ಮನರಂಜನೆ

ಹೊಸ ಹೆಸರಿನಲ್ಲಿ ಬರಲಿದೆ ಸತೀಶ್‍ ನೀನಾಸಂ ಅಭಿನಯದ ‘ಅಶೋಕ ಬ್ಲೇಡ್‍’

ಸತೀಶ್ ‍ನೀನಾಸಂ ಅಭಿನಯದ ‘ಅಶೋಕ ಬ್ಲೇಡ್‍’ ನಿರ್ದೇಶಕ ವಿನೋದ್‍ ಧೋಂಡಾಳೆ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಚಿತ್ರವು ನಿಂತಿದೆ ಎಂಬ ಸುದ್ದಿ ಕೇಳಿಬಂದಿತ್ತು. ಆದರೆ, ಚಿತ್ರವು ನಿಂತಿಲ್ಲ. ‘ಅಶೋಕ ಬ್ಲೇಡ್‍’ ಇದೀಗ ‘ದಿ ರೈಸ್ ಆಫ್ ಅಶೋಕ’ ಮುಂದುವರೆದು ಬಿಡುಗಡೆಯಾಗಲಿದೆ.

ಎರಡೂವರೆ ವರ್ಷಗಳ ಹಿಂದೆ ‘ಅಶೋಕ ಬ್ಲೇಡ್‍’ ಚಿತ್ರ ಪ್ರಾರಂಭವಾಗಿತ್ತು. ಮೊದಲು ಒಂದು ಚಿತ್ರ ಎಂದು ಶುರುವಾಗಿದ್ದು, ನಂತರ ಎರಡು ಭಾಗಗಳಲ್ಲಿ ಬಿಡುಗಡೆ ಎಂದು ಹೇಳಲಾಯ್ತು. ಪ್ಯಾನ್‍ ಇಂಡಿಯಾ ಮಟ್ಟದಲ್ಲಿ ಚಿತ್ರ ಬಿಡುಗಡೆ ಆಗುತ್ತದೆ ಎಂಬ ಸುದ್ದಿಯೂ ಇತ್ತು. ಕಡಿಮೆ ಬಜೆಟ್‍ನಲ್ಲಿ ಶುರುವಾದ ಚಿತ್ರ, ಕೊನೆಗೆ ದೊಡ್ಡದಾಗುತ್ತಾ ಹೋಯಿತು. ಬಜೆಟ್ ಜಾಸ್ತಿಯಾದಂತೆ ಸಾಲ ಸಹ ಹೆಚ್ಚಿತು. ಇದೆಲ್ಲದರಿಂದ ವಿಚಲಿತಗೊಂಡ ನಿರ್ದೇಶಕ ಮತ್ತು ನಿರ್ಮಾಪಕರಲ್ಲೊಬ್ಬರಾದ ವಿನೋದ್‍ ಧೋಂಡಾಳೆ ಕಳೆದ ಜುಲೈನಲ್ಲಿ ಆತ್ಮಹತ್ಯೆ ಮಾಡಿಕೊಂಡರು. ಇನ್ನು, ಚಿತ್ರ ಪ್ರಾರಂಭವಾಗುವುದಿಲ್ಲ ಎಂಬ ಮಾತುಗಳು ಹರಿದಾಡುತ್ತಿರುವಾಗಲೇ ಚಿತ್ರ ಪುನಃ ಶುರುವಾಗುತ್ತಿರುವ ಸುದ್ದಿ ಇದೆ.

ಈ ಕುರಿತು ಗುರುವಾರ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಅಷ್ಟೇ ಅಲ್ಲ, ಚಿತ್ರದ ಮೋಷನ್‍ ಪೋಸ್ಟರ್‍ ಸಹ ಬಿಡುಗಡೆಯಾಗಿದೆ. ‘ಅಶೋಕ ಬ್ಲೇಡ್‍’ ಚಿತ್ರಕ್ಕೆ ‘ದಿ ರೈಸ್ ಆಫ್ ಅಶೋಕ’ ಎಂಬ ಹೆಸರನ್ನು ಇಡಲಾಗಿದ್ದು, ಈ ಶೀರ್ಷಿಕೆಯಲ್ಲೇ ಚಿತ್ರ ಬಿಡುಗಡೆಯಾಗಲಿದೆ. ನಿಧನಕ್ಕೂ ಮೊದಲು ವಿನೋದ್ ದೊಂಡಾಳೆ ಶೇ.80ರಷ್ಟು ಚಿತ್ರೀಕರಣ ಮುಗಿಸಿದ್ದರಂತೆ. ಬಾಕಿ ಇರುವ ಚಿತ್ರವನ್ನು ಮನು ಶೇಡ್ಗಾರ್‍ ಮುಂದುವರೆಸುತ್ತಿದ್ದಾರೆ. ‘ಚಮಕ್’, ‘ಕ್ಷೇತ್ರಪತಿ’, ‘ಅವತಾರ ಪುರುಷ’ ಸೇರಿದಂತೆ ಒಂದಷ್ಟು ಚಿತ್ರಗಳಿಗೆ ಸಂಕಲನಕಾರರಾಗಿ ಕೆಲಸ ಮಾಡಿರುವ ಮನು ಶೇಡ್ಗಾರ್, ‘ದಿ ರೈಸ್ ಆಫ್ ಅಶೋಕ’ ಚಿತ್ರಕ್ಕೂ ಸಂಕಲನಕಾರರಾಗಿ ಕೆಲಸ ಮಾಡುತ್ತಿದ್ದು, ಅವರಿಗೆ ಚಿತ್ರದ ಬಗ್ಗೆ ಸಂಪೂರ್ಣ ಮಾಹಿತಿ ಇರುವುದರಿಂದ, ಚಿತ್ರದ ಉಳಿದ ಭಾಗದ ದೃಶ್ಯಗಳನ್ನು ನಿರ್ದೇಶಿಸುವ ಜವಾಬ್ದಾರಿಯನ್ನು ಅವರಿಗೆ ಹೊರಿಸಲಾಗಿದೆ.

ಫೆಬ್ರವರಿ 15ರಿಂದ ‘ದಿ ರೈಸ್ ಆಫ್ ಅಶೋಕ’ ಚಿತ್ರದ ಚಿತ್ರೀಕರಣ ಮತ್ತೆ ಪ್ರಾರಂಭವಾಗಲಿದ್ದು, ಈ ಚಿತ್ರವು ಕನ್ನಡದ ಜೊತೆಗೆ ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿದೆ. ವೃದ್ಧಿ ಕ್ರಿಯೇಷನ್ಸ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಬ್ಯಾನರ್ ನಡಿ ವರ್ಧನ್ ನರಹರಿ, ಜೈಷ್ಣವಿ ಮತ್ತು ನೀನಾಸಂ ಸತೀಶ್, ‘ರೈಸ್ ಆಫ್ ಅಶೋಕ’ ಚಿತ್ರವನ್ನು ಜೊತೆಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

‘ದಿ ರೈಸ್ ಆಫ್ ಅಶೋಕ’ ಚಿತ್ರದಲ್ಲಿ ಸತೀಶ್‍ ನೀನಾಸಂ ಜೊತೆಗೆ ಬಿ. ಸುರೇಶ, ಅಚ್ಯುತ್ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಮೈತ್ರೀಯಾ, ಯಶ್ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ. ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಪೂರ್ಣಚಂದ್ರ ತೇಜಸ್ವಿ ಸಂಗೀತವಿದೆ.

ಭೂಮಿಕಾ

Recent Posts

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

2 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

2 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

2 hours ago

ಮೂಗಿನ ನೇರಕ್ಕೆ ಇತಿಹಾಸವನ್ನು ತಿರುಚುವುದಿದೆಯಲ್ಲಾ….

‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…

2 hours ago

ಸಂವಿಧಾನ ನಮ್ಮ ಬಳಿ ಇದೆ, ಆದರೆ ಅದರ ಧ್ವನಿ ಎಲ್ಲಿದೆ?

ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…

2 hours ago