ಮನರಂಜನೆ

ಕಾವ್ಯ ಬದಲು ಸಪ್ತಮಿ?; ಅಶೋಕನ ಜೊತೆಯಾದ ಅಂಬಿಕಾ

ಎರಡೂವರೆ ವರ್ಷಗಳ ಹಿಂದೆ ‘ದಿ ರೈಸ್ ಆಫ್‍ ಅಶೋಕ’ (ಮೊದಲ ಹೆಸರು ‘ಅಶೋಕ ಬ್ಲೇಡ್‍’) ಚಿತ್ರದ ಮುಹೂರ್ತವಾದಾಗ, ಕಾವ್ಯ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಚಿತ್ರೀಕರಣ ಮುಕ್ತಾಯದ ಹಂತಕ್ಕೆ ಬಂದಿದ್ದು, ಚಿತ್ರತಂಡಕ್ಕೆ ಸಪ್ತಮಿ ಗೌಡ ಬಂದಿದ್ದಾರೆ. ಕಾವ್ಯ ಜಾಗಕ್ಕೆ ಸಪ್ತಮಿ ಬಂದಿದ್ದಾರಾ ಅಥವಾ ಚಿತ್ರದಲ್ಲಿ ಇಬ್ಬರೂ ಇರುತ್ತಾರಾ ಎಂಬ ಪ್ರಶ್ನೆಗೆ ಚಿತ್ರತಂಡ ಇನ್ನಷ್ಟೇ ಉತ್ತರಿಸಬೇಕು.

ಕಳೆದ ವರ್ಷ ಬಿಡುಗಡೆಯಾದ ಯುವ ರಾಜಕುಮಾರ್‍ ಅಭಿನಯದ ‘ಯುವ’ ಚಿತ್ರದ ನಂತರ ಸಪ್ತಮಿ ಗೌಡ ಅಭಿನಯದ ಯಾವೊಂದು ಚಿತ್ರ ಸಹ ಬಿಡುಗಡೆಯಾಗಿರಲಿಲ್ಲ. ಇದೀಗ ಅವರು ಸತೀಶ್‍ ನೀನಾಸಂ ಅಭಿನಯದ ‘ದಿ ರೈಸ್‍ ಆಫ್‍ ಅಶೋಕ’ ಚಿತ್ರಕ್ಕೆ ನಾಯಕಿಯಾಗಿ ಸೇರ್ಪಡೆಯಾಗಿದ್ದು, ಈ ಚಿತ್ರದಲ್ಲಿ ಅಂಬಿಕಾ ಎಂಬ ಪಾತ್ರದಲ್ಲಿ ಸಪ್ತಮಿ ನಟಿಸುತ್ತಿದ್ದಾರೆ. ಸಪ್ತಮಿ ಅವರ ಮೊದಲ ಪೋಸ್ಟರ್‍ ಭಾನುವಾರ ಬಿಡುಗಡೆ ಆಗಿದೆ. ಸೈಕಲ್‍ ಮೇಲೆ ಹೂವಿನ ಬುಟ್ಟಿ ಹೊತ್ತಿರುವ ಹಳ್ಳಿ ಹುಡುಗಿಯಾಗಿ ಸಪ್ತಮಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘ದಿ ರೈಸ್ ಆಫ್ ಅಶೋಕ’ ಚಿತ್ರದ ಮೂಲಕ ಒಂದು ಬಂಡಾಯದ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದಾರೆ ಕಥೆಗಾರ ಟಿ.ಕೆ. ದಯಾನಂದ್‍. ಈ ಚಿತ್ರವು ಕನ್ನಡದ ಜೊತೆಗೆ ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿದೆ. ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಬ್ಯಾನರ್ ನಡಿ ವರ್ಧನ್ ನರಹರಿ, ಜೈಷ್ಣವಿ ಮತ್ತು ನೀನಾಸಂ ಸತೀಶ್, ‘ರೈಸ್ ಆಫ್ ಅಶೋಕ’ ಚಿತ್ರವನ್ನು ಸೇರಿ ನಿರ್ಮಾಣ ಮಾಡುತ್ತಿದ್ದಾರೆ.

ಈ ಚಿತ್ರದ ಚಿತ್ರೀಕರಣ ಶೇ.80ರಷ್ಟು ಚಿತ್ರೀಕರಣ ಮುಗಿದಿದ್ದು, ಒಂದಿಷ್ಟು ಟಾಕಿ ಮತ್ತು ಹಾಡುಗಳ ಚಿತ್ರೀಕರಣ ಬಾಕಿ ಇದೆ. ಇದೀಗ ಚೆನ್ನಪಟ್ಟಣದಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಸದ್ಯದಲ್ಲೇ ಮುಕ್ತಾಯವಾಗಲಿದೆ.

‘ದಿ ರೈಸ್ ಆಫ್ ಅಶೋಕ’ ಚಿತ್ರದಲ್ಲಿ ಸತೀಶ್‍ ನೀನಾಸಂ, ಸಪ್ತಮಿ ಗೌಡ, ಬಿ. ಸುರೇಶ, ಅಚ್ಯುತ್ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಮೈತ್ರೀಯಾ, ಯಶ್ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ. ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಪೂರ್ಣಚಂದ್ರ ತೇಜಸ್ವಿ ಸಂಗೀತವಿದೆ. ಈ ಚಿತ್ರವನ್ನು ವಿನೋದ್‍ ದೋಂಡಾಳೆ ಬಹುತೇಕ ನಿರ್ದೇಶನ ಮಾಡಿದ್ದು, ಅವರ ನಿಧನದ ನಂತರ ಬಾಕಿ ಉಳಿದಿರುವ ಚಿತ್ರವನ್ನು ಮನು ಶೇಡ್ಗಾರ್‍ ನಿರ್ದೇಶಕರಾಗಿ ಮುಂದುವರೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

8 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

13 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

13 hours ago