ಮನರಂಜನೆ

‘ತಮ್ಮುಡು’ ಜೊತೆಯಾದ ಸಪ್ತಮಿ; ಹಿಂದಿ ನಂತರ ತೆಲುಗು ಚಿತ್ರದಲ್ಲಿ

ಸಪ್ತಮಿ ಗೌಡ ಅಭಿನಯದ ‘ಯುವ’ ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಈ ಒಂದು ವರ್ಷದಲ್ಲಿ ಸಪ್ತಮಿ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆ ಆಗಿರಲಿಲ್ಲ. ಆ ಸಂದರ್ಭದಲ್ಲೇ ತೆಲುಗು ಚಿತ್ರವೊಂದರಲ್ಲಿ ಅಭಿನಯಿಸುತ್ತಿರುವುದಾಗಿ ಸಪ್ತಮಿ ಗೌಡ ಹೇಳಿಕೊಂಡಿದ್ದರು. ಆ ಚಿತ್ರದ ಟೀಸರ್ ಈಗ ಬಿಡುಗಡೆಯಾಗಿದೆ.

ಅಂದಹಾಗೆ, ಸಪ್ತಮಿ ಗೌಡ ಅಭಿನಯಿಸುತ್ತಿರುವ ತೆಲುಗು ಚಿತ್ರದ ಹೆಸರು ‘ತಮ್ಮುಡು’. ಈ ಚಿತ್ರದಲ್ಲಿ ನಿತಿನ್‍ ನಾಯಕನಾಗಿ ಕಾಣಿಸಿಕೊಂಡರೆ, ವೇಣು ಶ್ರೀರಾಮ್‍ ನಿರ್ದೇಶನ ಮಾಡಿದ್ದಾರೆ. ನಿತಿನ್‍ ಜೊತೆಗೆ ಸಪ್ತಮಿ, ಸ್ವಸ್ತಿಕಾ ವಿಜಯ್‍, ವರ್ಷ ಬೋಳಮ್ಮ ಮುಂತಾದವರು ನಟಿಸಿದ್ದು, ಈ ಚಿತ್ರದಲ್ಲಿ ರಾಣಿ ಎಂಬ ಪಾತ್ರದಲ್ಲಿ ಸಪ್ತಮಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ‘ಮೂಡ್‍ ಆಫ್‍ ತಮ್ಮುಡು’ ಎಂಬ ಟೀಸರ್ ಬಿಡುಗಡೆಯಾಗಿದೆ.

ಸಪ್ತಮಿ ಗೌಡಗೆ ಈಗಾಗಲೇ ಹಿಂದಿ ಚಿತ್ರ ‘ದಿ ವ್ಯಾಕ್ಸಿನ್‍ ವಾರ್’ನಲ್ಲಿ ನಟಿಸಿ ಬಂದಿದ್ದಾರೆ. ಈಗ ಅವರು ತೆಲುಗು ಚಿತ್ರ ‘ತಮ್ಮುಡು’ವಿನಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕಾಗಿ ಸಪ್ತಮಿ ಗೌಡ, ಕುದುರೆ ಸವಾರಿ ಕಲಿತಿದ್ದಾರಂತೆ.

ಕನ್ನಡದ ವಿಷಯಕ್ಕೆ ಬಂದರೆ, ಅಭಿಷೇಕ್‍ ಅಂಬರೀಶ್‍ ಅಭಿನಯದ ‘ಕಾಳಿ’ ಚಿತ್ರದಲ್ಲಿ ಸಪ್ತಮಿ ನಾಯಕಿಯಾಗಿ ನಟಿಸಬೇಕಿತ್ತು. ಆದರೆ, ಚಿತ್ರ ಕಾರಣಾಂತರಗಳಿಂದ ನಿಂತಿದೆ. ಇದಲ್ಲದೆ, ಸತೀಶ್ ನೀನಾಸಂ ಅಭಿನಯದ ‘ರೈಸ್‍ ಆಫ್‍ ಅಶೋಕ’ ಚಿತ್ರದಲ್ಲಿ ಸಪ್ತಮಿ ನಾಯಕಿಯಾಗಿ ನಟಿಸುತ್ತಿದ್ದು, ಈ ಚಿತ್ರ ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಇದಲ್ಲದೆ ಅವರು ‘ತಮ’ ಎಂಬ ಹಿಂದಿ ಚಿತ್ರದಲ್ಲೂ ನಟಿಸುತ್ತಿರುವ ಸುದ್ದಿ ಇದೆ.

ಇನ್ನು, ‘ಕಾಂತಾರ – ಅಧ್ಯಾಯ 1’ರಲ್ಲಿ ಸಪ್ತಮಿ ನಟಿಸುತ್ತಾರಾ? ಎಂಬ ಪ್ರಶ್ನೆ ಇದಕ್ಕೂ ಮೊದಲು ಕೇಳಿಬಂದಿತ್ತು. ಇದು ‘ಕಾಂತಾರ’ದ ಹಿಂದಿನ ಕಥೆಯಾದ್ದರಿಂದ ಇಲ್ಲಿ ಲೀಲಾ ಪಾತ್ರವೂ ಇರುವುದಿಲ್ಲ, ತಾನೂ ನಟಿಸುತ್ತಿಲ್ಲ ಎಂದು ಸಪ್ತಮಿ ಗೌಡ ಸ್ಪಷ್ಟಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

14 mins ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

27 mins ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

34 mins ago

ಕಣಿವೆಗೆ ಉರುಳಿದ ಸೇನಾ ವಾಹನ : 10 ಸೈನಿಕರ ಸಾವು

11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…

59 mins ago

‘ಬಿಗ್ ಬಾಸ್’ ಗಿಲ್ಲಿಗೆ ಸಿಎಂ ಅಭಿನಂದನೆ!

ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…

1 hour ago

ಬೆಳ್ಳಿ ಬರೋಬ್ಬರಿ 20 ಸಾವಿರ ರೂ.ಇಳಿಕೆ : ಚಿನ್ನದ ದರದಲ್ಲೂ ದಿಢೀರ್ 4 ಸಾವಿರ ರೂ ಕುಸಿತ

ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…

1 hour ago