ಮನರಂಜನೆ

‘ಸಂಜು ವೆಡ್ಸ್ ಗೀತಾ 2’ ಬಿಡುಗಡೆಗೆ ತಡೆಯಾಜ್ಞೆ; ಈ ವಾರ ಬಿಡುಗಡೆ ಇಲ್ಲ

ಈ ಹಿಂದೆ ಕೆಲವು ಚಿತ್ರಗಳು ಹಣಕಾಸಿನ ಸಮಸ್ಯೆಗಳಿಂದಾಗಿ ಮುಂದೂಡಲ್ಪಟ್ಟ ಹಲವು ಉದಾಹರಣೆಗಳು ಇವೆ. ಇನ್ನೂ ಕೆಲವು ಚಿತ್ರಗಳು ಬಿಡುಗಡೆಯೇ ಆಗುವುದಿಲ್ಲ ಎಂಬ ಪರಿಸ್ಥಿತಿ ಎದುರಾಗಿ, ಕೊನೆಯ ಕ್ಷಣದ ಸಂಧಾನಗಳಿಂದ ಸಮಸ್ಯೆಗಳು ಬಗೆಹರಿದು, ಕೊನೆಗೆ ಚಿತ್ರ ಬಿಡುಗಡೆಯಾದ ಉದಾಹರಣೆಗಳೂ ಇವೆ. ಹಣಕಾಸಿನ ಸಮಸ್ಯೆಯಿಂದಾಗಿ ಇದೀಗ ‘ಸಂಜು ವೆಡ್ಸ್ ಗೀತಾ 2’ ಚಿತ್ರ ಇಂದು ಬಿಡುಗಡೆಯಾಗುತ್ತಿಲ್ಲ.

ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್‍ ಅಭಿನಯದ ‘ಸಂಜು ವೆಡ್ಸ್ ಗೀತಾ 2’ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ತರಲಾಗಿದ್ದು, ಈ ಚಿತ್ರದ ಬಿಡುಗಡೆ ಇದೀಗ ಮುಂದಕ್ಕೆ ಹೋಗಿದೆ. ಈ ವಿಷಯವನ್ನು ಚಿತ್ರತಂಡದವರೇ ಅಧಿಕೃತವಾಗಿ ಹೇಳಿದ್ದು, ಸದ್ಯದಲ್ಲೇ ಘೋಷಣೆ ಮಾಡುವುದಾಗಿ ಘೋಷಿಸಿದ್ದಾರೆ.

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ 10ರಂದು ಬಿಡುಗಡೆಯಾಗಬೇಕಿತ್ತು. ಆದರೆ, ಎರಡು ದಿನಗಳ ಹಿಂದೆಯೇ ಚಿತ್ರದ ಬಿಡುಗಡೆ ಅನುಮಾನ ಎಂಬ ಸುದ್ದಿಯೂ ಕೇಳಿಬಂದಿತ್ತು. ಚಿತ್ರಕ್ಕೆ ನಿರ್ಮಾಪಕರು ಆರು ಕೋಟಿ ರೂ.ಗಳಿಗೂ ಹೆಚ್ಚು ಸಾಲ ಮಾಡಿದ್ದು, ಅದನ್ನು ಬಿಡುಗಡೆಗೆ ಮುನ್ನ ತೀರಿಸುವುದಾಗಿ ಹೇಳಿದ್ದರಂತೆ. ಆದರೆ, ಅಂದುಕೊಂಡಂತೆ ತೀರಿಸಲಾಗದ ಕಾರಣ ಚಿತ್ರಕ್ಕೆ ಹಣದ ನೀಡಿದ ಫೈನಾನ್ಶಿಯರ್‍ಗಳು, ಚಿತ್ರ ಬಿಡುಗಡೆ ಆಗದಂತೆ ತಡೆಯಾಜ್ಞೆ ತಂದಿದ್ದಾರೆ ಎಂದು ರಾಜರಾಜೇಶ್ವರಿ ನಗರದಿಂದ ಸುದ್ದಿ ಬಂದಿದೆ.

ಈ ವಿಷಯದ ಕುರಿತು ನಿರ್ದೇಶಕ ನಾಗಶೇಖರ್‍ ಆಗಲೀ, ನಿರ್ಮಾಪಕ ಛಲವಾದಿ ಕುಮಾರ್‍ ಯಾವುದೇ ಸ್ಪಷ್ಟನೆ ನೀಡಿಲ್ಲ. ಚಿತ್ರ ಮುಂದಕ್ಕೆ ಹೋಗಿದೆ ಎಂದು ಹೇಳುವ ಪೋಸ್ಟರ್‍ ಒಂದು ಬಿಡುಗಡೆ ಮಾಡಿದ್ದಾರೆ.

‘ಸಂಜು ವೆಡ್ಸ್ ಗೀತಾ 2’ ಚಿತ್ರದಲ್ಲಿ ರೇಶ್ಮೆ ನೂಲಿಗೆ ಉತ್ತಮ ಬೆಲೆ ಸಿಗಬೇಕೆಂದು ಹೋರಾಡುವ ಕನ್ನಡದ ಮಣ್ಣಿನ ಪ್ರೇಮಿಗಳ ಕಥೆ ಇದೆ. ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ನಿರ್ಮಿಸಿರುವ ‘ಸಂಜು ವೆಡ್ಸ್ ಗೀತಾ 2’ ಚಿತ್ರದಲ್ಲಿ ಶ್ರೀನಗರ ಕಿಟ್ಟಿ, ರಚಿತಾ ರಾಮ್, ರಂಗಾಯಣ ರಘು, ಸಾಧು ಕೋಕಿಲ, ತಬಲಾ ನಾಣಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಶ್ರೀಧರ್‍ ಸಂಭ್ರಮ್‍ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

35 mins ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

50 mins ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

1 hour ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

2 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

3 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

3 hours ago