ಮನರಂಜನೆ

‘ಮರ್ಯಾದೆ ಪ್ರಶ್ನೆ’ಯ ಮಧ್ಯಮ ವರ್ಗದ ಆಂಥೆಮ್‍ಗೆ ಶರಣ್‍ ಧ್ವನಿ

ಸಖತ್‍ ಸ್ಟುಡಿಯೋಸ್‍ನಡಿ ಆರ್.ಜೆ. ಪ್ರದೀಪ ನಿರ್ಮಿಸಿರುವ ‘ಮರ್ಯಾದೆ ಪ್ರಶ್ನೆ’ ಚಿತ್ರವು ನವೆಂಬರ್‍ 22ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಅದಕ್ಕೂ ಮೊದಲು ಚಿತ್ರದ ಮೊದಲ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ.

ಈ ಮೊದಲ ಹಾಡನ್ನು ಪ್ರಮೋದ್ ಮರವಂತೆ ಬರೆದಿದ್ದು, ನಟ ಶರಣ್ ಹಾಡಿದ್ದಾರೆ. ಅರ್ಜುನ್ ರಾಮು ಈ ಹಾಡನ್ನು ಜಾನಪದ ಶೈಲಿಯಲ್ಲಿ ಸಂಯೋಜಿಸಿದ್ದಾರೆ. ಈ ಹಾಡಿನಲ್ಲಿ ನಟರ ಪಾತ್ರದ ಪರಿಚಯದ ಜೊತೆಗೆ ಮಧ್ಯಮ ವರ್ಗದ ಸಮಾಜವನ್ನು ಪರಿಚಯಿಸಲಾಗುತ್ತದೆ. ಈ ಹಾಡು ಸಕ್ಕತ್ ಸ್ಟುಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗಿದ್ದು, ಹಾಡಿಗೆ ಒಳ್ಳೆಯ ಪ್ರತಿಕ್ರಿಯೆಗಳು ಸಿಗುತ್ತಿವೆ.

ಈ ಹಿಂದೆ, ಸಂಚಾರಿ ವಿಜಯ್‍ ಅಭಿನಯದ ‘ಪುಕ್ಸಟ್ಟೆ ಲೈಫು’ ಚಿತ್ರವನ್ನು ನಿರ್ದೇಶನ ಮಾಡಿದ್ದ ನಾಗರಾಜ ಸೋಮಯಾಜಿ, ‘ಮರ್ಯಾದೆ ಪ್ರಶ್ನೆ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಪಾತ್ರಗಳನ್ನು ಪರಿಚಯಿಸುವ ಪೋಸ್ಟರ್ ಬಿಡುಗಡೆಯಾಗಿದ್ದು, ರಾಕೇಶ್ ಅಡಿಗ ಕಾರ್ಯಕರ್ತನಾಗಿ, ಸುನಿಲ್ ರಾವ್ ಡೆಲಿವರಿ ಬಾಯ್‍ ಆಗಿ, ಪೂರ್ಣಚಂದ್ರ ಮೈಸೂರು ಕ್ಯಾಬ್ ಡ್ರೈವರ್ ಆಗಿ, ತೇಜು ಬೆಳ್ವಾಡಿ ಸೇಲ್ಸ್ ಗರ್ಲ್ ಆಗಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಮರ್ಯಾದೆ ಪ್ರಶ್ನೆ’ ಚಿತ್ರದಲ್ಲಿ ರಾಕೇಶ್‍ ಅಡಿಗ, ಸುನೀಲ್‍ ರಾವ್‍, ಪೂರ್ಣಚಂದ್ರ ಮೈಸೂರು, ತೇಜು ಬೆಳವಾಡಿ, ಶೈನ್‍ ಶೆಟ್ಟಿ, ಪ್ರಭು ಮುಂಡ್ಕೂರು, ಟಿ.ಎಸ್‍. ನಾಗಭರಣ, ಶ್ವೇತಾ ಪ್ರಸಾದ್‍, ಪ್ರಕಾಶ್‍ ತುಮ್ಮಿನಾಡು, ಮಂಜು ಪಾವಗಡ, ದಯಾಳ್‍ ಪದ್ಮನಾಭನ್‍, ರೇಖಾ ಕೂಡ್ಲಿಗಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಈ ಚಿತ್ರವನ್ನು ಸಖತ್‍ ಸ್ಟುಡಿಯೋದಡಿ ಶ್ವೇತಾ ಆರ್ ಪ್ರಸಾದ್ ಮತ್ತು ವಿದ್ಯಾ ಗಾಂಧಿ ರಾಜನ್‍ ನಿರ್ಮಿಸಿದ್ದು, ಸಂದೀಪ್‍ ವಳ್ಳೂರಿ ಅವರ ಛಾಯಾಗ್ರಹಣ ಮತ್ತು ಅರ್ಜುನ್‍ ರಾಮು ಸಂಗೀತ ಈ ಚಿತ್ರಕ್ಕಿದೆ.

ಭೂಮಿಕಾ

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

5 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

9 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago