ಮನರಂಜನೆ

ಹೊಸ ರೂಪದಲ್ಲಿ ‘ಸಂಜು ವೆಡ್ಸ್ ಗೀತಾ 2’; ಸದ್ಯದಲ್ಲೇ ಬಿಡುಗಡೆ

ಸಾಕಷ್ಟು ಸಂಕಷ್ಟಗಳ ಮಧ್ಯೆ ಜನವರಿ 17ರಂದು ಬಿಡುಗಡೆಯಾಗಿದ್ದ ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್‍ ಅಭಿನಯದ ‘ಸಂಜು ವೆಡ್ಸ್ ಗೀತಾ 2’ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಷ್ಟೇನೂ ಒಳ್ಳೆಯ ಪ್ರತಿಕ್ರಿಯೆ ಸಿಗಲಿಲ್ಲ. ಚಿತ್ರ ಅದ್ಧೂರಿಯಾಗಿ ಮೂಡಿಬಂದಿದೆಯಾದರೂ, ತಾಂತ್ರಿಕ ಶ್ರೀಮಂತವಾಗಿದ್ದರೂ, ಕಥೆಯಲ್ಲಿ ಗಟ್ಟಿತನವಿಲ್ಲ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿ ಕೇಳಿಬಂದಿತ್ತು. ಚಿತ್ರದ ಕಥೆ-ಚಿತ್ರಕಥೆ ಮತ್ತಷ್ಟು ಗಟ್ಟಿಯಾಗಿದ್ದರೆ, ಇನ್ನಷ್ಟು ಮನಕಲಕುವ ಅಂಶಗಳು ಇದ್ದಿದ್ದರೆ ಚೆನ್ನಾಗಿರುತ್ತಿತ್ತು ಎಂಬ ಮಾತು ಕೇಳಿಬಂದಿತ್ತು.

ಈ ವಿಷಯ ಚಿತ್ರತಂಡಕ್ಕೂ ಸ್ಪಷ್ಟವಾಗಿರುವ ಹಾಗಿದೆ. ಹಾಗಾಗಿ, ಚಿತ್ರದ ಪ್ರದರ್ಶನವನ್ನು ಸ್ಥಗಿತಗೊಳಿಸಿ, ಇನ್ನಷ್ಟು ವಿಷಯಗಳನ್ನು ಸೇರಿಸಿ, ಮತ್ತೊಮ್ಮೆ ಹೊಸದಾಗಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಹೆಜ್ಜೆ ಇಟ್ಟಿದೆ. ಅದಕ್ಕೆ ಪೂರಕವಾಗಿ ಜನವರಿ 20ರಿಂದಲೇ ‘ಸಂಜು ವೆಡ್ಸ್ ಗೀತಾ 2’ ಚಿತ್ರದ ಪ್ರದರ್ಶನವನ್ನು ವಿತರಕರಿಗೆ ಹೇಳಿ ಎಲ್ಲಾ ಕೇಂದ್ರಗಳಲ್ಲಿ ಸ್ಥಗಿತಗೊಳಿಸಲಾಗಿದೆ.

ವಿಶೇಷವೆಂದರೆ, ಹೊಸದಾಗಿ 20 ನಿಮಿಷಗಳ ಹೃದಯಸ್ಪರ್ಶಿ ದೃಶ್ಯಗಳನ್ನು ಚಿತ್ರಕ್ಕೆ ಮರು ಜೋಡಿಸಲಾಗುತ್ತಿದೆ. ಈ ಹೊಸ ಅವತರಣಿಕೆಯನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗುತ್ತಿದ್ದು, ಮರುಬಿಡುಗಡೆಯ ದಿನಾಂಕವನ್ನು ಅತಿ ಶೀಘ್ರದಲ್ಲೇ ಪ್ರಕಟಿಸುವುದಾಗಿ ನಿರ್ಮಾಪಕ ಛಲವಾದಿ‌ ಕುಮಾರ್ ಹಾಗೂ ನಿರ್ದೇಶಕ ನಾಗಶೇಖರ್ ತಿಳಿಸಿದ್ದಾರೆ.

ಈ ಹಿಂದೆ, ಡಾ. ರಾಜಕುಮಾರ್‍ ಅಭಿನಯದ ‘ಬಿಡುಗಡೆ’ ಚಿತ್ರದಲ್ಲಿ ನಿರಪರಾಧಿಗೆ ಗಲ್ಲು ಶಿಕ್ಷೆಯಾಗುವಂತೆ ಚಿತ್ರೀಕರಣ ಮಾಡಿ ಬಿಡುಗಡೆ ಮಾಡಲಾಯಿತು. ಆದರೆ, ಪ್ರೇಕ್ಷಕರು ಈ ಅಂತ್ಯವನ್ನು ಒಪ್ಪದ ಕಾರಣ, ನಂತರ ನಾಯಕನನ್ನು ಬಂಧಮುಕ್ತಗೊಳಿಸುವಂತೆ ಚಿತ್ರೀಕರಣ ಮಾಡಿ, ಚಿತ್ರವನ್ನು ಮತ್ತೊಮ್ಮೆ ಬಿಡುಗಡೆ ಮಾಡಲಾಯಿತು.

‘ಸಂಜು ವೆಡ್ಸ್ ಗೀತಾ 2’ ಚಿತ್ರದಲ್ಲಿ ಶ್ರೀನಗರ ಕಿಟ್ಟಿ, ರಚಿತಾ ರಾಮ್, ರಂಗಾಯಣ ರಘು, ಸಾಧು ಕೋಕಿಲ, ತಬಲಾ ನಾಣಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಶ್ರೀಧರ್‍ ಸಂಭ್ರಮ್‍ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

6 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

7 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago