ಮನರಂಜನೆ

ಕನ್ನಡದ ಹುಡುಗನ ಪ್ರೀತಿಯಲ್ಲಿ ಬಿದ್ದ ಮರಾಠಿ ಹುಡುಗಿ

ಕನ್ನಡ ಕಿರುತೆರೆಯಲ್ಲಿ ‘ಅಗ್ನಿಸಾಕ್ಷಿ’, ‘ನಾಗಿಣಿ’, ‘ಕಮಲಿ’ ಮುಂತಾದ ಧಾರಾವಾಹಿಗಳನ್ನು ನಿರ್ದೇಶಿಸಿರುವ ಹಯವದನ, ಇದೀಗ ಹಿರಿತೆರೆಗೆ ಕಾಲಿಟ್ಟಿದ್ದಾರೆ. ಅವರೀಗ ಸದ್ದಿಲ್ಲದೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದು, ಈ ಚಿತ್ರವು ಸದ್ಯದಲ್ಲೇ ಬಿಡುಗಡೆ ಆಗಲಿದೆ.

ಈ ಹಿಂದೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದ ‘ಹುಲಿಯಾ’ ಎಂಬ ಹಾಡಿ ಬಿಡುಗಡೆಯಾಗಿತ್ತು. ಇದೀಗ, ‘ಜಾಣಮರಿ’ ಎಂಬ ಚಿತ್ರದ ಎರಡನೇ ಹಾಡು ಬಿಡುಗಡೆಯಾಗಿದೆ. ಜಂಕಾರ್‍ ಮ್ಯೂಸಿಕ್‌ ಯೂಟ್ಯೂಬ್‌ ಚಾನಲ್‍ನಲ್ಲಿ ‘ಜಾಣಮರಿ’ ಗೀತೆ ಬಿಡುಗಡೆ ಮಾಡಲಾಗಿದೆ. ಪ್ರಮೋದ್‌ ಮರವಂತೆ ಸಾಹಿತ್ಯ ರಚಿಸಿರುವ ಈ ಹಾಡಿಗೆ ರಕ್ಷಿತಾ ಸುರೇಶ್‌ ಹಾಗೂ ವಿಶಾಕ್‌ ನಾಗಲಾಪುರ ಧ್ವನಿಯಾಗಿದ್ದಾರೆ. ಶಿಯೋಮ್‌ ಸಂಗೀತ ಸಂಯೋಜಿಸಿದ್ದಾರೆ.

‘ಜಾಣಮರಿ’ ಹಾಡಿನಲ್ಲಿ ಅಂಜನ್ ನಾಗೇಂದ್ರ ಹಾಗೂ ವೆನ್ಯಾ ರೈ ಜೋಡಿಯಾಗಿ ಮಿಂಚಿದ್ದಾರೆ. ಕನ್ನಡ ಹುಡುಗನಾಗಿ ಅಂಜನ್‌ ಕಾಣಿಸಿಕೊಂಡರೆ, ವೆನ್ಯಾ ರೈ ಮರಾಠಿ ಹುಡುಗಿಯಾಗಿ ಅಭಿನಯಿಸಿದ್ದಾರೆ. ಮಹಾರಾಷ್ಟ್ರದ ಪಂಢರಪುರದಲ್ಲಿ ಇಡೀ ಹಾಡನ್ನು ಚಿತ್ರೀಕರಣ ಮಾಡಿರುವುದು ವಿಶೇಷ. ನಾಯಕ ಹಾಗೂ ನಾಯಕಿ ನಡುವಿನ ಸುಮಧುರ ಪ್ರೇಮಗೀತೆ ಇದಾಗಿದ್ದು, ಸಂಗೀತ ಪ್ರಿಯರನ್ನು ಗಮನ ಸೆಳೆದಿದೆ.

‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದಲ್ಲಿ ಸಂಜನಾ ದಾಸ್ ಕೂಡ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಬಿರಾದರ್, ಶರತ್ ಲೋಹಿತಾಶ್ವ, ದಾನಪ್ಪ, ಸ್ವಾತಿ, ದಿನೇಶ್ ಮಂಗಳೂರು, ಲಕ್ಷ್ಮೀ ನಾಡಗೌಡ ಮುಂತಾದವರು ನಟಿಸಿರುವ ಈ ಚಿತ್ರದಲ್ಲಿ ಅಪ್ಪ-ಮಗನ ಬಾಂಧವ್ಯದ ಎಳೆ ಇದೆ. ಈ ಚಿತ್ರಕ್ಕೆ ಬೆಂಗಳೂರಿನಿಂದ ಕಾಶ್ಮೀರದವರೆಗೂ ಚಿತ್ರೀಕರಣ ಮಾಡಲಾಗಿದ್ದು, ಹಲವು ರಾಜ್ಯಗಳಲ್ಲಿ ಚಿತ್ರೀಕರಣ ಮಾಡಿರುವುದು ವಿಶೇಷ.

‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರವನ್ನು ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್ ಮತ್ತು ಕೃಷ್ಣಛಾಯಾ ಚಿತ್ರ ಸಂಸ್ಥೆಗಳ ಮೂಲಕ ಪವನ್ ಸಿಮಿಕೇರಿ ಹಾಗೂ ಸಿಂಧು ಹಯವದನ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಶಿವ ಪ್ರಸಾದ್ ಸಂಗೀತ, ನಟರಾಜ್ ಮದ್ದಾಲ ಛಾಯಾಗ್ರಹಣವಿದೆ.

ಭೂಮಿಕಾ

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

10 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

10 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

11 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

11 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

16 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

16 hours ago