ಮನರಂಜನೆ

ಗಡಿನಾಡ ಪ್ರೇಮಕಥೆಗೆ ಶರಣ್, ಧನಂಜಯ್, ನವೀನ್‍ ಬೆಂಬಲ

ತರುಣ್‍ ಸುಧೀರ್ ನಿರ್ಮಾಣದ ‘ಏಳುಮಲೆ’ ಚಿತ್ರವು ಇದೇ ಸೆ.05ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಧನಂಜಯ್‍, ನವೀನ್‍ ಶಂಕರ್ ಮತ್ತು ಶರಣ್‍ ವಿಶೇಷ ಅತಿಥಿಗಳಾಗಿ ಬಂದು ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದಾರೆ.

ಈ ಚಿತ್ರದ ನಿಜವಾದ ಹೀರೋ ತರುಣ್ ಎಂದ ಶರಣ್‍, ‘ಅವರು ಒಂದು ಸಿನಿಮಾದ ಆಯ್ಕೆ ಹೇಗಿದೆ ಅನ್ನೋದಕ್ಕೆ ನನ್ನ ಜರ್ನಿ ಸಾಕ್ಷಿ. ಅವರು ನನ್ನ ಸಿನಿಮಾಗಳ ಕಥೆ ಆಯ್ಕೆ ಮಾಡುತ್ತಾರೆ. ‘ಏಳುಮಲೆ’ ಟ್ರೇಲರ್ ನೋಡಿದರೆ ಸಿನಿಮಾ ನೋಡಲೇ ಬೇಕು ಎನಿಸುತ್ತದೆ. ಇದು ಕಂಟೆಂಟ್ ಸಿನಿಮಾ. ಈ ಚಿತ್ರ ದೊಡ್ಡ ಹಿಟ್ ಆಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ತರಹದ ಪ್ರೇಮಕಥೆ ನೋಡದೆ ಬಹಳ ದಿನಗಳೇ ಆಗಿದ್ದವು ಎಂದ ಧನಂಜಯ್‍, ‘ಈ ತಂಡದಲ್ಲಿ ಪ್ರಾಮಾಣಿಕತೆ ಎದ್ದು ಕಾಣಿಸುತ್ತಿದೆ. ಆ ಪ್ರಾಮಾಣಿಕತೆಯೇ ಈ ಸಿನಿಮಾ ಗೆಲ್ಲಿಸುತ್ತದೆ ಎಂಬ ನಂಬಿಕೆ ಇದೆ. ಸಿನಿಮಾವನ್ನೇ ನಂಬಿಕೆಕೊಂಡು ಸಿನಿಮಾದಿಂದ ದುಡಿದು ಮತ್ತೆ ಸಿನಿಮಾ ಮಾಡುವುದು ಸವಾಲು. ಅದಕ್ಕಾಗಿ ಪ್ಯಾಶನ್‍, ರಿಸ್ಕ್ ತೆಗೆದುಕೊಳ್ಳಬೇಕು. ಅದನ್ನು ತರುಣ್ ಮಾಡುತ್ತಿದ್ದಾರೆ’ ಎಂದರು.

ಚಿತ್ರದ ನಿರ್ಮಾಪಕ ತರುಣ್ ಸುಧೀರ್ ಮಾತನಾಡಿ, ‘ಒಬ್ಬ ನಿರ್ದೇಶಕನಾಗಿ ನನಗೆ ಏನು ಸಂಭಾವನೆ ಬರುತ್ತದೆ ಅದನ್ನು ಇಟ್ಕೊಂಡು ಸಿನಿಮಾ ಮಾಡುತ್ತೇನೆ. ಅದಕ್ಕೆ ಅಟ್ಲಾಂಟಾ ನಾಗೇಂದ್ರ ಅವರು ನೈತಿಕ ಬೆಂಬಲವಾಗಿ ನಿಲ್ಲುತ್ತಾರೆ.‌ ತುಂಬಾ ಶ್ರಮ ಹಾಕಿ ಸಿನಿಮಾ ಮಾಡಿದ್ದೇವೆ. ಎಲ್ಲರೂ ಪ್ರೀತಿಯಿಂದ ಈ ಚಿತ್ರ ಮಾಡಿದ್ದಾರೆ. ಇದು ಪುನೀತ್ ಸಿನಿಮಾ. ಇದು ಅವನ ಪ್ರಾಮಾಣಿಕತೆ. ‘ಏಳುಮಲೆ’ ಪ್ರೀತಿಯೇ ಪರಮ ಶ್ರೇಷ್ಠ ಎಂದು ಹೇಳುತ್ತದೆ. ಇದನ್ನು ನಾವು ಥ್ರಿಲ್ಲರ್ ಅಂಶಗಳ ಮೂಲಕ ಹೇಳುತ್ತಿದ್ದೇವೆ. ಈ ಚಿತ್ರ ನಿರಾಶೆ ಮಾಡುವುದಿಲ್ಲ’ ಎಂದರು.

‘ಏಳುಮಲೆ’ ಚಿತ್ರಕ್ಕೆ ಪುನೀತ್ ರಂಗಸ್ವಾಮಿ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ರಕ್ಷಿತಾ ಸಹೋದರ ರಾಣಾ ನಾಯಕನಾಗಿ, ‘ಮಹಾನಟಿ’ ಖ್ಯಾತಿಯ ಪ್ರಿಯಾಂಕಾ ಆಚಾರ್ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಡಿ.ಇಮ್ಮಾನ್ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷ: ಇನ್ನೂ ಚೇತರಿಸಿಕೊಳ್ಳದ ಪಾಕ್‌

ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷವಾಗಿದೆ.…

29 mins ago

ಡಿಕೆಶಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರೋದು ನಿಜ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…

1 hour ago

ಮೈಸೂರಿನಲ್ಲಿ ಮುಂದುವರಿದ ಕಾಡುಪ್ರಾಣಿಗಳ ಉಪಟಳ

ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…

2 hours ago

ಓದುಗರ ಪತ್ರ: ಚಿನ್ನದ ಹೆಸರಿನಲ್ಲಾಗುವ ವಂಚನೆಯನ್ನು ತಡೆಗಟ್ಟಿ

ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…

3 hours ago

ಓದುಗರ ಪತ್ರ: ವಿಜಯ್ ಉತ್ತಮ ಆಡಳಿತ ನೀಡಲಿ

ತಮಿಳುನಾಡಿನ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ ಜೋಸೆಫ್ ವಿಜಯ್ ಅವರು ಕೇವಲ ಎರಡು ವರ್ಷಗಳ ಹಿಂದೆ ರಾಜಕೀಯ ಪಕ್ಷ…

3 hours ago

ಓದುಗರ ಪತ್ರ: ಖಾಸಗಿ ಅಂಗಡಿಗಳ ಮಾಲೀಕರಿಂದ ರಸ್ತೆ ಅತಿಕ್ರಮಣ

ಮೈಸೂರು ನಗರದ ಅಶೋಕ ರಸ್ತೆ, ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತರಿ ರಸ್ತೆ, ಶಿವರಾಂ ಪೇಟೆಯ ಹಲವಾರು ಕಡೆಗಳಲ್ಲಿ…

3 hours ago