ಮನರಂಜನೆ

‘ತಮ್ಮುಡು’ ಜೊತೆಯಾದ ಸಪ್ತಮಿ; ಹಿಂದಿ ನಂತರ ತೆಲುಗು ಚಿತ್ರದಲ್ಲಿ

ಸಪ್ತಮಿ ಗೌಡ ಅಭಿನಯದ ‘ಯುವ’ ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಈ ಒಂದು ವರ್ಷದಲ್ಲಿ ಸಪ್ತಮಿ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆ ಆಗಿರಲಿಲ್ಲ. ಆ ಸಂದರ್ಭದಲ್ಲೇ ತೆಲುಗು ಚಿತ್ರವೊಂದರಲ್ಲಿ ಅಭಿನಯಿಸುತ್ತಿರುವುದಾಗಿ ಸಪ್ತಮಿ ಗೌಡ ಹೇಳಿಕೊಂಡಿದ್ದರು. ಆ ಚಿತ್ರದ ಟೀಸರ್ ಈಗ ಬಿಡುಗಡೆಯಾಗಿದೆ.

ಅಂದಹಾಗೆ, ಸಪ್ತಮಿ ಗೌಡ ಅಭಿನಯಿಸುತ್ತಿರುವ ತೆಲುಗು ಚಿತ್ರದ ಹೆಸರು ‘ತಮ್ಮುಡು’. ಈ ಚಿತ್ರದಲ್ಲಿ ನಿತಿನ್‍ ನಾಯಕನಾಗಿ ಕಾಣಿಸಿಕೊಂಡರೆ, ವೇಣು ಶ್ರೀರಾಮ್‍ ನಿರ್ದೇಶನ ಮಾಡಿದ್ದಾರೆ. ನಿತಿನ್‍ ಜೊತೆಗೆ ಸಪ್ತಮಿ, ಸ್ವಸ್ತಿಕಾ ವಿಜಯ್‍, ವರ್ಷ ಬೋಳಮ್ಮ ಮುಂತಾದವರು ನಟಿಸಿದ್ದು, ಈ ಚಿತ್ರದಲ್ಲಿ ರಾಣಿ ಎಂಬ ಪಾತ್ರದಲ್ಲಿ ಸಪ್ತಮಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ‘ಮೂಡ್‍ ಆಫ್‍ ತಮ್ಮುಡು’ ಎಂಬ ಟೀಸರ್ ಬಿಡುಗಡೆಯಾಗಿದೆ.

ಸಪ್ತಮಿ ಗೌಡಗೆ ಈಗಾಗಲೇ ಹಿಂದಿ ಚಿತ್ರ ‘ದಿ ವ್ಯಾಕ್ಸಿನ್‍ ವಾರ್’ನಲ್ಲಿ ನಟಿಸಿ ಬಂದಿದ್ದಾರೆ. ಈಗ ಅವರು ತೆಲುಗು ಚಿತ್ರ ‘ತಮ್ಮುಡು’ವಿನಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕಾಗಿ ಸಪ್ತಮಿ ಗೌಡ, ಕುದುರೆ ಸವಾರಿ ಕಲಿತಿದ್ದಾರಂತೆ.

ಕನ್ನಡದ ವಿಷಯಕ್ಕೆ ಬಂದರೆ, ಅಭಿಷೇಕ್‍ ಅಂಬರೀಶ್‍ ಅಭಿನಯದ ‘ಕಾಳಿ’ ಚಿತ್ರದಲ್ಲಿ ಸಪ್ತಮಿ ನಾಯಕಿಯಾಗಿ ನಟಿಸಬೇಕಿತ್ತು. ಆದರೆ, ಚಿತ್ರ ಕಾರಣಾಂತರಗಳಿಂದ ನಿಂತಿದೆ. ಇದಲ್ಲದೆ, ಸತೀಶ್ ನೀನಾಸಂ ಅಭಿನಯದ ‘ರೈಸ್‍ ಆಫ್‍ ಅಶೋಕ’ ಚಿತ್ರದಲ್ಲಿ ಸಪ್ತಮಿ ನಾಯಕಿಯಾಗಿ ನಟಿಸುತ್ತಿದ್ದು, ಈ ಚಿತ್ರ ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಇದಲ್ಲದೆ ಅವರು ‘ತಮ’ ಎಂಬ ಹಿಂದಿ ಚಿತ್ರದಲ್ಲೂ ನಟಿಸುತ್ತಿರುವ ಸುದ್ದಿ ಇದೆ.

ಇನ್ನು, ‘ಕಾಂತಾರ – ಅಧ್ಯಾಯ 1’ರಲ್ಲಿ ಸಪ್ತಮಿ ನಟಿಸುತ್ತಾರಾ? ಎಂಬ ಪ್ರಶ್ನೆ ಇದಕ್ಕೂ ಮೊದಲು ಕೇಳಿಬಂದಿತ್ತು. ಇದು ‘ಕಾಂತಾರ’ದ ಹಿಂದಿನ ಕಥೆಯಾದ್ದರಿಂದ ಇಲ್ಲಿ ಲೀಲಾ ಪಾತ್ರವೂ ಇರುವುದಿಲ್ಲ, ತಾನೂ ನಟಿಸುತ್ತಿಲ್ಲ ಎಂದು ಸಪ್ತಮಿ ಗೌಡ ಸ್ಪಷ್ಟಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

10 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

10 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

10 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

11 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

12 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

13 hours ago