ಮನರಂಜನೆ

ಜನವರಿ10ರಂದು ‘ಛೂ ಮಂತರ್’ ಮಾಡಲಿದ್ದಾರೆ ಸಂಜು ಮತ್ತು ಗೀತಾ

‘ಸಂಜು ವೆಡ್ಸ್ ಗೀತಾ 2’ ಚಿತ್ರದ ಚಿತ್ರೀಕರಣ ಮುಗಿದು ನಾಲ್ಕು ತಿಂಗಳುಗಳಾಗಿವೆ. ಆದರೆ, ಚಿತ್ರದ ಬಿಡುಗಡೆ ಯಾವಾಗ ಎಂಬ ವಿಷಯದಲ್ಲಿ ಸ್ಪಷ್ಟತೆ ಇರಲಿಲ್ಲ. ಮೊದಲು ದಸರಾ ವೇಳೆ ಚಿತ್ರ ಬರುತ್ತದೆ ಎಂದು ಸುದ್ದಿಯಾಗಿದ್ದರೂ, ಕಾರಣಾಂತರಳಿಂದ ಚಿತ್ರ ಬರಲಿಲ್ಲಿ. ಇದೀಗ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ಸಂಕ್ರಾಂತಿ ಪ್ರಯುಕ್ತ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ 10ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

‘ಸಂಜು ವೆಡ್ಸ್ ಗೀತಾ’ ಚಿತ್ರವು 2011ರಲ್ಲಿ ಬಿಡುಗಡೆಯಾಗಿತ್ತು. ಶ್ರೀನಗರ ಕಿಟ್ಟಿ ಮತ್ತು ರಮ್ಯಾ, ಸಂಜು ಮತ್ತು ಗೀತಾ ಎಂಬ ಯುವ ಪ್ರೇಮಿಗಳಾಗಿ ನಟಿಸಿದ್ದರು. ದುರಂತಕಥೆಯಾದ ‘ಸಂಜು ವೆಡ್ಸ್ ಗೀತಾ’ ದೊಡ್ಡ ಯಶಸ್ಸು ಕಂಡಿತ್ತು. ಆ ಚಿತ್ರವನ್ನು ಇದೀಗ ನಾಗಶೇಖರ್‍ ಮುಂದುವರೆಸಿದ್ದಾರೆ. ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಪ್ರಾರಂಭವಾಗಿತ್ತು. ಇದೀಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಜನವರಿ 10ರಂದು ಚಿತ್ರ ಬಿಡುಗಡೆಯಾಗುತ್ತಿದೆ.

ವಿಶೇಷವೆಂದರೆ, ಅದೇ ದಿನ ಶರಣ್‍ ಅಭಿನಯದ ‘ಛೂ ಮಂತರ್‍’ ಚಿತ್ರ ಬಿಡುಗಡೆಯಾಗಬೇಕಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಚಿತ್ರ ಇಷ್ಟರಲ್ಲಿ ಬಿಡುಗಡೆಯಾಗಿಯೇ ಎಂಟು ತಿಂಗಳಾಗಬೇಕಿತ್ತು. ಏಪ್ರಿಲ್‍ನಲ್ಲೇ ಚಿತ್ರ ಬಿಡುಗಡೆ ಎಂದು ಚಿತ್ರತಂಡ ಘೋಷಿಸಿತ್ತು. ಆದರರೆ, ಏಪ್ರಿಲ್‍ನಲ್ಲಿ ಬಿಡುಗಡೆಯಾಗಲಿಲ್ಲ. ನಂತರ ಮೇ ಎಂದು ಹೇಳಲಾಯ್ತು. ಇದೀಗ ಕೊನೆಗೂ 2025ರ ಜನವರಿ 10ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ.

ಸಂಜು ವೆಡ್ಸ್ ಗೀತಾ 2’ ಚಿತ್ರದಲ್ಲಿ ರೇಶ್ಮೆ ನೂಲಿಗೆ ಉತ್ತಮ ಬೆಲೆ ಸಿಗಬೇಕೆಂದು ಹೋರಾಡುವ ನಮ್ಮ ಮಣ್ಣಿನ ಪ್ರೇಮಿಗಳ ಪ್ರೇಮಕಾವ್ಯವನ್ನು ನಾಗಶೇಖರ್ ‘ಸಂಜು ವೆಡ್ಸ್ ಗೀತಾ’ ಚಿತ್ರದಲ್ಲಿ ಹೇಳಿದರೆ, ‘ಛೂ ಮಂತರ್’ ಮೂಲಕ ಒಂದು ಹಾರರ್‍ ಕಥೆಯನ್ನು ಹೇಳುವುದಕ್ಕೆ ಮುಂದಾಗಿದ್ದಾರೆ ನಿರ್ದೇಶಕ ನವನೀತ್‍.

‘ಸಂಜು ವೆಡ್ಸ್ ಗೀತಾ 2’ ಚಿತ್ರವನ್ನು ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ನಿರ್ಮಿಸಿದ್ದು, ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ, ರಚಿತಾ ರಾಮ್, ರಂಗಾಯಣ ರಘು, ಸಾಧು ಕೋಕಿಲ, ತಬಲಾ ನಾಣಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇನ್ನು, ‘ಛೂ ಮಂತರ್’ ಚಿತ್ರದಲ್ಲಿ ಶರಣ್‍ ಜೊತೆಗೆ ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಚಿಕ್ಕಣ್ಣ, ಪ್ರಭು ಮುಂಡ್ಕರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಭೂಮಿಕಾ

Recent Posts

ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ : ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಆಗ್ರಹ

ತಿರುವನಂತಪುರಂ : ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ವೇಳೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಅವರ ಆತ್ಮಹತ್ಯೆ…

5 mins ago

ಬೌದ್ಧ ಧರ್ಮಗುರು ದಲೈಲಾಮಾಗೆ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಗೌರವ

ಟಿಬೆಟ್‌ ಬೌದ್ಧ ಧರ್ಮಗುರು ಮತ್ತು ಜಾಗತಿಕ ಶಾಂತಿದೂತ ಎಂದು ಪ್ರಖ್ಯಾತರಾದ ದಲೈಲಾಮಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತಮ್ಮ…

1 hour ago

ಮಂಡ್ಯ| ಸಿದ್ಧಗಂಗಾಶ್ರೀಗಳ ಆದರ್ಶ ಅಜರಾಮರ: ಯು.ಸಿ.ಶಿವಕುಮಾರ್‌

ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್‌ಮುಲ್‌ ಅಧ್ಯಕ್ಷ ಯು.ಸಿ.ಶಿವಕುಮಾರ್‌ ಹೇಳಿದರು. ಮಂಡ್ಯ ನಗರದ…

1 hour ago

ರಾಜ್ಯ ಸರ್ಕಾರ ಪಾಪರ್‌ ಆಗಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ…

2 hours ago

ಚಾಮರಾಜನಗರ| ಫ್ಲೋರೈಡ್‌ ಮಿಶ್ರಿತ ನೀರು ಸೇವಿಸಿ ಕಿಡ್ನಿ ಕಳೆದುಕೊಂಡ 47 ಜನ

ಚಾಮರಾಜನಗರ: ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು…

2 hours ago

ಹುಣಸೂರು: ಬಾರ್‌ ತೆರೆಯಲು ಅವಕಾಶ ನೀಡದಂತೆ ಗ್ರಾಮಸ್ಥರ ಆಗ್ರಹ

ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್‌ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ…

3 hours ago