ರಮೇಶ್ ಅರವಿಂದ್ ಮತ್ತು ಗಣೇಶ್ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್ಸ್ಪೆಕ್ಟರ್ ವಿಕ್ರಂ’, ‘ಮಾನ್ಸೂನ್ ರಾಗ’, ‘ರಂಗನಾಯಕ’ ಮುಂತಾದ ಚಿತ್ರಗಳನ್ನು ನಿರ್ಮಿಸಿದ್ದ ವಿಖ್ಯಾತ್, ಮೊದಲ ಬಾರಿಗೆ ನಿರ್ದೇಶಿಸುತ್ತಿರುವ ಹೊಸ ಚಿತ್ರದಲ್ಲಿ ರಮೇಶ್ ಮತ್ತು ಗಣೇಶ್ ಇಬ್ಬರೂ ಒಟ್ಟಿಗೆ ನಟಿಸುತ್ತಿದ್ದಾರೆ ಎಂಬುದು ಸುದ್ದಿಯಾಗಿತ್ತು. ಆದರೆ, ಯಾವಾಗ ಎಂಬ ಪ್ರಶ್ನೆಗೆ ಉತ್ತರವಿರಲಿಲ್ಲ.
ಈಗ ಕೊನೆಗೂ ಉತ್ತರ ಸಿಕ್ಕಿದೆ. ಗೌರಿ ಹಬ್ಬದ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ಗೌಡನಪಾಳ್ಯದಲ್ಲಿರುವ ಶ್ರೀನಿವಾಸ ಚಿತ್ರಮಂದಿರದಲ್ಲಿ ಚಿತ್ರದ ಮುಹೂರ್ತವಾಗಿದೆ. ಈ ಸಂದರ್ಭದಲ್ಲಿ ಚಿತ್ರದ ಟೀಸರ್ ಸಹ ಬಿಡುಗಡೆಯಾಗಿದ್ದು, ಚಿತ್ರಕ್ಕೆ ‘ಯುವರ್ಸ್ ಸಿನ್ಸಿಯರ್ಲಿ ರಾಮ್’ ಎಂಬ ಹೆಸರನ್ನು ಇಡಲಾಗಿದೆ. ಅಂದ ಹಾಗೆ, ಈ ಚಿತ್ರವನ್ನು ರಾಯಲ ಪಿಕ್ಚರ್ಸ್ ಸಂಸ್ಥೆಯಡಿ ಸತ್ಯ ರಾಯಲ ನಿರ್ಮಿಸುತ್ತಿದ್ದು, ವಿಖ್ಯಾತ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಮುಹೂರ್ತ ಮತ್ತು ಟೀಸರ್ ಬಿಡುಗಡೆ ನಂತರ ಮಾತನಾಡಿದ ರಮೇಶ್, ‘ವಿಖ್ಯಾತ್ ಪರಿಚಯ ಆಗಿದ್ದು ಒಂಬತ್ತು ವರ್ಷಗಳ ಹಿಂದೆ. ‘ಪುಷ್ಪಕ ವಿಮಾನ’ ಕಥೆಯನ್ನು ಮೊದಲು ಹೇಳಲು ಬಂದರು. ಅಂದಿನಿಂದ ಇಂದಿನವರೆಗೂ ನೋಡಿಕೊಂಡು ಬರುತ್ತಿದ್ದೇನೆ ಇವನಿಗೆ ಇರುವ ಸೌಂದರ್ಯ ಪ್ರಜ್ಞೆ ತುಂಬ ಚೆನ್ನಾಗಿದೆ. ಅವರು ನಿರ್ಮಾಣ ಮಾಡಿದ ಚಿತ್ರಗಳ ಪೋಸ್ಟರ್, ಟೀಸರ್ಗಳಲ್ಲಿ ಆ ಸೂಕ್ಷ್ಮತೆಯನ್ನು ಗಮನಿಸಬಹುದು. ಇದು ನಿಮ್ಮ ಮೊದಲ ಪಯಣ. ಸತ್ಯ ಮತ್ತು ವಿಖ್ಯಾತ್ ಇಬ್ಬರಲ್ಲೂ ಬಹಳ ಉತ್ಸಾಹವಿದೆ’ ಎಂದರು.
ಗಣೇಶ್ ಮಾತನಾಡಿ, ‘ಈ ಟೀಸರ್ ನೋಡಿದರೆ ಬೇರೆ ರೀತಿ ಫೀಲ್ ಇದೆ. ಬೇರೆ ಪ್ರಪಂಚಕ್ಕೆ ಕರೆದುಕೊಂಡು ಹೋಗುವಂತಹ ಕಥೆ ಇಲ್ಲಿದೆ. ಇದರ ನೂರಷ್ಟು ಸಿನಿಮಾದಲ್ಲಿ ಇರುತ್ತದೆ. ಪ್ರತಿ ದೃಶ್ಯ ಒಂದು ಹೊಸ ಅನುಭವ ಕೊಡುತ್ತದೆ’ ಎಂದರು.
‘Your’s Sincerely ರಾಮ್ ಚಿತ್ರಕ್ಕೆ ‘ಮಫ್ತಿ’ ಖ್ಯಾತಿಯ ನವೀನ್ ಕುಮಾರ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಅನೂಪ್ ಸೀಳಿನ್ ಸಂಗೀತವಿದ್ದು, ಆನಂದ್ ಆಡಿಯೊದಲ್ಲಿ ಟೀಸರ್ ಬಿಡುಗಡೆ ಆಗಿದೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…