ಮನರಂಜನೆ

‘ಎಕ್ಕ’ಗೆ ‘ಸಲಗ’ ನಾಯಕಿ: ಯುವ ರಾಜಕುಮಾರ್‌ಗೆ ಸಂಜನಾ ಆನಂದ್ ಜೋಡಿ

ಯುವ ರಾಜಕುಮಾರ್ ಅಭಿನಯದ ಎರಡನೇ ಚಿತ್ರ ‘ಎಕ್ಕ’, ಜೂನ್‍ 06ರಂದು ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಮುಹೂರ್ತದ ದಿನವೇ ಘೋಷಿಸಿದೆ. ಅದಕ್ಕೆ ಸರಿಯಾಗಿ, ಚಿತ್ರೀಕರಣ ಭರದಿಂದ ಸಾಗಿದ್ದು, ಸಂಕ್ರಾಂತಿ ಹಬ್ಬದ ಪ್ರಯುಕ್ತ ಚಿತ್ರತಂಡದಿಂದ ಸುದ್ದಿಯೊಂದು ಬಂದಿದೆ. ಚಿತ್ರಕ್ಕೆ ನಾಯಕಿಯಾಗಿ ಸಂಜನಾ ಆನಂದ್‍ ಆಯ್ಕೆಯಾಗಿದ್ದು, ಮೊದಲ ಪೋಸ್ಟರ್‍ ಬಿಡುಗಡೆಯಾಗಿದೆ.

ಚಿತ್ರದಲ್ಲಿ ಇಬ್ಬರು ನಾಯಕಿಯರು ಇರುತ್ತಾರಾ? ಎಂಬ ಪ್ರಶ್ನೆ ಚಿತ್ರದ ಮುಹೂರ್ತ ಸಮಾರಂಭದಲ್ಲೇ ಕೇಳಿಬಂದಿತ್ತು. ಆದರೆ, ಈ ಕುರಿತು ಚಿತ್ರತಂಡದವರು ಉತ್ತರಿಸಿರಲಿಲ್ಲ. ಕಾದು ನೋಡಿ ಎಂದಷ್ಟೇ ಹೇಳಿದ್ದರು. ಅದಕ್ಕೆ ಸರಿಯಾಗಿ, ಈಗ ನಾಯಕಿಯಾಗಿ ಸಂಜನಾ ಆನಂದ್ ಅವರನ್ನು ಪರಿಚಯಿಸಲಾಗಿದೆ. ಇದಕ್ಕೂ ಮೊದಲು ಸಂಪದ ಹುಲಿವಾನ ಸಹ ಒಬ್ಬ ನಾಯಕಿ ಎಂದು ಚಿತ್ರತಂಡದವರು ಈಗಾಗಲೇ ಘೋಷಿಸಿದ್ದರು.

‘ಎಕ್ಕ’ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ ರೋಹಿತ್‍ ಪದಕಿ. ಈ ಹಿಂದೆ ‘ರತ್ನನ್‍ ಪ್ರಪಂಚ’ ಮತ್ತು ‘ಉತ್ತರಕಾಂಡ’ ಚಿತ್ರಗಳನ್ನು ನಿರ್ದೇಶಿಸಿರುವ ಅವರಿಗೆ ಇದು ಮೂರನೇ ಚಿತ್ರ. ಈ ಚಿತ್ರದಲ್ಲಿ ಮಾಸ್‍ ಅಂಶಗಳ ಜೊತೆಗೆ ಗಟ್ಟಿ ಕಥೆ ಸಹ ಇದೆ ಎನ್ನುವ ಅವರು, ‘ಇದೊಂದು ರಾ ಚಿತ್ರ. ಅದರ ಜೊತೆಗೆ ಸಾಕಷ್ಟು ಭಾವನೆಗಳಿವೆ. ಚಿತ್ರದ ಮೂಲಕ ಮನುಷ್ಯನ ತಳಮಳವಳನ್ನು ತೋರಿಸುವ ಪ್ರಯತ್ನ ಮಾಡುತ್ತಿದ್ದೇವೆ. ‘ರತ್ನನ್‍ ಪ್ರಪಂಚ’ ಚಿತ್ರದಲ್ಲೂ ತಳಮಳವಿತ್ತು. ಆದರೆ, ಅದರಲ್ಲಿ ರಕ್ತ ಇರಲಿಲ್ಲ. ಇದರಲ್ಲಿ ರಕ್ತ ಇದೆ. ಪ್ರತಿಯೊಬ್ಬರಿಗೂ ಕನೆಕ್ಟ್ ಆಗುವ ವಿಷಯ ಈ ಚಿತ್ರದಲ್ಲಿದೆ’ ಎಂದು ಹೇಳಿದ್ದಾರೆ.

ಈ ಚಿತ್ರದಲ್ಲಿ ಯುವ, ಸಂಜನಾ ಆನಂದ್‍ ಮತ್ತು ಸಂಪದ ಹುಲಿವಾನ ಜೊತೆಗೆ ಅತುಲ್‍ ಕುಲಕರ್ಣಿ, ಶ್ರುತಿ, ಡಾ. ಸೂರಿ, ಪೂರ್ಣಚಂದ್ರ ಮೈಸೂರು, ಪುನೀತ್‍ ರುದ್ರನಾಗ್‍ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಚರಣ್‍ ರಾಜ್‍ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣವಿದೆ.

‘ಎಕ್ಕ’ ಚಿತ್ರವನ್ನು PRK ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್‍ ಮತ್ತು KRG ಸ್ಟುಡಿಯೋಸ್‍ ಅಡಿ ಅಶ್ವಿನಿ ಪುನೀತ್‍ ರಾಜಕುಮಾರ್‍, ಜಯಣ್ಣ, ಭೋಗೇಂದ್ರ, ಕಾರ್ತಿಕ್‍ ಗೌಡ ಮತ್ತು ಯೋಗಿ ಜೊತೆಯಾಗಿ ನಿರ್ಮಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

1 hour ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

2 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

3 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

3 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

3 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

11 hours ago