ಮನರಂಜನೆ

ಕಾವ್ಯ ಬದಲು ಸಪ್ತಮಿ?; ಅಶೋಕನ ಜೊತೆಯಾದ ಅಂಬಿಕಾ

ಎರಡೂವರೆ ವರ್ಷಗಳ ಹಿಂದೆ ‘ದಿ ರೈಸ್ ಆಫ್‍ ಅಶೋಕ’ (ಮೊದಲ ಹೆಸರು ‘ಅಶೋಕ ಬ್ಲೇಡ್‍’) ಚಿತ್ರದ ಮುಹೂರ್ತವಾದಾಗ, ಕಾವ್ಯ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಚಿತ್ರೀಕರಣ ಮುಕ್ತಾಯದ ಹಂತಕ್ಕೆ ಬಂದಿದ್ದು, ಚಿತ್ರತಂಡಕ್ಕೆ ಸಪ್ತಮಿ ಗೌಡ ಬಂದಿದ್ದಾರೆ. ಕಾವ್ಯ ಜಾಗಕ್ಕೆ ಸಪ್ತಮಿ ಬಂದಿದ್ದಾರಾ ಅಥವಾ ಚಿತ್ರದಲ್ಲಿ ಇಬ್ಬರೂ ಇರುತ್ತಾರಾ ಎಂಬ ಪ್ರಶ್ನೆಗೆ ಚಿತ್ರತಂಡ ಇನ್ನಷ್ಟೇ ಉತ್ತರಿಸಬೇಕು.

ಕಳೆದ ವರ್ಷ ಬಿಡುಗಡೆಯಾದ ಯುವ ರಾಜಕುಮಾರ್‍ ಅಭಿನಯದ ‘ಯುವ’ ಚಿತ್ರದ ನಂತರ ಸಪ್ತಮಿ ಗೌಡ ಅಭಿನಯದ ಯಾವೊಂದು ಚಿತ್ರ ಸಹ ಬಿಡುಗಡೆಯಾಗಿರಲಿಲ್ಲ. ಇದೀಗ ಅವರು ಸತೀಶ್‍ ನೀನಾಸಂ ಅಭಿನಯದ ‘ದಿ ರೈಸ್‍ ಆಫ್‍ ಅಶೋಕ’ ಚಿತ್ರಕ್ಕೆ ನಾಯಕಿಯಾಗಿ ಸೇರ್ಪಡೆಯಾಗಿದ್ದು, ಈ ಚಿತ್ರದಲ್ಲಿ ಅಂಬಿಕಾ ಎಂಬ ಪಾತ್ರದಲ್ಲಿ ಸಪ್ತಮಿ ನಟಿಸುತ್ತಿದ್ದಾರೆ. ಸಪ್ತಮಿ ಅವರ ಮೊದಲ ಪೋಸ್ಟರ್‍ ಭಾನುವಾರ ಬಿಡುಗಡೆ ಆಗಿದೆ. ಸೈಕಲ್‍ ಮೇಲೆ ಹೂವಿನ ಬುಟ್ಟಿ ಹೊತ್ತಿರುವ ಹಳ್ಳಿ ಹುಡುಗಿಯಾಗಿ ಸಪ್ತಮಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘ದಿ ರೈಸ್ ಆಫ್ ಅಶೋಕ’ ಚಿತ್ರದ ಮೂಲಕ ಒಂದು ಬಂಡಾಯದ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದಾರೆ ಕಥೆಗಾರ ಟಿ.ಕೆ. ದಯಾನಂದ್‍. ಈ ಚಿತ್ರವು ಕನ್ನಡದ ಜೊತೆಗೆ ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿದೆ. ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಬ್ಯಾನರ್ ನಡಿ ವರ್ಧನ್ ನರಹರಿ, ಜೈಷ್ಣವಿ ಮತ್ತು ನೀನಾಸಂ ಸತೀಶ್, ‘ರೈಸ್ ಆಫ್ ಅಶೋಕ’ ಚಿತ್ರವನ್ನು ಸೇರಿ ನಿರ್ಮಾಣ ಮಾಡುತ್ತಿದ್ದಾರೆ.

ಈ ಚಿತ್ರದ ಚಿತ್ರೀಕರಣ ಶೇ.80ರಷ್ಟು ಚಿತ್ರೀಕರಣ ಮುಗಿದಿದ್ದು, ಒಂದಿಷ್ಟು ಟಾಕಿ ಮತ್ತು ಹಾಡುಗಳ ಚಿತ್ರೀಕರಣ ಬಾಕಿ ಇದೆ. ಇದೀಗ ಚೆನ್ನಪಟ್ಟಣದಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಸದ್ಯದಲ್ಲೇ ಮುಕ್ತಾಯವಾಗಲಿದೆ.

‘ದಿ ರೈಸ್ ಆಫ್ ಅಶೋಕ’ ಚಿತ್ರದಲ್ಲಿ ಸತೀಶ್‍ ನೀನಾಸಂ, ಸಪ್ತಮಿ ಗೌಡ, ಬಿ. ಸುರೇಶ, ಅಚ್ಯುತ್ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಮೈತ್ರೀಯಾ, ಯಶ್ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ. ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಪೂರ್ಣಚಂದ್ರ ತೇಜಸ್ವಿ ಸಂಗೀತವಿದೆ. ಈ ಚಿತ್ರವನ್ನು ವಿನೋದ್‍ ದೋಂಡಾಳೆ ಬಹುತೇಕ ನಿರ್ದೇಶನ ಮಾಡಿದ್ದು, ಅವರ ನಿಧನದ ನಂತರ ಬಾಕಿ ಉಳಿದಿರುವ ಚಿತ್ರವನ್ನು ಮನು ಶೇಡ್ಗಾರ್‍ ನಿರ್ದೇಶಕರಾಗಿ ಮುಂದುವರೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

11 mins ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

47 mins ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

1 hour ago

ಉಡುಪಿಯಲ್ಲಿ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್:‌ ಶ್ರೀಕೃಷ್ಣ ಮಠದ ಗೀತೋತ್ಸವದಲ್ಲಿ ಭಾಗಿ

ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…

1 hour ago

ಮಲೆನಾಡಿನಲ್ಲಿ ಮುಂದುವರಿದ ಕಾಫಿ ಕಳವು ಪ್ರಕರಣ

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…

2 hours ago

ಮದುವೆ ರದ್ದು: ಮೌನಮುರಿದ ಸ್ಮೃತಿ ಮಂದಾನ

ಮುಂಬೈ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್‌ ಮುಚ್ಚಲ್‌ ಮದುವೆ ಮುಂದೂಡಿಕೆಯಾಗಿತ್ತು.…

2 hours ago