ಮನರಂಜನೆ

ಹೊಸ ಹೆಸರಿನಲ್ಲಿ ಬರಲಿದೆ ಸತೀಶ್‍ ನೀನಾಸಂ ಅಭಿನಯದ ‘ಅಶೋಕ ಬ್ಲೇಡ್‍’

ಸತೀಶ್ ‍ನೀನಾಸಂ ಅಭಿನಯದ ‘ಅಶೋಕ ಬ್ಲೇಡ್‍’ ನಿರ್ದೇಶಕ ವಿನೋದ್‍ ಧೋಂಡಾಳೆ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಚಿತ್ರವು ನಿಂತಿದೆ ಎಂಬ ಸುದ್ದಿ ಕೇಳಿಬಂದಿತ್ತು. ಆದರೆ, ಚಿತ್ರವು ನಿಂತಿಲ್ಲ. ‘ಅಶೋಕ ಬ್ಲೇಡ್‍’ ಇದೀಗ ‘ದಿ ರೈಸ್ ಆಫ್ ಅಶೋಕ’ ಮುಂದುವರೆದು ಬಿಡುಗಡೆಯಾಗಲಿದೆ.

ಎರಡೂವರೆ ವರ್ಷಗಳ ಹಿಂದೆ ‘ಅಶೋಕ ಬ್ಲೇಡ್‍’ ಚಿತ್ರ ಪ್ರಾರಂಭವಾಗಿತ್ತು. ಮೊದಲು ಒಂದು ಚಿತ್ರ ಎಂದು ಶುರುವಾಗಿದ್ದು, ನಂತರ ಎರಡು ಭಾಗಗಳಲ್ಲಿ ಬಿಡುಗಡೆ ಎಂದು ಹೇಳಲಾಯ್ತು. ಪ್ಯಾನ್‍ ಇಂಡಿಯಾ ಮಟ್ಟದಲ್ಲಿ ಚಿತ್ರ ಬಿಡುಗಡೆ ಆಗುತ್ತದೆ ಎಂಬ ಸುದ್ದಿಯೂ ಇತ್ತು. ಕಡಿಮೆ ಬಜೆಟ್‍ನಲ್ಲಿ ಶುರುವಾದ ಚಿತ್ರ, ಕೊನೆಗೆ ದೊಡ್ಡದಾಗುತ್ತಾ ಹೋಯಿತು. ಬಜೆಟ್ ಜಾಸ್ತಿಯಾದಂತೆ ಸಾಲ ಸಹ ಹೆಚ್ಚಿತು. ಇದೆಲ್ಲದರಿಂದ ವಿಚಲಿತಗೊಂಡ ನಿರ್ದೇಶಕ ಮತ್ತು ನಿರ್ಮಾಪಕರಲ್ಲೊಬ್ಬರಾದ ವಿನೋದ್‍ ಧೋಂಡಾಳೆ ಕಳೆದ ಜುಲೈನಲ್ಲಿ ಆತ್ಮಹತ್ಯೆ ಮಾಡಿಕೊಂಡರು. ಇನ್ನು, ಚಿತ್ರ ಪ್ರಾರಂಭವಾಗುವುದಿಲ್ಲ ಎಂಬ ಮಾತುಗಳು ಹರಿದಾಡುತ್ತಿರುವಾಗಲೇ ಚಿತ್ರ ಪುನಃ ಶುರುವಾಗುತ್ತಿರುವ ಸುದ್ದಿ ಇದೆ.

ಈ ಕುರಿತು ಗುರುವಾರ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಅಷ್ಟೇ ಅಲ್ಲ, ಚಿತ್ರದ ಮೋಷನ್‍ ಪೋಸ್ಟರ್‍ ಸಹ ಬಿಡುಗಡೆಯಾಗಿದೆ. ‘ಅಶೋಕ ಬ್ಲೇಡ್‍’ ಚಿತ್ರಕ್ಕೆ ‘ದಿ ರೈಸ್ ಆಫ್ ಅಶೋಕ’ ಎಂಬ ಹೆಸರನ್ನು ಇಡಲಾಗಿದ್ದು, ಈ ಶೀರ್ಷಿಕೆಯಲ್ಲೇ ಚಿತ್ರ ಬಿಡುಗಡೆಯಾಗಲಿದೆ. ನಿಧನಕ್ಕೂ ಮೊದಲು ವಿನೋದ್ ದೊಂಡಾಳೆ ಶೇ.80ರಷ್ಟು ಚಿತ್ರೀಕರಣ ಮುಗಿಸಿದ್ದರಂತೆ. ಬಾಕಿ ಇರುವ ಚಿತ್ರವನ್ನು ಮನು ಶೇಡ್ಗಾರ್‍ ಮುಂದುವರೆಸುತ್ತಿದ್ದಾರೆ. ‘ಚಮಕ್’, ‘ಕ್ಷೇತ್ರಪತಿ’, ‘ಅವತಾರ ಪುರುಷ’ ಸೇರಿದಂತೆ ಒಂದಷ್ಟು ಚಿತ್ರಗಳಿಗೆ ಸಂಕಲನಕಾರರಾಗಿ ಕೆಲಸ ಮಾಡಿರುವ ಮನು ಶೇಡ್ಗಾರ್, ‘ದಿ ರೈಸ್ ಆಫ್ ಅಶೋಕ’ ಚಿತ್ರಕ್ಕೂ ಸಂಕಲನಕಾರರಾಗಿ ಕೆಲಸ ಮಾಡುತ್ತಿದ್ದು, ಅವರಿಗೆ ಚಿತ್ರದ ಬಗ್ಗೆ ಸಂಪೂರ್ಣ ಮಾಹಿತಿ ಇರುವುದರಿಂದ, ಚಿತ್ರದ ಉಳಿದ ಭಾಗದ ದೃಶ್ಯಗಳನ್ನು ನಿರ್ದೇಶಿಸುವ ಜವಾಬ್ದಾರಿಯನ್ನು ಅವರಿಗೆ ಹೊರಿಸಲಾಗಿದೆ.

ಫೆಬ್ರವರಿ 15ರಿಂದ ‘ದಿ ರೈಸ್ ಆಫ್ ಅಶೋಕ’ ಚಿತ್ರದ ಚಿತ್ರೀಕರಣ ಮತ್ತೆ ಪ್ರಾರಂಭವಾಗಲಿದ್ದು, ಈ ಚಿತ್ರವು ಕನ್ನಡದ ಜೊತೆಗೆ ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿದೆ. ವೃದ್ಧಿ ಕ್ರಿಯೇಷನ್ಸ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಬ್ಯಾನರ್ ನಡಿ ವರ್ಧನ್ ನರಹರಿ, ಜೈಷ್ಣವಿ ಮತ್ತು ನೀನಾಸಂ ಸತೀಶ್, ‘ರೈಸ್ ಆಫ್ ಅಶೋಕ’ ಚಿತ್ರವನ್ನು ಜೊತೆಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

‘ದಿ ರೈಸ್ ಆಫ್ ಅಶೋಕ’ ಚಿತ್ರದಲ್ಲಿ ಸತೀಶ್‍ ನೀನಾಸಂ ಜೊತೆಗೆ ಬಿ. ಸುರೇಶ, ಅಚ್ಯುತ್ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಮೈತ್ರೀಯಾ, ಯಶ್ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ. ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಪೂರ್ಣಚಂದ್ರ ತೇಜಸ್ವಿ ಸಂಗೀತವಿದೆ.

ಭೂಮಿಕಾ

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

3 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

4 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

4 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

5 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

5 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

9 hours ago