ಮನರಂಜನೆ

ಲೈಂಗಿಕ ಕಿರುಕುಳ ಪ್ರಕರಣ : ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ನೋಟಿಸ್‌

ಬೆಂಗಳೂರು : ಉದ್ಯಮಿಯೋರ್ವ ಸ್ಯಾಂಡಲ್‌ವುಡ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣದಡಿ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಸಂತ್ರಸ್ತ ನಟಿ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಅರವಿಂದ್ ರೆಡ್ಡಿ ವಿರುದ್ಧ ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಈ ಪ್ರಕರಣ ಗೋವಿಂದರಾಜನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿತ್ತು. ಅದರಂತೆ ಆರೋಪಿಯನ್ನು ಬಂಧಿಸಲಾಗಿತ್ತು. ಬಳಿಕ 46 ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸದ್ಯ ಈ ಸಂಬಂಧ ಪೊಲೀಸರು ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ನೋಟಿಸ್ ನೀಡಿದ್ದಾರೆ.

ನಟಿ ಈಗಾಗಲೇ ದೂರಿನಲ್ಲಿ, ಅರವಿಂದ್ ರೆಡ್ಡಿ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಎಷ್ಟೇ ದೂರ ಸರಿದ್ರೂ, ಹಿಂದೆ ಬಿದ್ದು ನನ್ನ ಜೊತೆಗೆ ಸಲುಗೆಯಿಂದ ಇರುವಂತೆ ಒತ್ತಾಯ ಮಾಡ್ತಿದ್ದಾರೆ. ನನ್ನ ಕೆಲ ಫೋಟೋಗಳು ಮತ್ತು ನನ್ನ ಬಗ್ಗೆ ಸ್ನೇಹಿತರು ಕುಟುಂಬದವರ ಬಳಿ ಕೆಟ್ಟದಾಗಿ ಹೇಳ್ಕೊಂಡು ಬರ್ತಿದ್ದಾರೆ. ಅಷ್ಟೇ ಅಲ್ಲದೇ ಲೈಂಗಿಕವಾಗಿ ಕಿರುಕುಳ ನೀಡ್ತಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನು ಓದಿ: ಬೆಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕಿಗೆ ಉಪನ್ಯಾಸಕರಿಂದಲೇ ಲೈಂಗಿಕ ಕಿರುಕುಳ

ಇನ್ನೂ ಆರೋಪಿ ಅರವಿಂದ್ ರೆಡ್ಡಿ, ನಟಿ ಮತ್ತು ನಾನು ಎರಡು ವರ್ಷದಿಂದ ಲಿವಿ ಇನ್ ರಿಲೇಶನ್‌ಶಿಪ್‌ನಲ್ಲಿ ಇದ್ದೆವು. ಈ ವೇಳೆ ಆಕೆಗೆ ಐಷಾರಾಮಿ ಕಾರು, ಸೈಟ್, ಮನೆ ಸೇರಿದಂತೆ ಐದು ಕೋಟಿ ರೂ.ಯಷ್ಟು ಖರ್ಚು ಮಾಡಿದ್ದೀನಿ. ಲಿವಿಂಗ್‌ನಿಂದ ಮದುವೆ ಆಗೋಣ ಅಂದಿದ್ದಕ್ಕೆ ನನ್ನ ವಿರುದ್ಧ ಆರೋಪ ಮಾಡ್ತಿದ್ದಾಳೆ. ಆಕೆ ಬೇರೊಬ್ಬ ವ್ಯಕ್ತಿಯ ಜೊತೆಗೆ ಓಡಾಡ್ತಿದ್ದಾಳೆ ಎಂದು ತಿಳಿಸಿದ್ದರು. ಪೊಲೀಸರು ಆರೋಪಿ ಯಾವಾಗಿನಿಂದ ಪರಿಚಯ, ಯಾವ ರೀತಿ ಕಿರುಕುಳ ನೀಡಿದ್ದಾನೆ, ಅರವಿಂದ್ ರೆಡ್ಡಿ ಎಷ್ಟು ಹಣ ನೀಡಿದ್ದಾರೆ ಎನ್ನುವ ಕುರಿತು ವಿಚಾರಣೆ ನಡೆಸಲಿದ್ದಾರೆ. ಈವರೆಗೆ ನಟಿ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸೂಕ್ತ ದಾಖಲೆ ನೀಡಿಲ್ಲ. ಹೀಗಾಗಿ ಅದಕ್ಕೆ ಪೂರಕವಾದ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

ಏನಿದು ಪ್ರಕರಣ?
ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಅರವಿಂದ್ ರೆಡ್ಡಿ ಮಹಾರಾಜ ಬಳ್ಳಾರಿ ಟಸ್ಕರ್ಸ್ ಕ್ರಿಕೆಟ್ ತಂಡದ ಮಾಲೀಕನಾಗಿದ್ದ. ಜೊತೆಗೆ ಎವಿಆರ್ ಗ್ರೂಪ್ ಮಾಲೀಕನಾಗಿದ್ದ. ಅಲ್ಲದೇ ಚಲನಚಿತ್ರ ನಿರ್ಮಾಪಕ ಆಗಿರುವ ಅರವಿಂದ್ ರೆಡ್ಡಿ ಸಿನಿಮಾ ಇಂಡಸ್ಟ್ರಿಯಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿದ್ದ. ಚಲನಚಿತ್ರ ನಟ, ನಟಿಯರಿಗಾಗಿಯೇ ಹಲವು ಕ್ರಿಕೆಟ್ ಪಂದ್ಯಾವಳಿ ಕೂಡ ಆಯೋಜಿಸಿದ್ದ. ಅರವಿಂದ್ ರೆಡ್ಡಿ ಒಡೆತನದ ಎವಿಆರ್ ಗ್ರೂಪ್ ದುಬೈ, ಶ್ರೀಲಂಕಾ ಸೇರಿದಂತೆ ಹಲವು ಕಡೆ ನಡೆದ ಟೂರ್ನಮೆಂಟ್‌ಗೆ ಸ್ಪಾನ್ಸರ್ ಮಾಡಿತ್ತು. 2021ರಲ್ಲಿ ನಟಿ ಹಾಗೂ ಅರವಿಂದ್‌ ಪರಿಚಯವಾಗಿತ್ತು. ಅದಾದ ಕೆಲವು ವರ್ಷಗಳ ಬಳಿಕ ಆತ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಲು ಆರಂಭಿಸಿದ್ದ. ಈ ಕುರಿತು ನಟಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

8 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

8 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

19 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

19 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

19 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

19 hours ago