ಮನರಂಜನೆ

ಹಿರಿಯ ನಿರ್ದೇಶಕ ಮುರುಳಿ ಮೋಹನ್‌ ನಿಧನ

ಬೆಂಗಳೂರು : ಸ್ಯಾಂಡಲ್‌ವುಡ್‌ನ ಘಟಾನುಘಟಿ ನಟರಿಗೆ ಆಕ್ಷನ್‌ ಕಟ್‌ ಹೇಳಿದ್ದ ಹಿರಿಯ ನಿರ್ದೇಶಕ ಎಸ್.ಮುರಳಿ ಮೋಹನ್ ನಿಧನರಾಗಿದ್ದಾರೆ.

ಅವರಿಗೆ 57 ವರ್ಷ ವಯಸ್ಸಾಗಿತ್ತು. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಕ್ರೇಜಿ ಸ್ಟಾರ್ ರವಿಚಂದ್ರನ್, ರಿಯಲ್ ಸ್ಟಾರ್ ಉಪೇಂದ್ರ ಮುಂತಾದ ಘಟಾನುಘಟಿ ನಟರಿಗೆ ಆ್ಯಕ್ಷನ್‌ ಕಟ್‌ ಹೇಳಿದ್ದ ಅವರು ಬುಧವಾರ ಬೆಂಗಳೂರಿನ ಜೆಸಿ ರೋಡ್ ಟ್ರಸ್ಟ್ ವೆಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

36 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ಕೆಲವು ಸಮಯಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕಿಡ್ನಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಐದಾರು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಈ ಹಿಂದೆ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೆ ಅನುದಾನದ ಅವಶ್ಯಕತೆಯಿದೆ ಎಂದು ಅವರು ಹೇಳಿಕೊಂಡಿದ್ದರು. ಈ ಶಸ್ತ್ರಚಿಕಿತ್ಸೆಗೆ 30-35 ಲಕ್ಷ ರೂ. ಬೇಕಾಗಿತ್ತು. ಸುದೀಪ್, ಉಪೇಂದ್ರ ಧನಸಹಾಯ ಮಾಡಿದ್ದರು. ಆದರೆ, ಇದೀಗ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ.

ಉಪೇಂದ್ರ ಜತೆಗೆ ʼಶ್ʼ, ʼಓಂʼ ಚಿತ್ರಗಳಲ್ಲಿ ಸಹನಿರ್ದೇಶಕನಾಗಿ ಕೆಲಸ ಮಾಡಿದ್ದ ಮುರಳಿ ಮೋಹನ್ ಬಳಿಕ ಉಪೇಂದ್ರ ನಟನೆಯ ʼನಾಗರಹಾವುʼ, ಶಿವ ರಾಜ್​ಕುಮಾರ್ ನಟನೆಯ ʼಸಂತʼ, ರವಿಚಂದ್ರನ್‌ ಅಭಿನಯದ ʼಮಲ್ಲಿಕಾರ್ಜುನʼ ಮುಂತಾದ ಚಿತ್ರಗಳಿಗೆ ಆ್ಯಕ್ಷನ್‌ ಕಟ್‌ ಹೇಳಿದ್ದರು.

ಬಹುಮುಖ ಪ್ರತಿಭೆ ಹೊಂದಿದ್ದ ಮುರಳಿ ಮೋಹನ್ ನಿರ್ದೇಶಕ ಮಾತ್ರವಲ್ಲದೆ ನಟ ಹಾಗೂ ಸಂಭಾಷಣೆಕಾರರೂ ಆಗಿದ್ದರು. ಸಾಕಷ್ಟು ಸಿನಿಮಾಗಳನ್ನು ನಿರ್ದೇಶಿಸಿ, ನಟಿಸಿ, ಸಂಭಾಷಣೆ ಬರೆದಿದ್ದರು. ಅವರು ‘ರಾಜ್’ ಚಿತ್ರದಲ್ಲಿ ಪುನೀತ್ ರಾಜ್​ಕುಮಾರ್ ಜತೆಗೆ ಅಭಿನಯಿಸಿ ಸೈ ಎನಿಸಿಕೊಂಡಿದ್ದರು.

ಈ ಹಿಂದೆ ಸಂದರ್ಶನವೊಂದರಲ್ಲಿ ಅವರು, ನನ್ನ ಆರೋಗ್ಯ ಸರಿಯಾಗಿಲ್ಲ. ಈ ಮೊದಲು ಡಯಾಲಿಸ್‌ ಮಾಡಿಸಿಕೊಳ್ಳುತ್ತಿದ್ದೆ. ಆದರೆ ಈಗ ಅದು ಟ್ರಾನ್ಸ್‌ಪ್ಲಾಂಟೇಶನ್ ಹಂತಕ್ಕೆ ಬಂದಿದೆ. ಈಗ ತಿಂಗಳಿಗೆ 30 ಸಾವಿರ ರೂ. ಖರ್ಚಾಗುತ್ತಿದೆ. ಹೊಸ ಕಿಡ್ನಿ ಹಾಕಿಸಿಕೊಳ್ಳಲು 30-35 ಲಕ್ಷ ರೂ. ಬೇಕು. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ನನ್ನಿಂದ ಅದು ಸಾಧ್ಯವಾಗುತ್ತಿಲ್ಲ ಎಂದಿದ್ದರು. ಇದೀಗ ಪ್ರತಿಭಾವಂತ ನಿರ್ದೇಶಕನ್ನು ಸ್ಯಾಂಡಲ್‌ವುಡ್‌ ಕಳೆದುಕೊಂಡಿದ್ದು, ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಫಲ ನೀಡಿದ ಮಾತುಕತೆ : ಹಾರ್ಮುಜ್ ಜಲಸಂಧಿ ದಾಟಿದ ತೈಲ ಟ್ಯಾಂಕರ್‌

ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…

18 mins ago

ವೈರಲ್‌ ಹುಡುಗಿ ʻಮೊನಾಲಿಸಾʼ ಮದುವೆಗೆ ತಂದೆ ವಿರೋಧಿಸಿದ್ದೇಕೆ….. ಯಾರಿ ಈ ಹುಡುಗ?

ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…

46 mins ago

32 ವರ್ಷಗಳ ನಂತರ ನಾಗರತ್ನಮ್ಮ ಸ್ಮಾರಕಕ್ಕೆ ಅಭಿವೃದ್ಧಿ ಭಾಗ್ಯ

ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…

1 hour ago

ದೇಶಾದ್ಯಂತ ಎಸ್ಮಾ ಜಾರಿ : ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು!

ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…

1 hour ago

ಸಫಾರಿಗೆ ಮೊಬೈಲ್‌ ನಿಷೇಧ ; ಪ್ರವಾಸಿಗರ ಬೇಸರ

ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…

3 hours ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

4 hours ago