ಯುವ ರಾಜಕುಮಾರ್ ಅಭಿನಯದ ಎರಡನೇ ಚಿತ್ರ ‘ಎಕ್ಕ’, ಜೂನ್ 06ರಂದು ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಮುಹೂರ್ತದ ದಿನವೇ ಘೋಷಿಸಿದೆ. ಅದಕ್ಕೆ ಸರಿಯಾಗಿ, ಚಿತ್ರೀಕರಣ ಭರದಿಂದ ಸಾಗಿದ್ದು, ಸಂಕ್ರಾಂತಿ ಹಬ್ಬದ ಪ್ರಯುಕ್ತ ಚಿತ್ರತಂಡದಿಂದ ಸುದ್ದಿಯೊಂದು ಬಂದಿದೆ. ಚಿತ್ರಕ್ಕೆ ನಾಯಕಿಯಾಗಿ ಸಂಜನಾ ಆನಂದ್ ಆಯ್ಕೆಯಾಗಿದ್ದು, ಮೊದಲ ಪೋಸ್ಟರ್ ಬಿಡುಗಡೆಯಾಗಿದೆ.
ಚಿತ್ರದಲ್ಲಿ ಇಬ್ಬರು ನಾಯಕಿಯರು ಇರುತ್ತಾರಾ? ಎಂಬ ಪ್ರಶ್ನೆ ಚಿತ್ರದ ಮುಹೂರ್ತ ಸಮಾರಂಭದಲ್ಲೇ ಕೇಳಿಬಂದಿತ್ತು. ಆದರೆ, ಈ ಕುರಿತು ಚಿತ್ರತಂಡದವರು ಉತ್ತರಿಸಿರಲಿಲ್ಲ. ಕಾದು ನೋಡಿ ಎಂದಷ್ಟೇ ಹೇಳಿದ್ದರು. ಅದಕ್ಕೆ ಸರಿಯಾಗಿ, ಈಗ ನಾಯಕಿಯಾಗಿ ಸಂಜನಾ ಆನಂದ್ ಅವರನ್ನು ಪರಿಚಯಿಸಲಾಗಿದೆ. ಇದಕ್ಕೂ ಮೊದಲು ಸಂಪದ ಹುಲಿವಾನ ಸಹ ಒಬ್ಬ ನಾಯಕಿ ಎಂದು ಚಿತ್ರತಂಡದವರು ಈಗಾಗಲೇ ಘೋಷಿಸಿದ್ದರು.
‘ಎಕ್ಕ’ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ ರೋಹಿತ್ ಪದಕಿ. ಈ ಹಿಂದೆ ‘ರತ್ನನ್ ಪ್ರಪಂಚ’ ಮತ್ತು ‘ಉತ್ತರಕಾಂಡ’ ಚಿತ್ರಗಳನ್ನು ನಿರ್ದೇಶಿಸಿರುವ ಅವರಿಗೆ ಇದು ಮೂರನೇ ಚಿತ್ರ. ಈ ಚಿತ್ರದಲ್ಲಿ ಮಾಸ್ ಅಂಶಗಳ ಜೊತೆಗೆ ಗಟ್ಟಿ ಕಥೆ ಸಹ ಇದೆ ಎನ್ನುವ ಅವರು, ‘ಇದೊಂದು ರಾ ಚಿತ್ರ. ಅದರ ಜೊತೆಗೆ ಸಾಕಷ್ಟು ಭಾವನೆಗಳಿವೆ. ಚಿತ್ರದ ಮೂಲಕ ಮನುಷ್ಯನ ತಳಮಳವಳನ್ನು ತೋರಿಸುವ ಪ್ರಯತ್ನ ಮಾಡುತ್ತಿದ್ದೇವೆ. ‘ರತ್ನನ್ ಪ್ರಪಂಚ’ ಚಿತ್ರದಲ್ಲೂ ತಳಮಳವಿತ್ತು. ಆದರೆ, ಅದರಲ್ಲಿ ರಕ್ತ ಇರಲಿಲ್ಲ. ಇದರಲ್ಲಿ ರಕ್ತ ಇದೆ. ಪ್ರತಿಯೊಬ್ಬರಿಗೂ ಕನೆಕ್ಟ್ ಆಗುವ ವಿಷಯ ಈ ಚಿತ್ರದಲ್ಲಿದೆ’ ಎಂದು ಹೇಳಿದ್ದಾರೆ.
ಈ ಚಿತ್ರದಲ್ಲಿ ಯುವ, ಸಂಜನಾ ಆನಂದ್ ಮತ್ತು ಸಂಪದ ಹುಲಿವಾನ ಜೊತೆಗೆ ಅತುಲ್ ಕುಲಕರ್ಣಿ, ಶ್ರುತಿ, ಡಾ. ಸೂರಿ, ಪೂರ್ಣಚಂದ್ರ ಮೈಸೂರು, ಪುನೀತ್ ರುದ್ರನಾಗ್ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣವಿದೆ.
‘ಎಕ್ಕ’ ಚಿತ್ರವನ್ನು PRK ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್ ಮತ್ತು KRG ಸ್ಟುಡಿಯೋಸ್ ಅಡಿ ಅಶ್ವಿನಿ ಪುನೀತ್ ರಾಜಕುಮಾರ್, ಜಯಣ್ಣ, ಭೋಗೇಂದ್ರ, ಕಾರ್ತಿಕ್ ಗೌಡ ಮತ್ತು ಯೋಗಿ ಜೊತೆಯಾಗಿ ನಿರ್ಮಿಸುತ್ತಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…