ಮನರಂಜನೆ

ಯುವರಾಜ್‌ ಕುಮಾರ್‌ ಪತ್ನಿ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ ಕಾಂತಾರ ಬೆಡಗಿ!

ದೊಡ್ಮನೆ ಕುಡಿ, ರಾಜ್‌ಕುಮಾರ್‌ ಮೊಮ್ಮಗ ಯುವರಾಜ್‌ ಕುಮಾರ್‌ ಪತ್ನಿ ಶ್ರೀದೇವಿ ತಮ್ಮ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ನಿರ್ಬಂಧಕಾಜ್ಞೆ ಕೋರಿ ಕಾಂತಾರ ಚೆಲುವೆ ಸಪ್ತಮಿ ಗೌಡ ಬೆಂಗಳೂರು ಸಿಟಿ ಸಿವಿಲ್‌ ಕೋರ್ಟ್‌ ಮೊರೆ ಹೋಗಿದ್ದಾರೆ.

ನಾಲ್ಕು ವರ್ಷಗಳ ಪ್ರೇಮ ವಿವಾಹದ ನಂತರ ನಟ ಯುವರಾಜ್‌ ಕುಮಾರ್‌ ತಮ್ಮ ಪತ್ನಿ ಶ್ರೀದೇವಿ ವಿರುದ್ಧ ಮಾನಸಿಕ ಹಿಂಸೆ ಅಗೌರವ ಮತ್ತು ಕ್ರೌರ್ಯ ಆರೋಪ ಹೊರಿಸಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಕೊರಿ ಅರ್ಜಿ ಸಲ್ಲಿಸಿದ್ದರು.

ಇತ್ತ ಯುವರಾಜ್‌ ಕುಮಾರ್‌ ಪರ ವಕೀಲರು ಶ್ರೀದೇವಿ ವಿರುದ್ಧ ಹಲವಾರು ಆರೋಪಗಳನ್ನು ಮಾಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಶ್ರೀದೇವಿ ಅವರು, ತಮ್ಮ ಪತಿ ಯುವ ವಿರುದ್ಧವೇ ಅಕ್ರಮ ಸಂಬಂಧ ಆರೋಪ ಮಾಡಿದ್ದರು. ಈ ಆರೋಪದಲ್ಲಿ ಕನ್ನಡದ ನಟಿ ಸಪ್ತಮಿ ಗೌಡ ಹೆಸರನ್ನು ಸಹಾ ಮುನ್ನಲೆಗೆ ಎಳೆದಿದ್ದರು. ತಾವು ಅಮೇರಿಕಾಕ್ಕೆ ತೆರಳಿದ್ದ ವೇಳೆ ಯುವರಾಜ್‌ ಕುಮಾರ್‌ ಹಾಗೂ ಸಪ್ತಮಿ ಗೌಡ ಸಜೀವನ ನಡೆಸಿದ್ದಾರೆ. ಈ ವಿಚಾರವಾಗಿ ನನ್ನನ್ನು ಮನೆಯಿಂದ ಹೊರ ಹಾಕುವ ಪ್ರಯತ್ನವು ನಡೆದಿತ್ತು ಎಂದು ಶ್ರೀದೇವಿ ಪರ ವಕೀಲರು ಗಂಭೀರವಾಗಿ ಆರೋಪ ಮಾಡಿದ್ದರು.

ಶ್ರೀದೇವಿ ಪರ ಕೋರ್ಟ್‌ ಮೆಟ್ಟಿಲೇರಿರುವ ಸಪ್ತಮಿ ಗೌಡ, ಶ್ರೀದೇವಿ ಅವರು ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಸುಳ್ಳು ಆರೋಪ ಮಾಡುವ ಮೂಲಕ ಮಾನಹಾನಿಕಾರ ಹೇಳಿಕೆ ನೀಡುತ್ತಿದ್ದಾರೆ. ನನ್ನ ಚಾರಿತ್ರ್ಯ ವಧೆಯಾಗಲಿದೆ ಎಂದು ಕೋರ್ಟ್‌ ಮೆಟ್ಟಿಲೇರಿ ನಿರ್ಬಂಧಕಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ.

ಇದಕ್ಕೆ ಬೆಂಗಳೂರಿನ ಸಿಟಿ ಸಿವಿಲ್‌ ನ್ಯಾಯಾಲಯ ಶ್ರೀದೇವಿ ಅವರಿಗೆ ನೋಟಿಸ್‌ ಜಾರಿ ಮಾಡುವಂತೆ ಆದೇಶಿಸಿದೆ. ಪ್ರಸ್ತುತ ಅವರು ಅಮೇರಿಕಾದ ಹಾರ್ವರ್ಡ್‌ ಯುನಿವರ್ಸಿಟಿಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಅವರು ದೇಶಕ್ಕೆ ಹಿಂದಿರುಗಿದ ಬಳಿಕ ಈ ಪ್ರಕರಣದ ಮುಂದಿನ ತಿರುವು ತಿಳಿಯಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

5 mins ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

3 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

5 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago