ಮನರಂಜನೆ

ಹಿರಿಯ ನಿರ್ದೇಶಕ ಮುರುಳಿ ಮೋಹನ್‌ ನಿಧನ

ಬೆಂಗಳೂರು : ಸ್ಯಾಂಡಲ್‌ವುಡ್‌ನ ಘಟಾನುಘಟಿ ನಟರಿಗೆ ಆಕ್ಷನ್‌ ಕಟ್‌ ಹೇಳಿದ್ದ ಹಿರಿಯ ನಿರ್ದೇಶಕ ಎಸ್.ಮುರಳಿ ಮೋಹನ್ ನಿಧನರಾಗಿದ್ದಾರೆ.

ಅವರಿಗೆ 57 ವರ್ಷ ವಯಸ್ಸಾಗಿತ್ತು. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಕ್ರೇಜಿ ಸ್ಟಾರ್ ರವಿಚಂದ್ರನ್, ರಿಯಲ್ ಸ್ಟಾರ್ ಉಪೇಂದ್ರ ಮುಂತಾದ ಘಟಾನುಘಟಿ ನಟರಿಗೆ ಆ್ಯಕ್ಷನ್‌ ಕಟ್‌ ಹೇಳಿದ್ದ ಅವರು ಬುಧವಾರ ಬೆಂಗಳೂರಿನ ಜೆಸಿ ರೋಡ್ ಟ್ರಸ್ಟ್ ವೆಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

36 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ಕೆಲವು ಸಮಯಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕಿಡ್ನಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಐದಾರು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಈ ಹಿಂದೆ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೆ ಅನುದಾನದ ಅವಶ್ಯಕತೆಯಿದೆ ಎಂದು ಅವರು ಹೇಳಿಕೊಂಡಿದ್ದರು. ಈ ಶಸ್ತ್ರಚಿಕಿತ್ಸೆಗೆ 30-35 ಲಕ್ಷ ರೂ. ಬೇಕಾಗಿತ್ತು. ಸುದೀಪ್, ಉಪೇಂದ್ರ ಧನಸಹಾಯ ಮಾಡಿದ್ದರು. ಆದರೆ, ಇದೀಗ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ.

ಉಪೇಂದ್ರ ಜತೆಗೆ ʼಶ್ʼ, ʼಓಂʼ ಚಿತ್ರಗಳಲ್ಲಿ ಸಹನಿರ್ದೇಶಕನಾಗಿ ಕೆಲಸ ಮಾಡಿದ್ದ ಮುರಳಿ ಮೋಹನ್ ಬಳಿಕ ಉಪೇಂದ್ರ ನಟನೆಯ ʼನಾಗರಹಾವುʼ, ಶಿವ ರಾಜ್​ಕುಮಾರ್ ನಟನೆಯ ʼಸಂತʼ, ರವಿಚಂದ್ರನ್‌ ಅಭಿನಯದ ʼಮಲ್ಲಿಕಾರ್ಜುನʼ ಮುಂತಾದ ಚಿತ್ರಗಳಿಗೆ ಆ್ಯಕ್ಷನ್‌ ಕಟ್‌ ಹೇಳಿದ್ದರು.

ಬಹುಮುಖ ಪ್ರತಿಭೆ ಹೊಂದಿದ್ದ ಮುರಳಿ ಮೋಹನ್ ನಿರ್ದೇಶಕ ಮಾತ್ರವಲ್ಲದೆ ನಟ ಹಾಗೂ ಸಂಭಾಷಣೆಕಾರರೂ ಆಗಿದ್ದರು. ಸಾಕಷ್ಟು ಸಿನಿಮಾಗಳನ್ನು ನಿರ್ದೇಶಿಸಿ, ನಟಿಸಿ, ಸಂಭಾಷಣೆ ಬರೆದಿದ್ದರು. ಅವರು ‘ರಾಜ್’ ಚಿತ್ರದಲ್ಲಿ ಪುನೀತ್ ರಾಜ್​ಕುಮಾರ್ ಜತೆಗೆ ಅಭಿನಯಿಸಿ ಸೈ ಎನಿಸಿಕೊಂಡಿದ್ದರು.

ಈ ಹಿಂದೆ ಸಂದರ್ಶನವೊಂದರಲ್ಲಿ ಅವರು, ನನ್ನ ಆರೋಗ್ಯ ಸರಿಯಾಗಿಲ್ಲ. ಈ ಮೊದಲು ಡಯಾಲಿಸ್‌ ಮಾಡಿಸಿಕೊಳ್ಳುತ್ತಿದ್ದೆ. ಆದರೆ ಈಗ ಅದು ಟ್ರಾನ್ಸ್‌ಪ್ಲಾಂಟೇಶನ್ ಹಂತಕ್ಕೆ ಬಂದಿದೆ. ಈಗ ತಿಂಗಳಿಗೆ 30 ಸಾವಿರ ರೂ. ಖರ್ಚಾಗುತ್ತಿದೆ. ಹೊಸ ಕಿಡ್ನಿ ಹಾಕಿಸಿಕೊಳ್ಳಲು 30-35 ಲಕ್ಷ ರೂ. ಬೇಕು. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ನನ್ನಿಂದ ಅದು ಸಾಧ್ಯವಾಗುತ್ತಿಲ್ಲ ಎಂದಿದ್ದರು. ಇದೀಗ ಪ್ರತಿಭಾವಂತ ನಿರ್ದೇಶಕನ್ನು ಸ್ಯಾಂಡಲ್‌ವುಡ್‌ ಕಳೆದುಕೊಂಡಿದ್ದು, ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…

8 mins ago

ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಗಣಿಗ ರವಿಕುಮಾರ್‌

ಮಂಡ್ಯ: ವಿಜಯ್‌ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…

1 hour ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

6 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

6 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

6 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

6 hours ago