ದೊಡ್ಮನೆ ಕುಡಿ, ರಾಜ್ಕುಮಾರ್ ಮೊಮ್ಮಗ ಯುವರಾಜ್ ಕುಮಾರ್ ಪತ್ನಿ ಶ್ರೀದೇವಿ ತಮ್ಮ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ನಿರ್ಬಂಧಕಾಜ್ಞೆ ಕೋರಿ ಕಾಂತಾರ ಚೆಲುವೆ ಸಪ್ತಮಿ ಗೌಡ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಮೊರೆ ಹೋಗಿದ್ದಾರೆ.
ನಾಲ್ಕು ವರ್ಷಗಳ ಪ್ರೇಮ ವಿವಾಹದ ನಂತರ ನಟ ಯುವರಾಜ್ ಕುಮಾರ್ ತಮ್ಮ ಪತ್ನಿ ಶ್ರೀದೇವಿ ವಿರುದ್ಧ ಮಾನಸಿಕ ಹಿಂಸೆ ಅಗೌರವ ಮತ್ತು ಕ್ರೌರ್ಯ ಆರೋಪ ಹೊರಿಸಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಕೊರಿ ಅರ್ಜಿ ಸಲ್ಲಿಸಿದ್ದರು.
ಇತ್ತ ಯುವರಾಜ್ ಕುಮಾರ್ ಪರ ವಕೀಲರು ಶ್ರೀದೇವಿ ವಿರುದ್ಧ ಹಲವಾರು ಆರೋಪಗಳನ್ನು ಮಾಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಶ್ರೀದೇವಿ ಅವರು, ತಮ್ಮ ಪತಿ ಯುವ ವಿರುದ್ಧವೇ ಅಕ್ರಮ ಸಂಬಂಧ ಆರೋಪ ಮಾಡಿದ್ದರು. ಈ ಆರೋಪದಲ್ಲಿ ಕನ್ನಡದ ನಟಿ ಸಪ್ತಮಿ ಗೌಡ ಹೆಸರನ್ನು ಸಹಾ ಮುನ್ನಲೆಗೆ ಎಳೆದಿದ್ದರು. ತಾವು ಅಮೇರಿಕಾಕ್ಕೆ ತೆರಳಿದ್ದ ವೇಳೆ ಯುವರಾಜ್ ಕುಮಾರ್ ಹಾಗೂ ಸಪ್ತಮಿ ಗೌಡ ಸಜೀವನ ನಡೆಸಿದ್ದಾರೆ. ಈ ವಿಚಾರವಾಗಿ ನನ್ನನ್ನು ಮನೆಯಿಂದ ಹೊರ ಹಾಕುವ ಪ್ರಯತ್ನವು ನಡೆದಿತ್ತು ಎಂದು ಶ್ರೀದೇವಿ ಪರ ವಕೀಲರು ಗಂಭೀರವಾಗಿ ಆರೋಪ ಮಾಡಿದ್ದರು.
ಶ್ರೀದೇವಿ ಪರ ಕೋರ್ಟ್ ಮೆಟ್ಟಿಲೇರಿರುವ ಸಪ್ತಮಿ ಗೌಡ, ಶ್ರೀದೇವಿ ಅವರು ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಸುಳ್ಳು ಆರೋಪ ಮಾಡುವ ಮೂಲಕ ಮಾನಹಾನಿಕಾರ ಹೇಳಿಕೆ ನೀಡುತ್ತಿದ್ದಾರೆ. ನನ್ನ ಚಾರಿತ್ರ್ಯ ವಧೆಯಾಗಲಿದೆ ಎಂದು ಕೋರ್ಟ್ ಮೆಟ್ಟಿಲೇರಿ ನಿರ್ಬಂಧಕಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ.
ಇದಕ್ಕೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಶ್ರೀದೇವಿ ಅವರಿಗೆ ನೋಟಿಸ್ ಜಾರಿ ಮಾಡುವಂತೆ ಆದೇಶಿಸಿದೆ. ಪ್ರಸ್ತುತ ಅವರು ಅಮೇರಿಕಾದ ಹಾರ್ವರ್ಡ್ ಯುನಿವರ್ಸಿಟಿಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಅವರು ದೇಶಕ್ಕೆ ಹಿಂದಿರುಗಿದ ಬಳಿಕ ಈ ಪ್ರಕರಣದ ಮುಂದಿನ ತಿರುವು ತಿಳಿಯಲಿದೆ.
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…