಉತ್ತರಕಾಂಡ ಸಿನಿಮಾ ಮೂಲಕ ನಾನು ಬೆಳ್ಳಿಪರದೆಗೆ ಹಿಂತಿರುಗುತ್ತಿದ್ದೇನೆ’ ಎಂದು ಟ್ವೀಟ್‌ ಕೂಡ ಮಾಡಿದ್ದರು.

ಈ ಸುದ್ದಿ ಕೇಳಿದ್ದ ರಮ್ಯ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕಿ ಬೆಳ್ಳಿ ತೆರೆಗೆ ಹಿಂದಿರುಗುತ್ತಿರುವುದನ್ನು ಕಾತುರದಿಂದ ಎದುರು ನೋಡುತ್ತಿದ್ದರು. ಆದರೆ ನಟನೆಯಿಂದ ಹಿಂದೆ ಸರೆದಿರುವ ಸುದ್ದಿ ಅಭಿಮಾನಿಗಳಲ್ಲಿ ಬೇಸರ ಉಂಟು ಮಾಡಿದೆ.

 

 

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

4 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

4 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

4 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

4 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

4 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

4 hours ago