ದೊಡ್ಮನೆ ಕುಡಿ, ರಾಜ್ಕುಮಾರ್ ಮೊಮ್ಮಗ ಯುವರಾಜ್ ಕುಮಾರ್ ಪತ್ನಿ ಶ್ರೀದೇವಿ ತಮ್ಮ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ನಿರ್ಬಂಧಕಾಜ್ಞೆ ಕೋರಿ ಕಾಂತಾರ ಚೆಲುವೆ ಸಪ್ತಮಿ ಗೌಡ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಮೊರೆ ಹೋಗಿದ್ದಾರೆ.
ನಾಲ್ಕು ವರ್ಷಗಳ ಪ್ರೇಮ ವಿವಾಹದ ನಂತರ ನಟ ಯುವರಾಜ್ ಕುಮಾರ್ ತಮ್ಮ ಪತ್ನಿ ಶ್ರೀದೇವಿ ವಿರುದ್ಧ ಮಾನಸಿಕ ಹಿಂಸೆ ಅಗೌರವ ಮತ್ತು ಕ್ರೌರ್ಯ ಆರೋಪ ಹೊರಿಸಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಕೊರಿ ಅರ್ಜಿ ಸಲ್ಲಿಸಿದ್ದರು.
ಇತ್ತ ಯುವರಾಜ್ ಕುಮಾರ್ ಪರ ವಕೀಲರು ಶ್ರೀದೇವಿ ವಿರುದ್ಧ ಹಲವಾರು ಆರೋಪಗಳನ್ನು ಮಾಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಶ್ರೀದೇವಿ ಅವರು, ತಮ್ಮ ಪತಿ ಯುವ ವಿರುದ್ಧವೇ ಅಕ್ರಮ ಸಂಬಂಧ ಆರೋಪ ಮಾಡಿದ್ದರು. ಈ ಆರೋಪದಲ್ಲಿ ಕನ್ನಡದ ನಟಿ ಸಪ್ತಮಿ ಗೌಡ ಹೆಸರನ್ನು ಸಹಾ ಮುನ್ನಲೆಗೆ ಎಳೆದಿದ್ದರು. ತಾವು ಅಮೇರಿಕಾಕ್ಕೆ ತೆರಳಿದ್ದ ವೇಳೆ ಯುವರಾಜ್ ಕುಮಾರ್ ಹಾಗೂ ಸಪ್ತಮಿ ಗೌಡ ಸಜೀವನ ನಡೆಸಿದ್ದಾರೆ. ಈ ವಿಚಾರವಾಗಿ ನನ್ನನ್ನು ಮನೆಯಿಂದ ಹೊರ ಹಾಕುವ ಪ್ರಯತ್ನವು ನಡೆದಿತ್ತು ಎಂದು ಶ್ರೀದೇವಿ ಪರ ವಕೀಲರು ಗಂಭೀರವಾಗಿ ಆರೋಪ ಮಾಡಿದ್ದರು.
ಶ್ರೀದೇವಿ ಪರ ಕೋರ್ಟ್ ಮೆಟ್ಟಿಲೇರಿರುವ ಸಪ್ತಮಿ ಗೌಡ, ಶ್ರೀದೇವಿ ಅವರು ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಸುಳ್ಳು ಆರೋಪ ಮಾಡುವ ಮೂಲಕ ಮಾನಹಾನಿಕಾರ ಹೇಳಿಕೆ ನೀಡುತ್ತಿದ್ದಾರೆ. ನನ್ನ ಚಾರಿತ್ರ್ಯ ವಧೆಯಾಗಲಿದೆ ಎಂದು ಕೋರ್ಟ್ ಮೆಟ್ಟಿಲೇರಿ ನಿರ್ಬಂಧಕಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ.
ಇದಕ್ಕೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಶ್ರೀದೇವಿ ಅವರಿಗೆ ನೋಟಿಸ್ ಜಾರಿ ಮಾಡುವಂತೆ ಆದೇಶಿಸಿದೆ. ಪ್ರಸ್ತುತ ಅವರು ಅಮೇರಿಕಾದ ಹಾರ್ವರ್ಡ್ ಯುನಿವರ್ಸಿಟಿಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಅವರು ದೇಶಕ್ಕೆ ಹಿಂದಿರುಗಿದ ಬಳಿಕ ಈ ಪ್ರಕರಣದ ಮುಂದಿನ ತಿರುವು ತಿಳಿಯಲಿದೆ.
ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…
ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…
‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…
ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…