sapthami gowda
ಸಪ್ತಮಿ ಗೌಡ ಅಭಿನಯದ ‘ಯುವ’ ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಈ ಒಂದು ವರ್ಷದಲ್ಲಿ ಸಪ್ತಮಿ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆ ಆಗಿರಲಿಲ್ಲ. ಆ ಸಂದರ್ಭದಲ್ಲೇ ತೆಲುಗು ಚಿತ್ರವೊಂದರಲ್ಲಿ ಅಭಿನಯಿಸುತ್ತಿರುವುದಾಗಿ ಸಪ್ತಮಿ ಗೌಡ ಹೇಳಿಕೊಂಡಿದ್ದರು. ಆ ಚಿತ್ರದ ಟೀಸರ್ ಈಗ ಬಿಡುಗಡೆಯಾಗಿದೆ.
ಅಂದಹಾಗೆ, ಸಪ್ತಮಿ ಗೌಡ ಅಭಿನಯಿಸುತ್ತಿರುವ ತೆಲುಗು ಚಿತ್ರದ ಹೆಸರು ‘ತಮ್ಮುಡು’. ಈ ಚಿತ್ರದಲ್ಲಿ ನಿತಿನ್ ನಾಯಕನಾಗಿ ಕಾಣಿಸಿಕೊಂಡರೆ, ವೇಣು ಶ್ರೀರಾಮ್ ನಿರ್ದೇಶನ ಮಾಡಿದ್ದಾರೆ. ನಿತಿನ್ ಜೊತೆಗೆ ಸಪ್ತಮಿ, ಸ್ವಸ್ತಿಕಾ ವಿಜಯ್, ವರ್ಷ ಬೋಳಮ್ಮ ಮುಂತಾದವರು ನಟಿಸಿದ್ದು, ಈ ಚಿತ್ರದಲ್ಲಿ ರಾಣಿ ಎಂಬ ಪಾತ್ರದಲ್ಲಿ ಸಪ್ತಮಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ‘ಮೂಡ್ ಆಫ್ ತಮ್ಮುಡು’ ಎಂಬ ಟೀಸರ್ ಬಿಡುಗಡೆಯಾಗಿದೆ.
ಸಪ್ತಮಿ ಗೌಡಗೆ ಈಗಾಗಲೇ ಹಿಂದಿ ಚಿತ್ರ ‘ದಿ ವ್ಯಾಕ್ಸಿನ್ ವಾರ್’ನಲ್ಲಿ ನಟಿಸಿ ಬಂದಿದ್ದಾರೆ. ಈಗ ಅವರು ತೆಲುಗು ಚಿತ್ರ ‘ತಮ್ಮುಡು’ವಿನಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕಾಗಿ ಸಪ್ತಮಿ ಗೌಡ, ಕುದುರೆ ಸವಾರಿ ಕಲಿತಿದ್ದಾರಂತೆ.
ಕನ್ನಡದ ವಿಷಯಕ್ಕೆ ಬಂದರೆ, ಅಭಿಷೇಕ್ ಅಂಬರೀಶ್ ಅಭಿನಯದ ‘ಕಾಳಿ’ ಚಿತ್ರದಲ್ಲಿ ಸಪ್ತಮಿ ನಾಯಕಿಯಾಗಿ ನಟಿಸಬೇಕಿತ್ತು. ಆದರೆ, ಚಿತ್ರ ಕಾರಣಾಂತರಗಳಿಂದ ನಿಂತಿದೆ. ಇದಲ್ಲದೆ, ಸತೀಶ್ ನೀನಾಸಂ ಅಭಿನಯದ ‘ರೈಸ್ ಆಫ್ ಅಶೋಕ’ ಚಿತ್ರದಲ್ಲಿ ಸಪ್ತಮಿ ನಾಯಕಿಯಾಗಿ ನಟಿಸುತ್ತಿದ್ದು, ಈ ಚಿತ್ರ ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಇದಲ್ಲದೆ ಅವರು ‘ತಮ’ ಎಂಬ ಹಿಂದಿ ಚಿತ್ರದಲ್ಲೂ ನಟಿಸುತ್ತಿರುವ ಸುದ್ದಿ ಇದೆ.
ಇನ್ನು, ‘ಕಾಂತಾರ – ಅಧ್ಯಾಯ 1’ರಲ್ಲಿ ಸಪ್ತಮಿ ನಟಿಸುತ್ತಾರಾ? ಎಂಬ ಪ್ರಶ್ನೆ ಇದಕ್ಕೂ ಮೊದಲು ಕೇಳಿಬಂದಿತ್ತು. ಇದು ‘ಕಾಂತಾರ’ದ ಹಿಂದಿನ ಕಥೆಯಾದ್ದರಿಂದ ಇಲ್ಲಿ ಲೀಲಾ ಪಾತ್ರವೂ ಇರುವುದಿಲ್ಲ, ತಾನೂ ನಟಿಸುತ್ತಿಲ್ಲ ಎಂದು ಸಪ್ತಮಿ ಗೌಡ ಸ್ಪಷ್ಟಪಡಿಸಿದ್ದಾರೆ.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…