ಮನರಂಜನೆ

‘ತಮ್ಮುಡು’ ಜೊತೆಯಾದ ಸಪ್ತಮಿ; ಹಿಂದಿ ನಂತರ ತೆಲುಗು ಚಿತ್ರದಲ್ಲಿ

ಸಪ್ತಮಿ ಗೌಡ ಅಭಿನಯದ ‘ಯುವ’ ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಈ ಒಂದು ವರ್ಷದಲ್ಲಿ ಸಪ್ತಮಿ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆ ಆಗಿರಲಿಲ್ಲ. ಆ ಸಂದರ್ಭದಲ್ಲೇ ತೆಲುಗು ಚಿತ್ರವೊಂದರಲ್ಲಿ ಅಭಿನಯಿಸುತ್ತಿರುವುದಾಗಿ ಸಪ್ತಮಿ ಗೌಡ ಹೇಳಿಕೊಂಡಿದ್ದರು. ಆ ಚಿತ್ರದ ಟೀಸರ್ ಈಗ ಬಿಡುಗಡೆಯಾಗಿದೆ.

ಅಂದಹಾಗೆ, ಸಪ್ತಮಿ ಗೌಡ ಅಭಿನಯಿಸುತ್ತಿರುವ ತೆಲುಗು ಚಿತ್ರದ ಹೆಸರು ‘ತಮ್ಮುಡು’. ಈ ಚಿತ್ರದಲ್ಲಿ ನಿತಿನ್‍ ನಾಯಕನಾಗಿ ಕಾಣಿಸಿಕೊಂಡರೆ, ವೇಣು ಶ್ರೀರಾಮ್‍ ನಿರ್ದೇಶನ ಮಾಡಿದ್ದಾರೆ. ನಿತಿನ್‍ ಜೊತೆಗೆ ಸಪ್ತಮಿ, ಸ್ವಸ್ತಿಕಾ ವಿಜಯ್‍, ವರ್ಷ ಬೋಳಮ್ಮ ಮುಂತಾದವರು ನಟಿಸಿದ್ದು, ಈ ಚಿತ್ರದಲ್ಲಿ ರಾಣಿ ಎಂಬ ಪಾತ್ರದಲ್ಲಿ ಸಪ್ತಮಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ‘ಮೂಡ್‍ ಆಫ್‍ ತಮ್ಮುಡು’ ಎಂಬ ಟೀಸರ್ ಬಿಡುಗಡೆಯಾಗಿದೆ.

ಸಪ್ತಮಿ ಗೌಡಗೆ ಈಗಾಗಲೇ ಹಿಂದಿ ಚಿತ್ರ ‘ದಿ ವ್ಯಾಕ್ಸಿನ್‍ ವಾರ್’ನಲ್ಲಿ ನಟಿಸಿ ಬಂದಿದ್ದಾರೆ. ಈಗ ಅವರು ತೆಲುಗು ಚಿತ್ರ ‘ತಮ್ಮುಡು’ವಿನಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕಾಗಿ ಸಪ್ತಮಿ ಗೌಡ, ಕುದುರೆ ಸವಾರಿ ಕಲಿತಿದ್ದಾರಂತೆ.

ಕನ್ನಡದ ವಿಷಯಕ್ಕೆ ಬಂದರೆ, ಅಭಿಷೇಕ್‍ ಅಂಬರೀಶ್‍ ಅಭಿನಯದ ‘ಕಾಳಿ’ ಚಿತ್ರದಲ್ಲಿ ಸಪ್ತಮಿ ನಾಯಕಿಯಾಗಿ ನಟಿಸಬೇಕಿತ್ತು. ಆದರೆ, ಚಿತ್ರ ಕಾರಣಾಂತರಗಳಿಂದ ನಿಂತಿದೆ. ಇದಲ್ಲದೆ, ಸತೀಶ್ ನೀನಾಸಂ ಅಭಿನಯದ ‘ರೈಸ್‍ ಆಫ್‍ ಅಶೋಕ’ ಚಿತ್ರದಲ್ಲಿ ಸಪ್ತಮಿ ನಾಯಕಿಯಾಗಿ ನಟಿಸುತ್ತಿದ್ದು, ಈ ಚಿತ್ರ ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಇದಲ್ಲದೆ ಅವರು ‘ತಮ’ ಎಂಬ ಹಿಂದಿ ಚಿತ್ರದಲ್ಲೂ ನಟಿಸುತ್ತಿರುವ ಸುದ್ದಿ ಇದೆ.

ಇನ್ನು, ‘ಕಾಂತಾರ – ಅಧ್ಯಾಯ 1’ರಲ್ಲಿ ಸಪ್ತಮಿ ನಟಿಸುತ್ತಾರಾ? ಎಂಬ ಪ್ರಶ್ನೆ ಇದಕ್ಕೂ ಮೊದಲು ಕೇಳಿಬಂದಿತ್ತು. ಇದು ‘ಕಾಂತಾರ’ದ ಹಿಂದಿನ ಕಥೆಯಾದ್ದರಿಂದ ಇಲ್ಲಿ ಲೀಲಾ ಪಾತ್ರವೂ ಇರುವುದಿಲ್ಲ, ತಾನೂ ನಟಿಸುತ್ತಿಲ್ಲ ಎಂದು ಸಪ್ತಮಿ ಗೌಡ ಸ್ಪಷ್ಟಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

53 mins ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

4 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

8 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

8 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

8 hours ago