ಮೈಸೂರು: ಬಾಲಿವುಡ್ನಿಂದ ಸ್ಯಾಂಡಲ್ವುಡ್ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್ ನಟರಿಗೆ ಕೊರಿಯೋಗ್ರಾಫರ್ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್ ವಿರುದ್ಧ ಲೈಂಗಿಕ ಆರೋಪದಡಿ ದೂರು ದಾಖಲಾಗಿದೆ.
ಹೌದು.. ಕೋರಿಯಾಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ 21 ವರ್ಷದ ಯುವತಿ ಅನೇಕ ಬಾರಿ ತನಗೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿ ಸೈಬರಾಬಾದ್ನ ರಾಯದುರ್ಗ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಅಭಿನಯ ಚಕ್ರವರ್ತಿ ಸುದೀಪ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ತೆಲುಗು ನಟರಾದ ಅಲ್ಲು ಅರ್ಜುನ್, ರಾಮ ಚರಣ್ ತೇಜ, ಜ್ಯೂನಿಯರ್ ಎನ್ಟಿಆರ್ ಸೇರಿದಂತೆ ಅನೇಕ ದಕ್ಷಿಣ ಭಾರತದ ಸ್ಟಾರ್ ನಟರಿಗೆ ನೃತ್ಯ ನಿರ್ದೇಶನ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ದೂರಿನಲ್ಲೀರುವುದೇನು…
ಸಂತ್ರಸ್ಥ ಯುವತಿಯೂ, ಅನೇಕ ಸಿನಿಮಾಗಳಲ್ಲಿ ಜಾನಿ ಅವರೊಂದಿಗೆ ಕೆಲಸ ಮಾಡಿಕೊಂಡಿರುವುದಾಗಿ ಹೇಳಿದ್ದು, ಕಳೆದ ಕೆಲವು ತಿಂಗಳಿಂದ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಮುಂಬೈ, ಚೆನ್ನೈ ಹಾಗೂ ಹೈದರಾಬಾದ್ ಸೇರಿದಂತೆ ಇನ್ನಿತರ ವಿವಿಧ ಸ್ಥಳಗಳಲ್ಲಿ ಜೊತೆಯಾಗಿಯೇ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಹಲವು ಬಾರಿ ಹಲ್ಲೆ ನಡೆಸಿರುವುದಾಗಿ ದೂರಿದ್ದಾರೆ.
ಅಲ್ಲದೆ, ಸಂತ್ರಸ್ಥೆಯೂ ಹೈದರಾಬಾದ್ನ ನರಸಿಂಗ್ಯಲ್ಲಿರುವ ತನ್ನ ಸ್ವಂತ ಮನೆಯಲ್ಲಿ ಜಾನಿ ಹಲವು ಬಾರಿ ತನ್ನನ್ನು ನಿಂದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ರಾಯದುರ್ಗ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನಿ ಮಾಸ್ಟರ್ ವಿರುದ್ದ ಭಾರತೀಯ ದಂಡ ಸಂಹಿತೆ 376 ಪ್ರಕಾರ ಆತ್ಯಾಚಾರ, ಕ್ರಿಮಿನಲ್ ಬೆದರಿಕೆ(506) ಹಾಗೂ ಸ್ವಯಂ ಪ್ರೇತರಿತವಾಗಿ ಅಪಮಾನ ಉಂಟು ಮಾಡುವುದು (323)ರ ಕಲಂ (2) ಮತ್ತು (n) ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…