ಮನರಂಜನೆ

‘ಟಕೀಲಾ’ ಹಾಡಿಗೆ ಧ್ವನಿಯಾದ ಶರಣ್‍; ಸದ್ಯದಲ್ಲೇ ಹಾಡು ಬಿಡುಗಡೆ

ಶರಣ್‍ ಬರೀ ನಟರಾಗಿಯಷ್ಟೇ ಅಲ್ಲ, ಗಾಯಕರಾಗಿಯೂ ಜನಪ್ರಿಯರು. ‘ರಾಜ ರಾಜೇಂದ್ರ’ ಚಿತ್ರದ ‘ಮಧ್ಯಾಹ್ನ ಕನಸಿನಲ್ಲಿ …’, ‘ವಜ್ರಕಾಯ’ ಚಿತ್ರದ ‘ತೂಕಟ ಗಡಬಡ …’, ‘ಬುಲೆಟ್‍ ಬಸ್ಯ’ ಚಿತ್ರದ ‘ಕಾಲ್‍ ಕೆಜಿ ಕಳ್ಳೇಕಾಯ್‍ …’, ‘ದನ ಕಾಯೋನು’ ಚಿತ್ರದ ಹಾಲು ಕುಡಿದ ಮಕ್ಳೇ …’ ಮುಂತಾದ ಹಾಡುಗಳನ್ನು ಅವರು ಹಾಡಿದ್ದಾರೆ.

ಈಗ ಬಹಳ ದಿನಗಳ ನಂತರ ಹಾಡೊಂದನ್ನು ಅವರು ಹಾಡಿದ್ದಾರೆ. ಧರ್ಮ ಕೀರ್ತಿರಾಜ್‍ ಅಭಿನಯದ ‘ಟಕೀಲಾ’ ಚಿತ್ರದ ಶೀರ್ಷಿಕೆ ಗೀತೆಯಾದ ‘ಟಕೀಲಾ ಟಕೀಲಾ …’ ಎಂಬ ಹಾಡನ್ನು ಹಾಡಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ. ಈ ಹಾಡಿಗೆ ವಿ. ನಾಗೇಂದ್ರ ಪ್ರಸಾದ್‍ ಅವರು ಸಾಹಿತ್ಯ ರಚಿಸಿದ್ದಾರೆ.

‘ಟಕೀಲಾ’ ಸುಮಾರು ಮೂರು ವರ್ಷಗಳ ಹಿಂದೆ ಪ್ರಾರಂಭವಾದ ಚಿತ್ರ. ಈ ಹಿಂದೆ ‘ವಿದ್ಯಾರ್ಥಿ’, ‘ಮುನಿಯ’, ‘ಜನ್‍ ಧನ್‍’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದ ಮರಡಿಹಳ್ಳಿ ನಾಗಚಂದ್ರ ಈ ಚಿತ್ರವನ್ನು ಶ್ರೀ ಸಿದ್ದಿವಿನಾಯಕ ಫಿಲಂಸ್ ಬ್ಯಾನರ್‍ ಅಡಿ ನಿರ್ಮಿಸಿದರೆ, ‘ಮೀಸೆ ಚಿಗುರಿದಾಗ’, ‘ಹೂಂ ಅಂತೀಯ ಉಹೂಂ ಅಂತೀಯ’ ಚಿತ್ರಗಳನ್ನು ನಿರ್ದೇಶಿಸಿರುವ ಹಿರಿಯ ಸ್ಥಿರಚಿತ್ರ ಛಾಯಾಗ್ರಾಹಕ ಪ್ರವೀಣ್‍ ನಾಯಕ್‍, ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ:- ನಿರಂಜನ್‌ ಸುಧೀಂದ್ರ ಜೊತೆಗೆ ‘ನೆನಪಿರಲಿ’ ಪ್ರೇಮ್; ʼಸ್ಪಾರ್ಕ್‌ʼಗೆ ಹೊಸ ಸೇರ್ಪಡೆ

ಈಗಾಗಲೇ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ. ಶರಣ್‍ ಹಾಡಿರುವ ಹಾಡಿನ ಮೂಲಕ ಚಿತ್ರದ ಪ್ರಚಾರದ ಕೆಲಸಗಳು ಶುರುವಾಗಲಿವೆ.

‘ಟಕೀಲಾ’ ಚಿತ್ರದಲ್ಲಿ ಧರ್ಮ ಕೀರ್ತಿರಾಜ್‍ ಮತ್ತು ನಿಖಿತಾ ಸ್ವಾಮಿ ನಾಯಕ-ನಾಯಕಿಯಾಗಿ ಅಭಿನಯಿಸಿದರೆ, ಮಿಕ್ಕಂತೆ ನಾಗೇಂದ್ರ ಅರಸ್, ಕೋಟೆ ಪ್ರಭಾಕರ್, ಸುಮನ್‌ ಶರ್ಮ, ಅರುಣ್ ಮೇಸ್ಟ್ರು ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಪಿ.ಕೆ.ಹೆಚ್. ದಾಸ್ ಛಾಯಾಗ್ರಹಣ ಮತ್ತು ಟಾಪ್‌ಸ್ಟಾರ್ ರೇಣು ಅವರ ಸಂಗೀತವಿದೆ.

ಈ ಚಿತ್ರಕ್ಕಾಗಿ ಬೆಂಗಳೂರು, ದೇವರಾಯನದುರ್ಗ, ಸಕಲೇಶಪುರ ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

3 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

3 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

3 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

3 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

3 hours ago